AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ 07.14 ಕ್ಕೆ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ನೀಡಿದೆ. ಭೂಕಂಪದ ನಂತರ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ.

Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ
ಭೂಕಂಪ
ನಯನಾ ರಾಜೀವ್
|

Updated on: Jul 10, 2024 | 9:36 AM

Share

ಮಹಾರಾಷ್ಟ್ರ(Maharashtra)ದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ ಭೂಕಂಪ(Earthquake)ದ ಅನುಭವವಾಗಿದೆ. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿದೆ. ಬೆಳಗ್ಗೆ 7.14ಕ್ಕೆ ಈ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿಯನ್ನು ನೀಡಿದೆ.

ಪರ್ಭಾನಿ ಮತ್ತು ನಾಂದೇಡ್‌ನಲ್ಲಿಯೂ ಭೂಕಂಪನದ ಅನುಭವವಾಗಿದೆ. ಯಾವುದೇ ಪ್ರಾಣ ಅಥವಾ ಆಸ್ತಿ ನಷ್ಟದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಈ ಹಿಂದೆ ಮಾರ್ಚ್ 21 ರಂದು ಕೂಡ ಹಿಂಗೋಲಿಯಲ್ಲಿ ಭೂಕಂಪ ಸಂಭವಿಸಿತ್ತು . 10 ನಿಮಿಷಗಳ ಅವಧಿಯಲ್ಲಿ ಭೂಮಿ ಎರಡು ಬಾರಿ ಕಂಪಿಸಿತ್ತು.

ಬೆಳಗ್ಗೆ 6.08ಕ್ಕೆ ಮೊದಲ ಭೂಕಂಪನ ಸಂಭವಿಸಿದ್ದು, 6.19ಕ್ಕೆ ಎರಡನೇ ಕಂಪನದ ಅನುಭವವಾಗಿದೆ. ಮೊದಲ ಭೂಕಂಪದ ತೀವ್ರತೆ 4.5 ದಾಖಲಾಗಿದ್ದರೆ, ಎರಡನೇ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.6 ಎಂದು ಅಳೆಯಲಾಗಿದೆ. ಭೂಕಂಪನದ ಅನುಭವವಾದಾಗ ಹೆಚ್ಚಿನ ಜನರು ಮಲಗಿದ್ದರು.

ಮತ್ತಷ್ಟು ಓದಿ: Maharashtra Earthquake: ಮಹಾರಾಷ್ಟ್ರದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪ

ಭೂಮಿಯಲ್ಲಿ 4 ಮುಖ್ಯ ಪದರಗಳಿವೆ, ಹೊರಗಿನ ಕೋರ್, ಒಳ ಕೋರ್, ಕ್ರಸ್ಟ್ ಮತ್ತು ಮ್ಯಾಂಟಲ್ ಎಂದು ಕರೆಯಲಾಗುತ್ತದೆ. ಈ ಫಲಕಗಳು ಭೂಮಿಯ ಕೆಳಗೆ ತಿರುಗುತ್ತಲೇ ಇರುತ್ತವೆ. ಈ ಫಲಕಗಳು ಒಂದಕ್ಕೊಂದು ಡಿಕ್ಕಿ ಹೊಡೆದಾಗ ಭೂಮಿಯ ಅಡಿಯಲ್ಲಿ ಕಂಪನ ಉಂಟಾಗುತ್ತದೆ ಮತ್ತು ಈ ಫಲಕಗಳು ಜಾರಿದಾಗ ಭೂಕಂಪನದ ಅನುಭವವಾಗುತ್ತದೆ.

ಈ ಸ್ಥಳದಲ್ಲಿ ಭೂಕಂಪಗಳು ಹೆಚ್ಚು ಪ್ರಭಾವ ಬೀರುತ್ತವೆ ಮತ್ತು ಭೂಕಂಪದ ತೀವ್ರತೆಯು ಅಧಿಕವಾಗಿದ್ದರೆ ನಂತರ ಕಂಪನವು ಬಹಳ ದೂರದವರೆಗೆ ಅನುಭವವಾಗುತ್ತದೆ.

ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಿಂದ ನಿರ್ಧರಿಸಲಾಗುತ್ತದೆ. ಭೂಕಂಪಗಳನ್ನು ರಿಕ್ಟರ್ ಮಾಪಕದಲ್ಲಿ 1 ರಿಂದ 9 ರವರೆಗೆ ಅಳೆಯಲಾಗುತ್ತದೆ. ಭೂಕಂಪದ ಸಮಯದಲ್ಲಿ, ಶಕ್ತಿಯ ಅಲೆಗಳು ಭೂಮಿಯ ಕೆಳಗಿನಿಂದ ಹೊರಹೊಮ್ಮುತ್ತವೆ, ಇದನ್ನು ರಿಕ್ಟರ್ ಮಾಪಕದಿಂದ ಅಳೆಯಲಾಗುತ್ತದೆ. ಭೂಕಂಪದ ತೀವ್ರತೆ ಏನು ಮತ್ತು ಅದರ ಕೇಂದ್ರಬಿಂದು ಎಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!