ಮಹಾರಾಷ್ಟ್ರದಲ್ಲಿ ಅಸ್ಸಾಂ ಮೂಲದ ಟ್ಯಾಟೂ ಕಲಾವಿದೆಯ ಹತ್ಯೆ, ಗೆಳೆಯ ನಾಪತ್ತೆ

ಮಹಾರಾಷ್ಟ್ರದಲ್ಲಿ ಅಸ್ಸಾಂ ಮೂಲದ ಟ್ಯಾಟೂ ಕಲಾವಿದೆಯ ಹತ್ಯೆ ನಡೆದಿದೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಮುರ್ತಿಜಾಪುರ್ ಪಟ್ಟಣದಲ್ಲಿ ಅಸ್ಸಾಂ ಮೂಲದ 26 ವರ್ಷದ ಯುವತಿಯ ಶವ ಪತ್ತೆಯಾಗಿದ್ದು ತಲೆಯ ಮೇಲೆ ಹಲವು ಗಾಯಗಳ ಗುರುತು ಕೂಡ ಇವೆ.

ಮಹಾರಾಷ್ಟ್ರದಲ್ಲಿ ಅಸ್ಸಾಂ ಮೂಲದ ಟ್ಯಾಟೂ ಕಲಾವಿದೆಯ ಹತ್ಯೆ, ಗೆಳೆಯ ನಾಪತ್ತೆ
ಟ್ಯಾಟೂImage Credit source: baylor College
Follow us
|

Updated on: Jul 25, 2024 | 3:40 PM

ಮಹಾರಾಷ್ಟ್ರದಲ್ಲಿ ಅಸ್ಸಾಂ ಮೂಲದ ಟ್ಯಾಟೂ ಕಲಾವಿದೆಯ ಹತ್ಯೆ ನಡೆದಿದೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಮುರ್ತಿಜಾಪುರ್ ಪಟ್ಟಣದಲ್ಲಿ ಅಸ್ಸಾಂ ಮೂಲದ 26 ವರ್ಷದ ಯುವತಿಯ ಶವ ಪತ್ತೆಯಾಗಿದ್ದು ತಲೆಯ ಮೇಲೆ ಹಲವು ಗಾಯಗಳ ಗುರುತು ಕೂಡ ಇವೆ.

ಸಾಮಾಜಿಕ ಜಾಲತಾಣಗಳ ಮೂಲಕ ಸ್ನೇಹ ಬೆಳೆಸಿದ್ದ ಆಕೆಯ ಪ್ರಿಯಕರನೇ ಆಕೆಯನ್ನು ಹತ್ಯೆಗೈದಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಆಕೆಯ ಗೆಳೆಯ ಪರಾರಿಯಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಸತ್ರಸ್ತೆ ಶಾಂತಿಕ್ರಿಯಾ ಕಶ್ಯಪ್ ಅಲಿಯಾಸ್ ಕೋಯೆಲ್ ಶವ ಜುಲೈ 24 ರಂದು ಮೂರ್ತಿಜಾಪುರದ ಪ್ರತೀಕ್ ನಗರಲ್ಲಿರುವ ಗೆಳೆಯ ಕುನಾಲ್ ಅಲಿಯಾಸ್ ಸನ್ನಿ ಶೃಂಗಾರೆ (30) ವಾಸಿಸುತ್ತಿದ್ದ ಮನೆಯಲ್ಲಿ ಪತ್ತೆಯಾಗಿದೆ. ಚೂಪಾದ ಆಯುಧದಿಂದ ತಲೆಗೆ ತಿವಿದಿರುವ ಅನೇಕ ಗುರುತುಗಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೃಂಗಾರೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಆತ ಪರಾರಿಯಾಗಿದ್ದಾನೆ.

ಅಸ್ಸಾಂ ಮೂಲದ ಕಶ್ಯಪ್, ಕಳೆದ ಆರು ವರ್ಷಗಳಿಂದ ತನ್ನ ತಾಯಿಯೊಂದಿಗೆ ದೆಹಲಿಯಲ್ಲಿ ನೆಲೆಸಿದ್ದರು ಮತ್ತು ಟ್ಯಾಟೂ ಕಲೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಕಳೆದ ಕೆಲವು ತಿಂಗಳುಗಳಿಂದ ಆಕೆ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಟ್ಯಾಟೂ ಹಾಕಿಸಿಕೊಳ್ಳುತ್ತೀರಾ?; ಈ ವಿಷಯಗಳ ಬಗ್ಗೆ ಎಚ್ಚರವಿರಲಿ

ಕಶ್ಯಪ್ ಮತ್ತು ಶೃಂಗಾರೆ ಸಾಮಾಜಿಕ ಮಾಧ್ಯಮದ ಮೂಲಕ ಸ್ನೇಹಿತರಾಗಿದ್ದರು. ಇತ್ತೀಚೆಗೆ ಅವರು ಕಶ್ಯಪ್ ಅವರನ್ನು ಮೂರ್ತಿಜಾಪುರ ಪಟ್ಟಣಕ್ಕೆ ಕರೆದು ಆಕೆಗೆ ಕೆಲಸ ಕೊಡಿಸುವ ಭರವಸೆ ನೀಡಿದ್ದರು. ಆರೋಪಿಗೆ ಮದ್ಯಪಾನ ಮಾಡುವ ಅಭ್ಯಾಸವಿತ್ತು. ಜುಲೈ 23ರಂದು ರಾತ್ರಿ ಕಶ್ಯಪ್ ಹಾಗೂ ಆತನ ನಡುವೆ ಜಗಳ ನಡೆದು ಕೋಪದ ಭರದಲ್ಲಿ ಹರಿತವಾದ ಆಯುಧದಿಂದ ಆಕೆಯ ತಲೆಗೆ ಹೊಡೆದಿರಬಹುದು ಎಂದು ಅಂದಾಜಿಸಲಾಗುತ್ತಿದೆ.

ಮರುದಿನ ಬೆಳಗ್ಗೆ ಆತನ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿ ಶೃಂಗಾರೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಹತ್ಯೆಯ ನಂತರ ಶೃಂಗಾರೆ ತಲೆಮರೆಸಿಕೊಂಡಿದ್ದು, ಆತನನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ, ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 103 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್