AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಸಚಿವಾಲಯದ ಮೂರನೇ ಮಹಡಿಯಿಂದ ಹಾರಿದ ಡೆಪ್ಯೂಟಿ ಸ್ಪೀಕರ್

ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಳಗ್ಗೆ ನೆಟ್ ಅಳವಡಿಸಿದ್ದ ಕಾರಣ ಅವರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ, ಧಂಗಾರ್ ಸಮುದಾಯದ ಎಸ್ಟಿ (ಪರಿಶಿಷ್ಟ ಪಂಗಡ) ಮೀಸಲಾತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಈ ಘಟನೆ ನಡೆದಿದೆ.

ನಯನಾ ರಾಜೀವ್
|

Updated on: Oct 04, 2024 | 2:33 PM

Share

ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್ ಹಾಗೂ ಅಜಿತ್ ಪವಾರ್ ಬಣದ ಶಾಸಕ ನರಹರಿ ಜಿರ್ವಾಲ್ ಸಚಿವಾಲಯದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದಿದ್ದಾರೆ. ಕೆಳಗ್ಗೆ ನೆಟ್ ಅಳವಡಿಸಿದ್ದ ಕಾರಣ ಅವರು ಅದರಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ, ಧಂಗಾರ್ ಸಮುದಾಯದ ಎಸ್ಟಿ (ಪರಿಶಿಷ್ಟ ಪಂಗಡ) ಮೀಸಲಾತಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಈ ಘಟನೆ ನಡೆದಿದೆ.

ಹಾರಿದ ಬಳಿಕ ನೆಟ್​ನಲ್ಲಿ ಸಿಲುಕಿದ್ದ ಅವರನ್ನು ಹೊರಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ನರಹರಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಲು ಬಂದಿದ್ದರು, ಆದರೆ ಅವರ ಭೇಟಿ ಸಾಧ್ಯವಾಗಲಿಲ್ಲ. ಇದಾದ ಬಳಿಕ ಶುಕ್ರವಾರವೂ ಸಿಎಂ ಭೇಟಿಗೆ ತೆರಳಿದ್ದು, ಸಿಎಂ ಸಿಗಲಿಲ್ಲ.

ನರಹರಿ ಜೊತೆಗೆ ಇನ್ನೂ ಕೆಲವರು ನೆಟ್‌ಗೆ ಹಾರಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಅವರಲ್ಲಿ ಬುಡಕಟ್ಟು ಶಾಸಕರೂ ಇದ್ದರು. ಎಲ್ಲ ಶಾಸಕರು ನೆಟ್‌ನಲ್ಲಿಯೇ ನಿಂತು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಉಪಸಭಾಪತಿ ತಮ್ಮ ಸರ್ಕಾರದ ಮೇಲೆಯೇ ಕೋಪಗೊಂಡು ಸಿಟ್ಟಿನ ಭರದಲ್ಲಿ ಈ ಹೆಜ್ಜೆ ಇಟ್ಟಿದ್ದಾರೆ.

ಮತ್ತಷ್ಟು ಓದಿ: ದೆಹಲಿ: ಕಟ್ಟಡದ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಸಾವು

ಆದರೆ ಮಹಾರಾಷ್ಟ್ರದ ಡೆಪ್ಯೂಟಿ ಸ್ಪೀಕರ್ ಛಾವಣಿಯಿಂದ ಕೆಳಗೆ ಜಿಗಿದ ನಂತರ ಯಾವುದೇ ಗಾಯವೂ ಆಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಗಿದ ಬಳಿಕ ಕೆಳಗಿದ್ದ ಬಲೆಯಲ್ಲಿ ಸಿಲುಕಿದ್ದರಿಂದ ಬಚಾವಾಗಿದ್ದಾರೆ. ಬಳಿಕ ಪೊಲೀಸ್ ಸಿಬ್ಬಂದಿ ಅವರನ್ನು ಹೊರಗೆ ಕರೆದೊಯ್ದರು.

ಸಂಪುಟ ಸಭೆಯ ದಿನ, ಎಲ್ಲಾ ಶಾಸಕರು ಸಿಎಂ ಅವರನ್ನು ಭೇಟಿಯಾಗಬೇಕಿತ್ತು ಆದರೆ ಸಾಕಷ್ಟು ಪ್ರಯತ್ನ ಮಾಡಿದರೂ ಶಿಂಧೆ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಹೀಗಾಗಿ ಕಟ್ಟಡದಿಂದ ಜಿಗಿದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ