AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ 07.14 ಕ್ಕೆ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ನೀಡಿದೆ. ಭೂಕಂಪದ ನಂತರ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ.

Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ
ಭೂಕಂಪ
ನಯನಾ ರಾಜೀವ್
|

Updated on: Jul 10, 2024 | 9:36 AM

Share

ಮಹಾರಾಷ್ಟ್ರ(Maharashtra)ದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ ಭೂಕಂಪ(Earthquake)ದ ಅನುಭವವಾಗಿದೆ. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿದೆ. ಬೆಳಗ್ಗೆ 7.14ಕ್ಕೆ ಈ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿಯನ್ನು ನೀಡಿದೆ.

ಪರ್ಭಾನಿ ಮತ್ತು ನಾಂದೇಡ್‌ನಲ್ಲಿಯೂ ಭೂಕಂಪನದ ಅನುಭವವಾಗಿದೆ. ಯಾವುದೇ ಪ್ರಾಣ ಅಥವಾ ಆಸ್ತಿ ನಷ್ಟದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಈ ಹಿಂದೆ ಮಾರ್ಚ್ 21 ರಂದು ಕೂಡ ಹಿಂಗೋಲಿಯಲ್ಲಿ ಭೂಕಂಪ ಸಂಭವಿಸಿತ್ತು . 10 ನಿಮಿಷಗಳ ಅವಧಿಯಲ್ಲಿ ಭೂಮಿ ಎರಡು ಬಾರಿ ಕಂಪಿಸಿತ್ತು.

ಬೆಳಗ್ಗೆ 6.08ಕ್ಕೆ ಮೊದಲ ಭೂಕಂಪನ ಸಂಭವಿಸಿದ್ದು, 6.19ಕ್ಕೆ ಎರಡನೇ ಕಂಪನದ ಅನುಭವವಾಗಿದೆ. ಮೊದಲ ಭೂಕಂಪದ ತೀವ್ರತೆ 4.5 ದಾಖಲಾಗಿದ್ದರೆ, ಎರಡನೇ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.6 ಎಂದು ಅಳೆಯಲಾಗಿದೆ. ಭೂಕಂಪನದ ಅನುಭವವಾದಾಗ ಹೆಚ್ಚಿನ ಜನರು ಮಲಗಿದ್ದರು.

ಮತ್ತಷ್ಟು ಓದಿ: Maharashtra Earthquake: ಮಹಾರಾಷ್ಟ್ರದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪ

ಭೂಮಿಯಲ್ಲಿ 4 ಮುಖ್ಯ ಪದರಗಳಿವೆ, ಹೊರಗಿನ ಕೋರ್, ಒಳ ಕೋರ್, ಕ್ರಸ್ಟ್ ಮತ್ತು ಮ್ಯಾಂಟಲ್ ಎಂದು ಕರೆಯಲಾಗುತ್ತದೆ. ಈ ಫಲಕಗಳು ಭೂಮಿಯ ಕೆಳಗೆ ತಿರುಗುತ್ತಲೇ ಇರುತ್ತವೆ. ಈ ಫಲಕಗಳು ಒಂದಕ್ಕೊಂದು ಡಿಕ್ಕಿ ಹೊಡೆದಾಗ ಭೂಮಿಯ ಅಡಿಯಲ್ಲಿ ಕಂಪನ ಉಂಟಾಗುತ್ತದೆ ಮತ್ತು ಈ ಫಲಕಗಳು ಜಾರಿದಾಗ ಭೂಕಂಪನದ ಅನುಭವವಾಗುತ್ತದೆ.

ಈ ಸ್ಥಳದಲ್ಲಿ ಭೂಕಂಪಗಳು ಹೆಚ್ಚು ಪ್ರಭಾವ ಬೀರುತ್ತವೆ ಮತ್ತು ಭೂಕಂಪದ ತೀವ್ರತೆಯು ಅಧಿಕವಾಗಿದ್ದರೆ ನಂತರ ಕಂಪನವು ಬಹಳ ದೂರದವರೆಗೆ ಅನುಭವವಾಗುತ್ತದೆ.

ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಿಂದ ನಿರ್ಧರಿಸಲಾಗುತ್ತದೆ. ಭೂಕಂಪಗಳನ್ನು ರಿಕ್ಟರ್ ಮಾಪಕದಲ್ಲಿ 1 ರಿಂದ 9 ರವರೆಗೆ ಅಳೆಯಲಾಗುತ್ತದೆ. ಭೂಕಂಪದ ಸಮಯದಲ್ಲಿ, ಶಕ್ತಿಯ ಅಲೆಗಳು ಭೂಮಿಯ ಕೆಳಗಿನಿಂದ ಹೊರಹೊಮ್ಮುತ್ತವೆ, ಇದನ್ನು ರಿಕ್ಟರ್ ಮಾಪಕದಿಂದ ಅಳೆಯಲಾಗುತ್ತದೆ. ಭೂಕಂಪದ ತೀವ್ರತೆ ಏನು ಮತ್ತು ಅದರ ಕೇಂದ್ರಬಿಂದು ಎಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!