AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Crisis: ಮೊದಲ ಬಾರಿ ಗುವಾಹಟಿ ಹೋಟೆಲ್​ನಿಂದ ಹೊರಬಂದ ರೆಬೆಲ್ ಶಾಸಕರು; ಶಿವಸೈನಿಕರಿಗೆ ಪತ್ರ ಬರೆದ ಠಾಕ್ರೆ

ಗುವಾಹಟಿ ಹೋಟೆಲ್​​ನಲ್ಲಿರುವ ರೆಬೆಲ್ ಶಾಸಕರಿಗೆ ಭಾವನಾತ್ಮಕ ಪತ್ರ ಬರೆದಿರುವ ಉದ್ಧವ್ ಠಾಕ್ರೆ ಶಿವಸೇನೆಯ ಬಂಡಾಯ ಶಾಸಕರಿಗೆ 'ಮನೆಗೆ ಹಿಂತಿರುಗಿ' ಎಂದು ಮನವಿ ಮಾಡಿದ್ದಾರೆ. ನಾನು ನಿಮ್ಮೊಂದಿಗೆ ಮಾತನಾಡಲು ಸಿದ್ಧ ಎಂದು ಹೇಳಿದ್ದಾರೆ.

Maharashtra Crisis: ಮೊದಲ ಬಾರಿ ಗುವಾಹಟಿ ಹೋಟೆಲ್​ನಿಂದ ಹೊರಬಂದ ರೆಬೆಲ್ ಶಾಸಕರು; ಶಿವಸೈನಿಕರಿಗೆ ಪತ್ರ ಬರೆದ ಠಾಕ್ರೆ
ಗುವಾಹಟಿಯಲ್ಲಿ ರೆಬೆಲ್ ಶಾಸಕರುImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 29, 2022 | 9:13 AM

ಗುವಾಹಟಿ: ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದೆ. ರೆಬೆಲ್ ಶಾಸಕರ ತಂಡದ ನಾಯಕ ಏಕನಾಥ್ ಶಿಂಧೆ (Eknath Shinde) ಶೀಘ್ರದಲ್ಲೇ ಮುಂಬೈಗೆ ಬರುವುದಾಗಿ ನಿನ್ನೆ ಹೇಳಿದ್ದರು. ಇಂದು ಬೆಳಗ್ಗೆ ಅವರು 1 ವಾರದ ಬಳಿಕ ಗುವಾಹಟಿಯ ಹೋಟೆಲ್​ನಿಂದ ಹೊರಗೆ ಕಾಣಿಸಿಕೊಂಡಿದ್ದಾರೆ. ಕಳೆದ 1 ವಾರದಿಂದ ಫೈವ್ ಸ್ಟಾರ್​ ಹೋಟೆಲ್​ನಲ್ಲಿ ಉಳಿದುಕೊಂಡಿದ್ದ ರೆಬೆಲ್ ಶಾಸಕರು ಏಕನಾಥ್ ಶಿಂಧೆ ಅವರೊಂದಿಗೆ ಗುವಾಹಟಿಯ ಕಾಮಾಕ್ಯ ದೇವಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ದೇವೇಂದ್ರ ಫಡ್ನವಿಸ್ ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಒತ್ತಾಯಿಸಿ ಭೇಟಿಯಾದ ಬೆನ್ನಲ್ಲೇ ಬಿಜೆಪಿಯೊಂದಿಗೆ ಸಮಾಲೋಚನೆಗಾಗಿ ಬಂಡಾಯ ಶಾಸಕರು ಇಂದು ಮುಂಬೈ ಅಥವಾ ದೆಹಲಿಗೆ ತೆರಳಬಹುದು ಎಂದು ಮೂಲಗಳು ಹೇಳಿವೆ. ಇನ್ನೊಂದೆಡೆ, ಗುರುವಾರ ಅಂದರೆ ಜೂ. 30ಕ್ಕೆ ವಿಶ್ವಾಸ ಮತ ಯಾಚನೆಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಸಿಎಂ ಉದ್ಧವ್ ಠಾಕ್ರೆಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಸಿಎಂ ಉದ್ಧವ್ ಠಾಕ್ರೆ ನೇೃತ್ವತ್ವದ ಮೈತ್ರಿ ಸರ್ಕಾರದ ಭವಿಷ್ಯ ಗುರುವಾಗ ಬೆಳಗ್ಗೆ 11 ಗಂಟೆಗೆ ನಿರ್ಧಾರವಾಗಲಿದೆ.

ರೆಬೆಲ್ ಶಾಸಕರಿಗೆ ಸಿಎಂ ಪತ್ರ: ರಾಜ್ಯಪಾಲರು ನಾಳೆ ವಿಶ್ವಾಸ ಮತಯಾಚನೆಗೆ ಸೂಚನೆ ನೀಡಿರುವುದರಿಂದ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಬಹುಮತ ಸಾಬೀತುಪಡಿಸಲು ಬೇಕಾದಷ್ಟು ಬೆಂಬಲ ಇಲ್ಲದ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಪತನವಾಗುವ ಸಾಧ್ಯತೆಯೇ ಹೆಚ್ಚಾಗಿದೆ. ಈ ನಡುವೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರೆಬೆಲ್ ಶಾಸಕರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಗುವಾಹಟಿ ಹೋಟೆಲ್​​ನಲ್ಲಿರುವ ರೆಬೆಲ್ ಶಾಸಕರಿಗೆ ಭಾವನಾತ್ಮಕ ಪತ್ರ ಬರೆದಿರುವ ಉದ್ಧವ್ ಠಾಕ್ರೆ ಶಿವಸೇನೆಯ ಬಂಡಾಯ ಶಾಸಕರಿಗೆ ‘ಮನೆಗೆ ಹಿಂತಿರುಗಿ’ ಎಂದು ಮನವಿ ಮಾಡಿದ್ದಾರೆ. ನಾನು ನಿಮ್ಮೊಂದಿಗೆ ಮಾತನಾಡಲು ಸಿದ್ಧ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
Maharashtra Crisis: ಮಹಾರಾಷ್ಟ್ರದಲ್ಲಿ ರೆಬೆಲ್ ಶಾಸಕರಿಗೆ ಏನೂ ಕೆಲಸವಿಲ್ಲ, ರೆಸಾರ್ಟ್​ನಲ್ಲೇ ವಿಶ್ರಾಂತಿ ಪಡೆಯಬಹುದು; ಸಂಜಯ್ ರಾವತ್ ವ್ಯಂಗ್ಯ
Image
Maharashtra Crisis: ಉದ್ಧವ್ ಠಾಕ್ರೆ ಸರ್ಕಾರಕ್ಕೆ ಬಂಡಾಯದ ಬಿಸಿ; ಶಿಂಧೆ ಬಣದಿಂದ ಅವಿಶ್ವಾಸ ನಿರ್ಣಯ ಮಂಡನೆ?
Image
ನಾನು ಸತ್ಯವನ್ನೇ ಹೇಳಿದ್ದೇನೆ, ಬಂಡಾಯ ಶಾಸಕರನನ್ನು ‘ಜೀವಂತ ಶವ’ ಎಂದ ಹೇಳಿಕೆ ಸಮರ್ಥಿಸಿಕೊಂಡ ರಾವುತ್

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಸಿಎಂ ಉದ್ಧವ್‌ ಠಾಕ್ರೆಗೆ ಬಹುಮತ ಸಾಬೀತುಪಡಿಸಲು ಮುಹೂರ್ತ ಫಿಕ್ಸ್​

ಕೆಲವು ಶಾಸಕರನ್ನು ಬಲವಂತವಾಗಿ ಹೋಟೆಲ್​ನಲ್ಲಿ ಇರಿಸಲಾಗಿತ್ತು. ಅವರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ನಾನು ನಿಮ್ಮ ಪಕ್ಷದ ಅಧ್ಯಕ್ಷ ಮತ್ತು ಶಿವಸೇನೆ ಕುಟುಂಬದ ಮುಖ್ಯಸ್ಥ. ಹಾಗಾಗಿ, ನಿಮ್ಮ ಅಹವಾಲು ಆಲಿಸಲು ಸಿದ್ಧನಿದ್ದೇನೆ. ದಯವಿಟ್ಟು ವಾಪಾಸ್ ಬಂದು ನನ್ನನ್ನು ವೈಯಕ್ತಿಕವಾಗಿ ಭೇಟಿ ಮಾಡಿ. ನೀವು ಇಲ್ಲಿಗೆ ಬಂದರೆ ಖಂಡಿತವಾಗಿಯೂ ನಿಮ್ಮ ಸಮಸ್ಯೆಗೆ ಪರಿಹಾರ ನೀಡುತ್ತೇನೆ. ನಿಮ್ಮ ಕುಟುಂಬಸ್ಥರು ನಿಮ್ಮ ಬಗ್ಗೆ ಚಿಂತಿತರಾಗಿದ್ದಾರೆ. ದಯವಿಟ್ಟು ತಪ್ಪು ಜನರ ಬಲೆಗೆ ಬೀಳಬೇಡಿ. ಶಿವಸೇನೆ ನೀಡಿದ ಗೌರವವನ್ನು ಯಾರೂ ನಿಮಗೆ ನೀಡುವುದಿಲ್ಲ ಎಂದು ಪತ್ರ ಬರೆದಿದ್ದಾರೆ.

ಹಾಗೇ, ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ನಮ್ಮ ಬಳಿ 50 ಶಾಸಕರು ಇದ್ದಾರೆ ಎಂದು ಹೇಳಿದ್ದಾರೆ. ಇಲ್ಲಿರುವ ಯಾವುದೇ ಶಾಸಕರನ್ನು ನಿಮಗೆ ಹತ್ತಿಕ್ಕಲು ಸಾಧ್ಯವಿಲ್ಲ. ಇಲ್ಲಿ ಎಲ್ಲರೂ ಸಂತೋಷವಾಗಿದ್ದಾರೆ, 50 ಶಾಸಕರು ನಮ್ಮೊಂದಿಗಿದ್ದಾರೆ ಅಂತ ಉದ್ಧವ್ ಠಾಕ್ರೆ ಬಣಕ್ಕೆ ತಿರುಗೇಟು ನೀಡಿದ್ದಾರೆ. ನಾವು ಶಿವಸೇನೆಯಲ್ಲಿ ಇದ್ದೇವೆ, ಶಿವಸೇನೆಯನ್ನು ನಾವೇ ಮುನ್ನಡೆಸುತ್ತೇವೆ. ಈ ವಿಚಾರದಲ್ಲಿ ಯಾರಿಗೂ ಅನುಮಾನ ಬೇಡ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.

ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ