AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ 07.14 ಕ್ಕೆ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ನೀಡಿದೆ. ಭೂಕಂಪದ ನಂತರ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ.

Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ
ಭೂಕಂಪ
Follow us
ನಯನಾ ರಾಜೀವ್
|

Updated on: Jul 10, 2024 | 9:36 AM

ಮಹಾರಾಷ್ಟ್ರ(Maharashtra)ದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ ಭೂಕಂಪ(Earthquake)ದ ಅನುಭವವಾಗಿದೆ. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿದೆ. ಬೆಳಗ್ಗೆ 7.14ಕ್ಕೆ ಈ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿಯನ್ನು ನೀಡಿದೆ.

ಪರ್ಭಾನಿ ಮತ್ತು ನಾಂದೇಡ್‌ನಲ್ಲಿಯೂ ಭೂಕಂಪನದ ಅನುಭವವಾಗಿದೆ. ಯಾವುದೇ ಪ್ರಾಣ ಅಥವಾ ಆಸ್ತಿ ನಷ್ಟದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಈ ಹಿಂದೆ ಮಾರ್ಚ್ 21 ರಂದು ಕೂಡ ಹಿಂಗೋಲಿಯಲ್ಲಿ ಭೂಕಂಪ ಸಂಭವಿಸಿತ್ತು . 10 ನಿಮಿಷಗಳ ಅವಧಿಯಲ್ಲಿ ಭೂಮಿ ಎರಡು ಬಾರಿ ಕಂಪಿಸಿತ್ತು.

ಬೆಳಗ್ಗೆ 6.08ಕ್ಕೆ ಮೊದಲ ಭೂಕಂಪನ ಸಂಭವಿಸಿದ್ದು, 6.19ಕ್ಕೆ ಎರಡನೇ ಕಂಪನದ ಅನುಭವವಾಗಿದೆ. ಮೊದಲ ಭೂಕಂಪದ ತೀವ್ರತೆ 4.5 ದಾಖಲಾಗಿದ್ದರೆ, ಎರಡನೇ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.6 ಎಂದು ಅಳೆಯಲಾಗಿದೆ. ಭೂಕಂಪನದ ಅನುಭವವಾದಾಗ ಹೆಚ್ಚಿನ ಜನರು ಮಲಗಿದ್ದರು.

ಮತ್ತಷ್ಟು ಓದಿ: Maharashtra Earthquake: ಮಹಾರಾಷ್ಟ್ರದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪ

ಭೂಮಿಯಲ್ಲಿ 4 ಮುಖ್ಯ ಪದರಗಳಿವೆ, ಹೊರಗಿನ ಕೋರ್, ಒಳ ಕೋರ್, ಕ್ರಸ್ಟ್ ಮತ್ತು ಮ್ಯಾಂಟಲ್ ಎಂದು ಕರೆಯಲಾಗುತ್ತದೆ. ಈ ಫಲಕಗಳು ಭೂಮಿಯ ಕೆಳಗೆ ತಿರುಗುತ್ತಲೇ ಇರುತ್ತವೆ. ಈ ಫಲಕಗಳು ಒಂದಕ್ಕೊಂದು ಡಿಕ್ಕಿ ಹೊಡೆದಾಗ ಭೂಮಿಯ ಅಡಿಯಲ್ಲಿ ಕಂಪನ ಉಂಟಾಗುತ್ತದೆ ಮತ್ತು ಈ ಫಲಕಗಳು ಜಾರಿದಾಗ ಭೂಕಂಪನದ ಅನುಭವವಾಗುತ್ತದೆ.

ಈ ಸ್ಥಳದಲ್ಲಿ ಭೂಕಂಪಗಳು ಹೆಚ್ಚು ಪ್ರಭಾವ ಬೀರುತ್ತವೆ ಮತ್ತು ಭೂಕಂಪದ ತೀವ್ರತೆಯು ಅಧಿಕವಾಗಿದ್ದರೆ ನಂತರ ಕಂಪನವು ಬಹಳ ದೂರದವರೆಗೆ ಅನುಭವವಾಗುತ್ತದೆ.

ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಿಂದ ನಿರ್ಧರಿಸಲಾಗುತ್ತದೆ. ಭೂಕಂಪಗಳನ್ನು ರಿಕ್ಟರ್ ಮಾಪಕದಲ್ಲಿ 1 ರಿಂದ 9 ರವರೆಗೆ ಅಳೆಯಲಾಗುತ್ತದೆ. ಭೂಕಂಪದ ಸಮಯದಲ್ಲಿ, ಶಕ್ತಿಯ ಅಲೆಗಳು ಭೂಮಿಯ ಕೆಳಗಿನಿಂದ ಹೊರಹೊಮ್ಮುತ್ತವೆ, ಇದನ್ನು ರಿಕ್ಟರ್ ಮಾಪಕದಿಂದ ಅಳೆಯಲಾಗುತ್ತದೆ. ಭೂಕಂಪದ ತೀವ್ರತೆ ಏನು ಮತ್ತು ಅದರ ಕೇಂದ್ರಬಿಂದು ಎಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್