AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಸಚಿವಾಲಯದ ಮೂರನೇ ಮಹಡಿಯಿಂದ ಹಾರಿದ ಡೆಪ್ಯೂಟಿ ಸ್ಪೀಕರ್

ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಳಗ್ಗೆ ನೆಟ್ ಅಳವಡಿಸಿದ್ದ ಕಾರಣ ಅವರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ, ಧಂಗಾರ್ ಸಮುದಾಯದ ಎಸ್ಟಿ (ಪರಿಶಿಷ್ಟ ಪಂಗಡ) ಮೀಸಲಾತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಈ ಘಟನೆ ನಡೆದಿದೆ.

ನಯನಾ ರಾಜೀವ್
|

Updated on: Oct 04, 2024 | 2:33 PM

Share

ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಳಗ್ಗೆ ನೆಟ್ ಅಳವಡಿಸಿದ್ದ ಕಾರಣ ಅವರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ, ಧಂಗಾರ್ ಸಮುದಾಯದ ಎಸ್ಟಿ (ಪರಿಶಿಷ್ಟ ಪಂಗಡ) ಮೀಸಲಾತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಈ ಘಟನೆ ನಡೆದಿದೆ.

ಹಾರಿದ ಬಳಿಕ ನೆಟ್​ನಲ್ಲಿ ಸಿಲುಕಿದ್ದ ಅವರನ್ನು ಹೊರಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ನರಹರಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಬಂದಿದ್ದರು, ಆದರೆ ಅವರ ಭೇಟಿ ಸಾಧ್ಯವಾಗಲಿಲ್ಲ. ಇದಾದ ಬಳಿಕ ಶುಕ್ರವಾರವೂ ಸಿಎಂ ಭೇಟಿಗೆ ತೆರಳಿದ್ದು, ಸಿಎಂ ಸಿಗಲಿಲ್ಲ.

ನರಹರಿ ಜೊತೆಗೆ ಇನ್ನೂ ಕೆಲವರು ನೆಟ್‌ಗೆ ಹಾರಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಅವರಲ್ಲಿ ಬುಡಕಟ್ಟು ಶಾಸಕರೂ ಇದ್ದರು. ಎಲ್ಲ ಶಾಸಕರು ನೆಟ್‌ನಲ್ಲಿಯೇ ನಿಂತು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಉಪಸಭಾಪತಿ ತಮ್ಮ ಸರ್ಕಾರದ ಮೇಲೆಯೇ ಕೋಪಗೊಂಡು ಸಿಟ್ಟಿನ ಭರದಲ್ಲಿ ಈ ಹೆಜ್ಜೆ ಇಟ್ಟಿದ್ದಾರೆ.

ಮತ್ತಷ್ಟು ಓದಿ: ದೆಹಲಿ: ಕಟ್ಟಡದ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಸಾವು

ಆದರೆ ಮಹಾರಾಷ್ಟ್ರದ ಡೆಪ್ಯೂಟಿ ಸ್ಪೀಕರ್ ಛಾವಣಿಯಿಂದ ಕೆಳಗೆ ಜಿಗಿದ ನಂತರ ಯಾವುದೇ ಗಾಯವೂ ಆಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಗಿದ ಬಳಿಕ ಕೆಳಗಿದ್ದ ಬಲೆಯಲ್ಲಿ ಸಿಲುಕಿದ್ದರಿಂದ ಬಚಾವಾಗಿದ್ದಾರೆ. ಬಳಿಕ ಪೊಲೀಸ್ ಸಿಬ್ಬಂದಿ ಅವರನ್ನು ಹೊರಗೆ ಕರೆದೊಯ್ದರು.

ಸಂಪುಟ ಸಭೆಯ ದಿನ, ಎಲ್ಲಾ ಶಾಸಕರು ಸಿಎಂ ಅವರನ್ನು ಭೇಟಿಯಾಗಬೇಕಿತ್ತು ಆದರೆ ಸಾಕಷ್ಟು ಪ್ರಯತ್ನ ಮಾಡಿದರೂ ಶಿಂಧೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಹೀಗಾಗಿ ಕಟ್ಟಡದಿಂದ ಜಿಗಿದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!