AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಫಲಿತಾಂಶಕ್ಕೂ ಮುನ್ನವೇ ರಾರಾಜಿಸುತ್ತಿವೆ ಅಜಿತ್ ಪವಾರ್​ರದ್ದೇ ಗೆಲುವೆಂಬ ಬ್ಯಾನರ್​ಗಳು

ಮಹಾರಾಷ್ಟ್ರ ಚುನಾವಣೆಯ ಮತದಾನದ ನಂತರ, ಈಗ ಎಲ್ಲರೂ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ, ಆದರೆ ಅದಕ್ಕೂ ಮೊದಲು, ರಾಜ್ಯದಲ್ಲಿ ಈಗಾಗಲೇ ಪೋಸ್ಟರ್ ತಯಾರಿಕೆ ಪ್ರಾರಂಭವಾಗಿದೆ. ಫಲಿತಾಂಶಕ್ಕೆ ಇನ್ನೂ ಸಮಯವಿದ್ದರೂ ಬಾರಾಮತಿಯಲ್ಲಿ ಅಜಿತ್ ಪವಾರ್ ಭವಿಷ್ಯದ ಮುಖ್ಯಮಂತ್ರಿ ಎಂಬ ಪೋಸ್ಟರ್ ಗಳನ್ನು ಹಾಕಲಾಗಿದೆ. ಈ ಪೋಸ್ಟರ್‌ಗಳಲ್ಲಿ ಸತತ ಎಂಟನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಅಜಿತ್‌ ಪವಾರ್‌ಗೆ ಅಭಿನಂದನೆಗಳು ಎಂದು ಬರೆಯಲಾಗಿದ್ದು, ಈ ಪೋಸ್ಟರ್‌ಗಳು ಮಹಾಯುತಿಯೊಳಗೆ ಭಾರೀ ಚರ್ಚೆಗೆ ಗ್ರಾಸವಾಗಿವೆ.

ಮಹಾರಾಷ್ಟ್ರ: ಫಲಿತಾಂಶಕ್ಕೂ ಮುನ್ನವೇ ರಾರಾಜಿಸುತ್ತಿವೆ ಅಜಿತ್ ಪವಾರ್​ರದ್ದೇ ಗೆಲುವೆಂಬ ಬ್ಯಾನರ್​ಗಳು
ಬ್ಯಾನರ್
ನಯನಾ ರಾಜೀವ್
|

Updated on: Nov 23, 2024 | 9:39 AM

Share

ಮಹಾರಾಷ್ಟ್ರ ಚುನಾವಣೆಯ ಮತದಾನದ ನಂತರ, ಈಗ ಎಲ್ಲರೂ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ, ಆದರೆ ಅದಕ್ಕೂ ಮೊದಲು, ರಾಜ್ಯದಲ್ಲಿ ಈಗಾಗಲೇ ಪೋಸ್ಟರ್ ತಯಾರಿಕೆ ಪ್ರಾರಂಭವಾಗಿದೆ. ಫಲಿತಾಂಶಕ್ಕೆ ಇನ್ನೂ ಸಮಯವಿದ್ದರೂ ಬಾರಾಮತಿಯಲ್ಲಿ ಅಜಿತ್ ಪವಾರ್ ಭವಿಷ್ಯದ ಮುಖ್ಯಮಂತ್ರಿ ಎಂಬ ಪೋಸ್ಟರ್ ಗಳನ್ನು ಹಾಕಲಾಗಿದೆ. ಈ ಪೋಸ್ಟರ್‌ಗಳಲ್ಲಿ ಸತತ ಎಂಟನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಅಜಿತ್‌ ಪವಾರ್‌ಗೆ ಅಭಿನಂದನೆಗಳು ಎಂದು ಬರೆಯಲಾಗಿದ್ದು, ಈ ಪೋಸ್ಟರ್‌ಗಳು ಮಹಾಯುತಿಯೊಳಗೆ ಭಾರೀ ಚರ್ಚೆಗೆ ಗ್ರಾಸವಾಗಿವೆ.

ಫಲಿತಾಂಶ ಹೊರಬೀಳುವ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ಅಜಿತ್ ಪವಾರ್ ಬಣದ ನಾಯಕರು ಲಾಬಿ ಆರಂಭಿಸಿದ್ದಾರೆ. ಪಾರ್ವತಿ ವಿಧಾನಸಭಾ ಕ್ಷೇತ್ರ ಹಾಗೂ ಬಾರಾಮತಿ ಪ್ರದೇಶದಲ್ಲಿ ಪ್ರಶಾಂತ್ ಶರದ್ ಬಾರಾವ್ಕರ್ ಮಿತ್ರ ಪರಿವಾರ ಸುಪೇ ಪರಗಣ ಎಂಬುವರಿಂದ ಬ್ಯಾನರ್ ಗಳನ್ನು ಹಾಕಲಾಗಿದೆ.

ಇದರಲ್ಲಿ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿನಂದಿಸಿದ್ದಾರೆ. ರಸ್ತೆ ಬದಿ ಹಾಕಿರುವ ಈ ಪೋಸ್ಟರ್‌ಗಳು ರಾಜಕೀಯ ವಲಯದಲ್ಲಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಅಜಿತ್ ಪವಾರ್ ಅವರು ನಾಲ್ಕು ಬಾರಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿದ್ದರೂ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ.

ಮತ್ತಷ್ಟು ಓದಿ: ಇಂದು ಜಾರ್ಖಂಡ್, ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ

ಅಜಿತ್ ಪವಾರ್ ಅವರು ಮುಖ್ಯಮಂತ್ರಿ ಆಗುವ ಆಸೆಯನ್ನು ಹಲವು ಬಾರಿ ವೇದಿಕೆಗಳಲ್ಲಿ ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಚಿಕ್ಕಪ್ಪ ಶರದ್ ಪವಾರ್ ಅವರನ್ನು ತೊರೆದು ಬಿಜೆಪಿಯೊಂದಿಗೆ ಅಧಿಕಾರಕ್ಕೆ ಬಂದ ಅಜಿತ್ ಪವಾರ್ ಮತ್ತು ಅವರ ಕಾರ್ಯಕರ್ತರು ಮುಖ್ಯಮಂತ್ರಿಯಾಗಬೇಕು ಎಂದು ತಮ್ಮ ಆಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಸಂಜೆಯ ವೇಳೆಗೆ ಮಹಾರಾಷ್ಟ್ರದಲ್ಲಿ ಯಾರ ಸರ್ಕಾರ ರಚನೆಯಾಗಲಿದೆ ಎಂಬ ಚಿತ್ರಣ ಸ್ಪಷ್ಟವಾಗಲಿದೆ. ನಾಲ್ಕು ಬಾರಿ ಉಪ ಸಿಎಂ ಆಗಿರುವ ಇವರು ಈ ಬಾರಿ ಗೆದ್ದರೆ ಮುಖ್ಯಮಂತ್ರಿ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕು? ಬಹುತೇಕ ಎಕ್ಸಿಟ್ ಪೋಲ್‌ಗಳಲ್ಲಿ ಎನ್‌ಡಿಎ ನೇತೃತ್ವದ ಮಹಾಯುತಿ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 149 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಎನ್‌ಸಿಪಿ 59 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ 101 ಸ್ಥಾನಗಳಲ್ಲಿ, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಈ ಚುನಾವಣೆಯಲ್ಲಿ ಉದ್ಧವ್ ಶಿವಸೇನೆ ಮತ್ತು ಶಿಂಧೆ ಶಿವಸೇನೆ ಅಭ್ಯರ್ಥಿಗಳು 50 ಸ್ಥಾನಗಳಲ್ಲಿ ಮುಖಾಮುಖಿಯಾಗಿದ್ದಾರೆ.

ಎನ್‌ಸಿಪಿಯ ಪ್ರತಿಸ್ಪರ್ಧಿ ಬಣಗಳು 37 ಸ್ಥಾನಗಳಲ್ಲಿ ಪರಸ್ಪರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ರಾಜ್ಯದ 288 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20 ರಂದು ಮತದಾನ ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ