Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ 07.14 ಕ್ಕೆ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ನೀಡಿದೆ. ಭೂಕಂಪದ ನಂತರ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ.

Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ
ಭೂಕಂಪ
Follow us
|

Updated on: Jul 10, 2024 | 9:36 AM

ಮಹಾರಾಷ್ಟ್ರ(Maharashtra)ದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ ಭೂಕಂಪ(Earthquake)ದ ಅನುಭವವಾಗಿದೆ. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿದೆ. ಬೆಳಗ್ಗೆ 7.14ಕ್ಕೆ ಈ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿಯನ್ನು ನೀಡಿದೆ.

ಪರ್ಭಾನಿ ಮತ್ತು ನಾಂದೇಡ್‌ನಲ್ಲಿಯೂ ಭೂಕಂಪನದ ಅನುಭವವಾಗಿದೆ. ಯಾವುದೇ ಪ್ರಾಣ ಅಥವಾ ಆಸ್ತಿ ನಷ್ಟದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಈ ಹಿಂದೆ ಮಾರ್ಚ್ 21 ರಂದು ಕೂಡ ಹಿಂಗೋಲಿಯಲ್ಲಿ ಭೂಕಂಪ ಸಂಭವಿಸಿತ್ತು . 10 ನಿಮಿಷಗಳ ಅವಧಿಯಲ್ಲಿ ಭೂಮಿ ಎರಡು ಬಾರಿ ಕಂಪಿಸಿತ್ತು.

ಬೆಳಗ್ಗೆ 6.08ಕ್ಕೆ ಮೊದಲ ಭೂಕಂಪನ ಸಂಭವಿಸಿದ್ದು, 6.19ಕ್ಕೆ ಎರಡನೇ ಕಂಪನದ ಅನುಭವವಾಗಿದೆ. ಮೊದಲ ಭೂಕಂಪದ ತೀವ್ರತೆ 4.5 ದಾಖಲಾಗಿದ್ದರೆ, ಎರಡನೇ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.6 ಎಂದು ಅಳೆಯಲಾಗಿದೆ. ಭೂಕಂಪನದ ಅನುಭವವಾದಾಗ ಹೆಚ್ಚಿನ ಜನರು ಮಲಗಿದ್ದರು.

ಮತ್ತಷ್ಟು ಓದಿ: Maharashtra Earthquake: ಮಹಾರಾಷ್ಟ್ರದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪ

ಭೂಮಿಯಲ್ಲಿ 4 ಮುಖ್ಯ ಪದರಗಳಿವೆ, ಹೊರಗಿನ ಕೋರ್, ಒಳ ಕೋರ್, ಕ್ರಸ್ಟ್ ಮತ್ತು ಮ್ಯಾಂಟಲ್ ಎಂದು ಕರೆಯಲಾಗುತ್ತದೆ. ಈ ಫಲಕಗಳು ಭೂಮಿಯ ಕೆಳಗೆ ತಿರುಗುತ್ತಲೇ ಇರುತ್ತವೆ. ಈ ಫಲಕಗಳು ಒಂದಕ್ಕೊಂದು ಡಿಕ್ಕಿ ಹೊಡೆದಾಗ ಭೂಮಿಯ ಅಡಿಯಲ್ಲಿ ಕಂಪನ ಉಂಟಾಗುತ್ತದೆ ಮತ್ತು ಈ ಫಲಕಗಳು ಜಾರಿದಾಗ ಭೂಕಂಪನದ ಅನುಭವವಾಗುತ್ತದೆ.

ಈ ಸ್ಥಳದಲ್ಲಿ ಭೂಕಂಪಗಳು ಹೆಚ್ಚು ಪ್ರಭಾವ ಬೀರುತ್ತವೆ ಮತ್ತು ಭೂಕಂಪದ ತೀವ್ರತೆಯು ಅಧಿಕವಾಗಿದ್ದರೆ ನಂತರ ಕಂಪನವು ಬಹಳ ದೂರದವರೆಗೆ ಅನುಭವವಾಗುತ್ತದೆ.

ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಿಂದ ನಿರ್ಧರಿಸಲಾಗುತ್ತದೆ. ಭೂಕಂಪಗಳನ್ನು ರಿಕ್ಟರ್ ಮಾಪಕದಲ್ಲಿ 1 ರಿಂದ 9 ರವರೆಗೆ ಅಳೆಯಲಾಗುತ್ತದೆ. ಭೂಕಂಪದ ಸಮಯದಲ್ಲಿ, ಶಕ್ತಿಯ ಅಲೆಗಳು ಭೂಮಿಯ ಕೆಳಗಿನಿಂದ ಹೊರಹೊಮ್ಮುತ್ತವೆ, ಇದನ್ನು ರಿಕ್ಟರ್ ಮಾಪಕದಿಂದ ಅಳೆಯಲಾಗುತ್ತದೆ. ಭೂಕಂಪದ ತೀವ್ರತೆ ಏನು ಮತ್ತು ಅದರ ಕೇಂದ್ರಬಿಂದು ಎಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?