AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Crisis: ಮಹಾರಾಷ್ಟ್ರ ಹೈಡ್ರಾಮಾ; 16 ರೆಬೆಲ್ ಶಾಸಕರಿಗೆ ಇಂದು ನೋಟಿಸ್ ನೀಡ್ತಾರಾ ಡೆಪ್ಯುಟಿ ಸ್ಪೀಕರ್?

ಕರ್ನಾಟಕದ ಮಾದರಿಯಲ್ಲೇ ಶಿವಸೇನೆಯ ಶಾಸಕರನ್ನು ಅನರ್ಹಗೊಳಿಸುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಇಂದು 16 ಶಾಸಕರ ವಿರುದ್ಧ ಡೆಪ್ಯುಟಿ ಸ್ಪೀಕರ್​ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

Maharashtra Crisis: ಮಹಾರಾಷ್ಟ್ರ ಹೈಡ್ರಾಮಾ; 16 ರೆಬೆಲ್ ಶಾಸಕರಿಗೆ ಇಂದು ನೋಟಿಸ್ ನೀಡ್ತಾರಾ ಡೆಪ್ಯುಟಿ ಸ್ಪೀಕರ್?
ಮಹಾರಾಷ್ಟ್ರದ ರೆಬೆಲ್ ಶಾಸಕರು
TV9 Web
| Edited By: |

Updated on:Jun 25, 2022 | 9:00 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ಇಂದು 16 ಶಾಸಕರ (16 Rebel MLAs) ವಿರುದ್ಧ ಡೆಪ್ಯುಟಿ ಸ್ಪೀಕರ್​ ಕ್ರಮ ಕೈಗೊಳ್ಳಲಿದ್ದಾರೆ. ಉಪಾಧ್ಯಕ್ಷ ನರಹರಿ ಜೀರವಾಲೆ 16 ಶಾಸಕರಿಗೆ ನೋಟಿಸ್ ಜಾರಿ ಮಾಡಿ, ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಕೇವಲ ಒಂದು ದಿನ ಸಮಯ ನೀಡಲಿರುವ ಡೆಪ್ಯುಟಿ ಸ್ಪೀಕರ್ ಅವರ ಉತ್ತರದ ಆಧಾರದಲ್ಲೇ ಶಾಸಕರ ಅನರ್ಹಗೊಳಿಸುವ ಸಾಧ್ಯತೆಯಿದೆ. ಕರ್ನಾಟಕದ ಮಾದರಿಯಲ್ಲೇ ಶಿವಸೇನೆಯ ಶಾಸಕರನ್ನು ಅನರ್ಹಗೊಳಿಸುವ ಸಾಧ್ಯತೆಯಿದೆ. ನಿನ್ನೆ ಮಹಾರಾಷ್ಟ್ರ (Maharashtra) ಎಜಿ ಜೊತೆಗೆ ಚರ್ಚಿಸಿರುವ ನರಹರಿ ಕಾನೂನು ತಜ್ಞರ ಜೊತೆಯೂ ಸುದೀರ್ಘ ಮಾತುಕತೆ ನಡೆಸಿದ್ದಾರೆ.

ಶಿವಸೇನೆ ಪಕ್ಷದ‌ ಮೇಲೆ ಹಿಡಿತಪಡೆದುಕೊಳ್ಳಲು ಉದ್ದವ್ ಠಾಕ್ರೆ ಕಸರತ್ತು ನಡೆಸಿದ್ದಾರೆ. ಇಂದು ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದ ಉದ್ದವ್ ಠಾಕ್ರೆ ಈ ಮೂಲಕ ಪಕ್ಷ ತಮ್ಮಲ್ಲೇ ಉಳಿಸಿಕೊಳ್ಳಲು ಯತ್ನಿಸಲಿದ್ದಾರೆ. ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಪಕ್ಷದ ಹೆಸರು, ಚಿನ್ಹೆ ಸೇರಿದಂತೆ ಯಾವುದನ್ನೂ ಬಿಟ್ಟಕೊಡದಂತೆ ತಂತ್ರ ರೂಪಿಸಲಾಗಿದೆ. ಇಂದು ಸಂಜೆ ಯುವ ಶಿವಸೈನಿಕರ ಜೊತೆ ಆದಿತ್ಯ ಠಾಕ್ರೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಂಡಾಯ ಶಾಸಕರ ವಿರುದ್ದ ಹೋರಾಟಕ್ಕೆ ತಂತ್ರ ರೂಪಿಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ಏಕನಾಥ್ ಶಿಂಧೆ ಮತ್ತು ಇತರ 38 ಶಾಸಕರು ಗುವಾಹಟಿಯ ಹೋಟೆಲ್‌ನಲ್ಲಿ ಮೊಕ್ಕಾಂ ಹೂಡಿರುವ ಬಂಡಾಯವನ್ನು ಹತ್ತಿಕ್ಕಲು ಇನ್ನಿಲ್ಲದ ಪ್ರಯತ್ನ ಪಡುತ್ತಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಪಕ್ಷಾಂತರಿಗಳನ್ನು ‘ಬೆನ್ನಿಗೆ ಚೂರಿ ಹಾಕುವವರು’ ಎಂದು ಕರೆದಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ, ಕರ್ನಾಟಕದ ಬಳಿಕ ಮಹಾರಾಷ್ಟ್ರದಲ್ಲಿ ಅಪರೇಷನ್ ಕಮಲ; ಶಿವಸೇನಾ ವಿರುದ್ಧ ಬಂಡಾಯ ಎದ್ದ 22 ಶಾಸಕರು

ಈಗಾಗಲೇ ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನು ತೊರೆದಿರುವ ಉದ್ಧವ್ ಠಾಕ್ರೆ, ರೆಬೆಲ್ ಶಿವಸೇನಾ ನಾಯಕರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಇಂದು ಶಿವಸೇನೆ ತನ್ನ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆಯನ್ನು ಮಧ್ಯಾಹ್ನ 1 ಗಂಟೆಗೆ ದಾದರ್‌ನಲ್ಲಿರುವ ಸೇನಾ ಭವನದಲ್ಲಿ ನಡೆಸಲಿದೆ. ಉದ್ಧವ್ ಠಾಕ್ರೆ ಅವರೇ ಈ ಸಭೆಯ ಅಧ್ಯಕ್ಷತೆ ವಹಿಸುವ ನಿರೀಕ್ಷೆಯಿದೆ.

ಮಹಾರಾಷ್ಟ್ರ ರಾಜ್ಯದ 5 ಪ್ರಮುಖ ಬೆಳವಣಿಗೆಗಳು ಇಲ್ಲಿವೆ:

1. ಶಿವಸೇನೆಯು ಬಿರ್ಲಾ ಮಾತೋಶ್ರೀ ಸಭಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಕರೆದಿದೆ. ಅಲ್ಲಿ ಮಹಾರಾಷ್ಟ್ರದ ಸಚಿವ ಆದಿತ್ಯ ಠಾಕ್ರೆ ಅವರು ಶಿವಸೈನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

2. ಏಕನಾಥ್ ಶಿಂಧೆ ಸೇರಿದಂತೆ ಬಂಡಾಯ ಶಾಸಕರ ಅನರ್ಹತೆಯನ್ನು ಖಚಿತಪಡಿಸಿಕೊಳ್ಳಲು ಶಿವಸೇನೆ ತನ್ನ ಎಲ್ಲಾ ಪ್ರಯತ್ನಗಳಲ್ಲಿ ತೊಡಗಿದೆ. ಬಂಡಾಯಗಾರರನ್ನು ಅನರ್ಹಗೊಳಿಸುವಂತೆ ಶಿವಸೇನೆ ಪಕ್ಷವು ಉಪಸಭಾಪತಿಗೆ ಮನವಿ ಮಾಡಿದೆ. 12 ಶಾಸಕರು ಮತ್ತು ಈಗ ಇನ್ನೂ 4 ಶಾಸಕರನ್ನು ಅನರ್ಹಗೊಳಿಸುವಂತೆ ನಾವು ನಿನ್ನೆ ಉಪಸಭಾಪತಿಗೆ ಮನವಿ ಮಾಡಿದ್ದೆವು. ನಾವು ಮತ್ತೆ ಡೆಪ್ಯೂಟಿ ಸ್ಪೀಕರ್ ಜೊತೆ ಮಾತನಾಡಿದ್ದು, ವಿಚಾರಣೆಯ ಪ್ರಾರಂಭಕ್ಕೆ ಮನವಿ ಮಾಡಿದ್ದೇವೆ. ಅವರ ಅನರ್ಹತೆಯ ನೋಟಿಸ್ ಅನ್ನು ನಾಳೆ ಅಥವಾ ಭಾನುವಾರ ನೀಡಲಾಗುವುದು ಎಂದು ಶಿವಸೇನಾ ಸಂಸದ ಅರವಿಂದ್ ಸಾವಂತ್ ಶುಕ್ರವಾರ ತಡರಾತ್ರಿ ಹೇಳಿದ್ದರು. ಸಂಜಯ್ ರೇಮುಲ್ಕರ್, ಚಿಮನ್ ಪಾಟೀಲ್, ರಮೇಶ್ ಬೋರ್ನಾರೆ ಮತ್ತು ಬಾಲಾಜಿ ಕಲ್ಯಾಣ್ಕರ್ ಅವರ ಹೆಸರುಗಳನ್ನು ಉಪಸಭಾಪತಿಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: MVA Crisis: ಮಹಾರಾಷ್ಟ್ರ ಸರ್ಕಾರ ಪತನ ಸನ್ನಿಹಿತ, ಏಕನಾಥ ಶಿಂಧೆ ಬಣಕ್ಕೆ ಶಿವಸೇನೆಯ 42 ಶಾಸಕರ ಬೆಂಬಲ

3. 16 ಶಾಸಕರನ್ನು ಅನರ್ಹಗೊಳಿಸಲು ಶಿವಸೇನೆ ಮಂಡಿಸಿದ ಪ್ರಸ್ತಾವನೆಗೆ ಯಾವುದೇ ಕ್ರಮ ಕೈಗೊಳ್ಳುವಂತೆ ಬಂಡಾಯಗಾರ ಏಕನಾಥ್ ಶಿಂಧೆ ಶಿಬಿರವು ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರಿಗೆ ಸವಾಲು ಹಾಕಿದೆ. ಬಿಜೆಪಿಗೆ ನಿಕಟವಾಗಿರುವ ಸ್ವತಂತ್ರ ಶಾಸಕರಾದ ಮಹೇಶ್ ಬಾಲ್ಡಿ ಮತ್ತು ವಿನೋದ್ ಅಗರ್ವಾಲ್ ಅವರು ಉಪಸಭಾಪತಿಗೆ ನೋಟಿಸ್ ಸಲ್ಲಿಸಿದರು. ಅವರ ವಿರುದ್ಧ ಅವಿಶ್ವಾಸ ನಿರ್ಣಯವು ಇನ್ನೂ ಬಾಕಿ ಉಳಿದಿದೆ. ಅನರ್ಹಗೊಳಿಸುವ ನಿರ್ಣಯದ ಮೇಲೆ ಕಾರ್ಯನಿರ್ವಹಿಸಲು ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

4. ಏಕನಾಥ್ ಶಿಂಧೆ ಅವರ ಬಂಡಾಯದ ನಂತರ ಶಿವಸೇನೆ ಬೆಂಬಲಿಗರು ಕೋಪಗೊಂಡ ಪ್ರತಿಭಟನೆಗಳನ್ನು ನಡೆಸುವ ಸಾಧ್ಯತೆಯಿರುವುದರಿಂದ ಮಹಾರಾಷ್ಟ್ರದಲ್ಲಿ ಅಲರ್ಟ್​ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರ್‌ಗಳಿಗೆ ಸಾಮಾನ್ಯ ಎಚ್ಚರಿಕೆಯನ್ನು ನೀಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳುವಂತೆ ಕೇಳಿಕೊಳ್ಳಲಾಗಿದೆ. ಶುಕ್ರವಾರ ಮುಂಬೈನ ಕುರ್ಲಾ ಪ್ರದೇಶದಲ್ಲಿ ಬಂಡುಕೋರ ಮಂಗೇಶ್ ಕುಡಾಲ್ಕರ್ ಅವರ ಚಿತ್ರವಿರುವ ಹೋರ್ಡಿಂಗ್ ಅನ್ನು ಶಿವಸೈನಿಕರು ಹಾನಿಗೊಳಿಸಿದರು. ಶಿವಸೇನಾ ಶಾಸಕ ದಿಲೀಪ್ ಲಾಂಡೆ ಅವರ ಪೋಸ್ಟರ್‌ಗೆ ಮಸಿ ಬಳಿದು ಮತ್ತೊಂದನ್ನು ಹರಿದು ಹಾಕಿರುವ ಘಟನೆ ನಗರದಲ್ಲಿ ಇದೇ ರೀತಿ ವರದಿಯಾಗಿದೆ.

5. ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ನಾಯಕರು ಅಲ್ಪಸಂಖ್ಯಾತರ ಕಾರಣದಿಂದ ಆಡಳಿತಾರೂಢ ಸರ್ಕಾರ ಬೀಳುವುದನ್ನು ತಡೆಯುವ ಕ್ರಮಗಳ ಕುರಿತು ಚರ್ಚಿಸಲು ಸಭೆಗಳನ್ನು ನಡೆಸುತ್ತಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಅವರ ಪಕ್ಷದ ಇತರ ಹಿರಿಯ ನಾಯಕರು ಉದ್ಧವ್ ಠಾಕ್ರೆ ಅವರನ್ನು ಮಾತೋಶ್ರೀಯಲ್ಲಿ ಭೇಟಿಯಾದರು. ಶಿವಸೇನೆ ಪಕ್ಷದೊಳಗಿಂದ ಭಾರೀ ಬಂಡಾಯ ಎದುರಿಸುತ್ತಿರುವ ಮುಖ್ಯಮಂತ್ರಿಗೆ ಎನ್‌ಸಿಪಿ ಮತ್ತು ಕಾಂಗ್ರೆಸ್ ಬೆಂಬಲ ಘೋಷಿಸಿವೆ.

Published On - 8:58 am, Sat, 25 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ