Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ 07.14 ಕ್ಕೆ ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ನೀಡಿದೆ. ಭೂಕಂಪದ ನಂತರ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ.

Maharashtra Earthquake: ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಕಂಪಿಸಿದ ಭೂಮಿ, 4.5 ತೀವ್ರತೆಯ ಭೂಕಂಪ
ಭೂಕಂಪ
Follow us
|

Updated on: Jul 10, 2024 | 9:36 AM

ಮಹಾರಾಷ್ಟ್ರ(Maharashtra)ದ ಹಿಂಗೋಲಿಯಲ್ಲಿ ಇಂದು ಬೆಳಗ್ಗೆ ಭೂಕಂಪ(Earthquake)ದ ಅನುಭವವಾಗಿದೆ. ಇದರ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.5 ಎಂದು ಅಳೆಯಲಾಗಿದೆ. ಬೆಳಗ್ಗೆ 7.14ಕ್ಕೆ ಈ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿಯನ್ನು ನೀಡಿದೆ.

ಪರ್ಭಾನಿ ಮತ್ತು ನಾಂದೇಡ್‌ನಲ್ಲಿಯೂ ಭೂಕಂಪನದ ಅನುಭವವಾಗಿದೆ. ಯಾವುದೇ ಪ್ರಾಣ ಅಥವಾ ಆಸ್ತಿ ನಷ್ಟದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಈ ಹಿಂದೆ ಮಾರ್ಚ್ 21 ರಂದು ಕೂಡ ಹಿಂಗೋಲಿಯಲ್ಲಿ ಭೂಕಂಪ ಸಂಭವಿಸಿತ್ತು . 10 ನಿಮಿಷಗಳ ಅವಧಿಯಲ್ಲಿ ಭೂಮಿ ಎರಡು ಬಾರಿ ಕಂಪಿಸಿತ್ತು.

ಬೆಳಗ್ಗೆ 6.08ಕ್ಕೆ ಮೊದಲ ಭೂಕಂಪನ ಸಂಭವಿಸಿದ್ದು, 6.19ಕ್ಕೆ ಎರಡನೇ ಕಂಪನದ ಅನುಭವವಾಗಿದೆ. ಮೊದಲ ಭೂಕಂಪದ ತೀವ್ರತೆ 4.5 ದಾಖಲಾಗಿದ್ದರೆ, ಎರಡನೇ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.6 ಎಂದು ಅಳೆಯಲಾಗಿದೆ. ಭೂಕಂಪನದ ಅನುಭವವಾದಾಗ ಹೆಚ್ಚಿನ ಜನರು ಮಲಗಿದ್ದರು.

ಮತ್ತಷ್ಟು ಓದಿ: Maharashtra Earthquake: ಮಹಾರಾಷ್ಟ್ರದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಎರಡು ಭೂಕಂಪ

ಭೂಮಿಯಲ್ಲಿ 4 ಮುಖ್ಯ ಪದರಗಳಿವೆ, ಹೊರಗಿನ ಕೋರ್, ಒಳ ಕೋರ್, ಕ್ರಸ್ಟ್ ಮತ್ತು ಮ್ಯಾಂಟಲ್ ಎಂದು ಕರೆಯಲಾಗುತ್ತದೆ. ಈ ಫಲಕಗಳು ಭೂಮಿಯ ಕೆಳಗೆ ತಿರುಗುತ್ತಲೇ ಇರುತ್ತವೆ. ಈ ಫಲಕಗಳು ಒಂದಕ್ಕೊಂದು ಡಿಕ್ಕಿ ಹೊಡೆದಾಗ ಭೂಮಿಯ ಅಡಿಯಲ್ಲಿ ಕಂಪನ ಉಂಟಾಗುತ್ತದೆ ಮತ್ತು ಈ ಫಲಕಗಳು ಜಾರಿದಾಗ ಭೂಕಂಪನದ ಅನುಭವವಾಗುತ್ತದೆ.

ಈ ಸ್ಥಳದಲ್ಲಿ ಭೂಕಂಪಗಳು ಹೆಚ್ಚು ಪ್ರಭಾವ ಬೀರುತ್ತವೆ ಮತ್ತು ಭೂಕಂಪದ ತೀವ್ರತೆಯು ಅಧಿಕವಾಗಿದ್ದರೆ ನಂತರ ಕಂಪನವು ಬಹಳ ದೂರದವರೆಗೆ ಅನುಭವವಾಗುತ್ತದೆ.

ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಿಂದ ನಿರ್ಧರಿಸಲಾಗುತ್ತದೆ. ಭೂಕಂಪಗಳನ್ನು ರಿಕ್ಟರ್ ಮಾಪಕದಲ್ಲಿ 1 ರಿಂದ 9 ರವರೆಗೆ ಅಳೆಯಲಾಗುತ್ತದೆ. ಭೂಕಂಪದ ಸಮಯದಲ್ಲಿ, ಶಕ್ತಿಯ ಅಲೆಗಳು ಭೂಮಿಯ ಕೆಳಗಿನಿಂದ ಹೊರಹೊಮ್ಮುತ್ತವೆ, ಇದನ್ನು ರಿಕ್ಟರ್ ಮಾಪಕದಿಂದ ಅಳೆಯಲಾಗುತ್ತದೆ. ಭೂಕಂಪದ ತೀವ್ರತೆ ಏನು ಮತ್ತು ಅದರ ಕೇಂದ್ರಬಿಂದು ಎಲ್ಲಿದೆ ಎಂಬುದನ್ನು ಇದು ತೋರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ