AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಮಹಾಯುತಿಗೆ ಮುನ್ನಡೆ, ಇದು ಜನರ ನಿರ್ಧಾರವಲ್ಲ ಏನೋ ತಪ್ಪಾಗಿದೆ ಎಂದ ಸಂಜಯ್ ರಾವತ್

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಬಿಜೆಪಿ ನೇತೃತ್ವದ ಮಹಾಯುತಿಯು ಮುನ್ನಡೆ ಸಾಧಿಸಿದ್ದು, ಇದು ಜನರ ನಿರ್ಧಾರವಲ್ಲ ಇದರಲ್ಲಿ ಏನೋ ತಪ್ಪಾಗಿದೆ ಎಂದು ಶಿವಸೇನೆ-ಯುಬಿಟಿ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರ: ಮಹಾಯುತಿಗೆ ಮುನ್ನಡೆ, ಇದು ಜನರ ನಿರ್ಧಾರವಲ್ಲ ಏನೋ ತಪ್ಪಾಗಿದೆ ಎಂದ ಸಂಜಯ್ ರಾವತ್
ಸಂಜಯ್ ರಾವತ್ Image Credit source: India Today
ನಯನಾ ರಾಜೀವ್
|

Updated on:Nov 23, 2024 | 12:09 PM

Share

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಬಿಜೆಪಿ ನೇತೃತ್ವದ ಮಹಾಯುತಿಯು ಮುನ್ನಡೆ ಸಾಧಿಸಿದ್ದು, ಇದು ಜನರ ನಿರ್ಧಾರವಲ್ಲ ಇದರಲ್ಲಿ ಏನೋ ತಪ್ಪಾಗಿದೆ ಎಂದು ಶಿವಸೇನೆ-ಯುಬಿಟಿ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಟ್ರೆಂಡ್ ನೋಡಿದರೆ ಇದರಲ್ಲಿ ಏನೋ ತಪ್ಪಾದಂತೆ ಅನಿಸುತ್ತಿದೆ, ಇದು ಖಂಡಿತವಾಗಿಯೂ ಸಾರ್ವಜನಿಕರ ನಿರ್ಧಾರವಲ್ಲ ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ. ಮಹಾರಾಷ್ಟ್ರದಲ್ಲಿ ಎಂವಿಎಗೆ 75 ಸೀಟುಗಳು ಸಿಗುತ್ತಿಲ್ಲವೆಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಎರಡು ದಿನಗಳ ಹಿಂದೆ ಅದಾನಿ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿತ್ತು, ಅದರಲ್ಲಿ ಬಿಜೆಪಿಯ ಸಂಪೂರ್ಣ ರಹಸ್ಯ ಬಯಲಾಗಿದೆ, ಆತನಿಂದ ಗಮನ ಬೇರೆಡೆ ಸೆಳೆಯಲು ಇದೆಲ್ಲವನ್ನೂ ಮಾಡಲಾಗಿದೆ. ಮುಂಬೈ ಗೌತಮ್ ಅದಾನಿ ಜೇಬಿಗೆ ಹೋಗುತ್ತಿದೆ, ಅವರು ನಮ್ಮ 4-5 ಸ್ಥಾನಗಳನ್ನು ಕದ್ದಿದ್ದಾರೆ, ಅವರು ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಕರೆನ್ಸಿ ಯಂತ್ರಗಳನ್ನು ಅಳವಡಿಸಿದ್ದಾರೆ, ಆ ರಾಜ್ಯದ ಜನರು ಅಪ್ರಾಮಾಣಿಕರಲ್ಲ.

ಮತ್ತಷ್ಟು ಓದಿ: By Election Results 2024: 15 ರಾಜ್ಯಗಳು, 48 ವಿಧಾನಸಭೆ, 2 ಲೋಕಸಭಾ ಸ್ಥಾನಗಳ ಫಲಿತಾಂಶ ಇಂದು ಪ್ರಕಟ

ಮಹಾಯುತಿಯು 215 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ ಎಂವಿಎ 61 ಸ್ಥಾನಗಳಲ್ಲಿ ಮುಂದಿದೆ, ಪ್ರಮುಖ ಸ್ಪರ್ಧೆಯು ಆಡಳಿತಾರೂಢ ಮಹಾಯುತಿ (ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ) ಮತ್ತು ಮಹಾವಿಕಾಸ್ ಅಘಾಡಿ (ಕಾಂಗ್ರೆಸ್, ಶಿವಸೇನೆ-ಯುಬಿಟಿ ಮತ್ತು ಎನ್‌ಸಿಪಿ-ಶರದ್ ಪವಾರ್) ನಡುವೆ ಇದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

288 ವಿಧಾನಸಭಾ ಸ್ಥಾನಗಳಿಗೆ ಎಲ್ಲಾ ಪಕ್ಷಗಳಿಂದ ಸುಮಾರು 4,136 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಪೈಕಿ 2,086 ಅಭ್ಯರ್ಥಿಗಳು ಸ್ವತಂತ್ರ ಅಭ್ಯರ್ಥಿಗಳು. 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಂಡಾಯ ಅಭ್ಯರ್ಥಿಗಳು ಕಣದಲ್ಲಿದ್ದು, ಮಹಾಯುತಿ ಮತ್ತು ಎಂವಿಎ ಅಭ್ಯರ್ಥಿಗಳು ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 149 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಎನ್‌ಸಿಪಿ 59 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ 101 ಸ್ಥಾನಗಳಲ್ಲಿ, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಈ ಚುನಾವಣೆಯಲ್ಲಿ ಉದ್ಧವ್ ಶಿವಸೇನೆ ಮತ್ತು ಶಿಂಧೆ ಶಿವಸೇನೆ ಅಭ್ಯರ್ಥಿಗಳು 50 ಸ್ಥಾನಗಳಲ್ಲಿ ಮುಖಾಮುಖಿಯಾಗಿದ್ದಾರೆ.

ಎನ್‌ಸಿಪಿಯ ಪ್ರತಿಸ್ಪರ್ಧಿ ಬಣಗಳು 37 ಸ್ಥಾನಗಳಲ್ಲಿ ಪರಸ್ಪರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ರಾಜ್ಯದ 288 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20 ರಂದು ಮತದಾನ ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಲೈವ್ ಅಪ್​ಡೇಟ್ ಇಲ್ಲಿದೆ

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:08 pm, Sat, 23 November 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ