AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದೊಂದು ಸಣ್ಣ ಕಲಹ, ಆಳಂದಿಯಲ್ಲಿ ಭಕ್ತರ ಮೇಲೆ ಲಾಠಿ ಚಾರ್ಜ್​ ಮಾಡಿಲ್ಲ: ದೇವೇಂದ್ರ ಫಡ್ನವಿಸ್

ಪುಣೆಯ ಆಳಂದಿಯಲ್ಲಿ ಭಕ್ತರು ಹಾಗೂ ಪೊಲೀಸರ ನಡುವೆ ಸಣ್ಣ ಪ್ರಮಾಣದ ಜಗಳ ನಡೆದಿದೆ, ಆದರೆ ಭಕ್ತರ ಮೇಲೆ ಲಾಠಿಚಾರ್ಜ್​ ಮಾಡಿಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಹೇಳಿದ್ದಾರೆ.

ಅದೊಂದು ಸಣ್ಣ ಕಲಹ, ಆಳಂದಿಯಲ್ಲಿ ಭಕ್ತರ ಮೇಲೆ ಲಾಠಿ ಚಾರ್ಜ್​ ಮಾಡಿಲ್ಲ: ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್Image Credit source: Deccan Herald
ನಯನಾ ರಾಜೀವ್
|

Updated on: Jun 12, 2023 | 10:22 AM

Share

ಪುಣೆಯ ಆಳಂದಿಯಲ್ಲಿ ಭಕ್ತರು ಹಾಗೂ ಪೊಲೀಸರ ನಡುವೆ ಸಣ್ಣ ಪ್ರಮಾಣದ ಜಗಳ ನಡೆದಿದೆ, ಆದರೆ ಭಕ್ತರ ಮೇಲೆ ಲಾಠಿಚಾರ್ಜ್​ ಮಾಡಿಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಹೇಳಿದ್ದಾರೆ. ನಾಗ್ಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ವಾರಕರಿ ಸಮುದಾಯದ ಮೇಲೆ ಯಾವುದೇ ಲಾಠಿಚಾರ್ಜ್​ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ವಾಕರಿಗಳ ಮೇಲೆ ಲಾಠಿ ಚಾರ್ಜ್​ ಮಾಡಿದ್ದು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದ್ದಾರೆ. ಆಳಂದಿ ಪಟ್ಟಣದ ಸಂತ ಜ್ಞಾನೇಶ್ವರ ಸಮಾಧಿ ದೇವಸ್ಥಾನಕ್ಕೆ ಭಕ್ತರು ಪ್ರವೇಶಿಸಲು ಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: Maharashtra: ಮಹಾರಾಷ್ಟ್ರದ ಅಮಲ್ನೇರ್​ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕರ್ಫ್ಯೂ ಜಾರಿ, 31 ಜನರ ಬಂಧನ

ಮಹಾರಾಷ್ಟ್ರದ ಗೃಹ ಸಚಿವರ ಜವಾಬ್ದಾರಿ ನಿಭಾಯಿಸುತ್ತಿರುವ ಫಡ್ನವಿಸ್ ಮಾತನಾಡಿ, ಕಳೆದ ವರ್ಷ ಇದೇ ಸ್ಥಳದಲ್ಲಿ ಕಾಳ್ತುಳಿತದಂತಹ ಪರಿಸ್ಥಿತಿಯಿಂದ ನಾವು ಪಾಠ ಕಲಿತಿದ್ದೇವೆ, ಪ್ರವೇಶ ಪಾಸ್​ಗಳನ್ನು ನೀಡಲು ಪ್ರಯತ್ನಿಸಿದ್ದೇವೆ. ಯಾತ್ರೆಯಲ್ಲಿ ಭಾಗವಹಿಸುವ ಪ್ರತಿ ಗುಂಪಿಗೆ 75 ಪಾಸ್​ಗಳನ್ನು ವಿತರಿಸಲು ನಿರ್ಧರಿಸಲಾಯಿತು, ಸುಮಾರು 400-500 ಯುವಕರು ಯಾತ್ರೆಗೆ ಸೇರುವುದಾಗಿ ಪಟ್ಟು ಹಿಡಿದಿದ್ದು ಪ್ರವೇಶಕ್ಕೆ ಹಾಕಿರುವ ನಿಯಮಗಳನ್ನು ಪಾಲಿಸಿಲ್ಲ ಎಂದಿದ್ದಾರೆ.

ಬ್ಯಾರಿಕೇಡ್​ಗಳನ್ನು ಮುರಿದರು ಪೊಲೀಸರು ಅವರನ್ನು ತಡೆಯಲು ಪ್ರಯತ್ನಿಸಿದರು, ಈ ಸಂದರ್ಭದಲ್ಲಿ ಕೆಲವು ಪೊಲೀಸರು ಗಾಯಗೊಂಡರು, ಪರಿಸ್ಥಿತಿ ನಿಯಂತ್ರಣದಲ್ಲಿದೆ, ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡುತ್ತೇನೆ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ವಾರಕರಿ ಸಮುದಾಯ ಮತ್ತು ಜನರ ಸುರಕ್ಷತೆ ಎರಡು ಕೂಡ ಮುಖ್ಯ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು