Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರ್ಪಡೆಯಾದ ಮಹಾರಾಷ್ಟ್ರದ ಮಾಜಿ ಸಚಿವ ದೀಪಕ್ ಸಾವಂತ್

ಈ ವಾರ ಪಕ್ಷಕ್ಕೆ ಸೇರ್ಪಡೆಯಾದ ಎರಡನೇ ಪ್ರಮುಖ ನಾಯಕರಾಗಿದ್ದಾರೆ ಸಾವಂತ್. ಸೋಮವಾರ, ಶಿವಸೇನಾ (ಯುಬಿಟಿ) ನಾಯಕ ಸುಭಾಷ್ ದೇಸಾಯಿ ಅವರ ಪುತ್ರ ಭೂಷಣ್ ದೇಸಾಯಿ ಏಕನಾಥ್ ಶಿಂಧೆ ಬಣ ಸೇರಿದ್ದರು.

ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರ್ಪಡೆಯಾದ ಮಹಾರಾಷ್ಟ್ರದ ಮಾಜಿ ಸಚಿವ ದೀಪಕ್ ಸಾವಂತ್
ದೀಪಕ್ ಸಾವಂತ್
Follow us
ರಶ್ಮಿ ಕಲ್ಲಕಟ್ಟ
|

Updated on: Mar 15, 2023 | 9:11 PM

ಮುಂಬೈ: ಮಹಾರಾಷ್ಟ್ರದ (Maharashtra) ಮಾಜಿ ಸಚಿವ ದೀಪಕ್ ಸಾವಂತ್ (Deepak Sawant) ಬುಧವಾರ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಸೇರಿದ್ದು ಉದ್ಧವ್ ಠಾಕ್ರೆ(Uddhav Thackeray) ನೇತೃತ್ವದ ಶಿವಸೇನಾಗೆ (ಯುಬಿಟಿ)ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಮುಂಬೈನ ಮೇಡಮ್ ಕಾಮಾ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿ ಬಾಳಾಸಾಹೇಬ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲ ಸಾವಂತ್ ಶಿಂಧೆ ಟೀಂ ಸೇರಿದ್ದಾರೆ. ಮೂರು ಬಾರಿ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿರುವ ಸಾವಂತ್ ಅವರನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮಾರಂಭದಲ್ಲಿ ಸ್ವಾಗತಿಸಿದ್ದು, ಠಾಕ್ರೆ ನೇತೃತ್ವದ ಬಣದಿಂದ ಸಾವಂತ್ ಕಡ್ಡಾಯವಾಗಿ ನಿವೃತ್ತರಾಗಿದ್ದಾರೆ. ಅವರ ಅನುಭವದಿಂದ ನಾವು ಪ್ರಯೋಜನ ಪಡೆಯುತ್ತೇವೆ ಎಂದಿದ್ದಾರೆ.

ಈ ವಾರ ಪಕ್ಷಕ್ಕೆ ಸೇರ್ಪಡೆಯಾದ ಎರಡನೇ ಪ್ರಮುಖ ನಾಯಕರಾಗಿದ್ದಾರೆ ಸಾವಂತ್. ಸೋಮವಾರ, ಶಿವಸೇನಾ (ಯುಬಿಟಿ) ನಾಯಕ ಸುಭಾಷ್ ದೇಸಾಯಿ ಅವರ ಪುತ್ರ ಭೂಷಣ್ ದೇಸಾಯಿ ಏಕನಾಥ್ ಶಿಂಧೆ ಬಣ ಸೇರಿದ್ದರು. ಪಕ್ಷದ ಹಿರಿಯ ನಾಯಕರಾದ ಸುಭಾಷ್ ದೇಸಾಯಿ ಅವರನ್ನು ಠಾಕ್ರೆ ಕುಟುಂಬಕ್ಕೆ ಆಪ್ತರು ಮತ್ತು ಪಕ್ಷದ ಮುಖವಾಣಿ ಸಾಮ್ನಾ ಮಾಲೀಕತ್ವದ ಪ್ರಬೋಧನ್ ಪ್ರಕಾಶನದ ಟ್ರಸ್ಟಿ ಎಂದು ಪರಿಗಣಿಸಲಾಗಿದೆ.

ಬುಧವಾರದ ಕಾರ್ಯಕ್ರಮದಲ್ಲಿ ಶಿಂಧೆ, ಶಿವಸೇನಾ ಸಂಸ್ಥಾಪಕ ಬಾಳ್ ಠಾಕ್ರೆ ಅವರಿಂದ ಪ್ರಭಾವಿತರಾದ ದೀಪಕ್ ಸಾವಂತ್ ಅವರು ಮಹಾರಾಷ್ಟ್ರದ ಬುಡಕಟ್ಟು ಪ್ರದೇಶಗಳಲ್ಲಿನ ಅಪೌಷ್ಟಿಕತೆಯನ್ನು ಕಡಿಮೆ ಮಾಡಲು ಮತ್ತು ದೂರದ ಪ್ರದೇಶಗಳ ಜನರಿಗೆ ಆರೋಗ್ಯವನ್ನು ತಲುಪಿಸಲು ಟೆಲಿಮೆಡಿಸಿನ್ ಬಳಕೆಗಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಕ್ಕಾಗಿ ಶ್ಲಾಘಿಸಿದರು.

ಇದನ್ನೂ ಓದಿ:ಅದಾನಿ ಗ್ರೂಪ್ ವಿರುದ್ಧ ಇಡಿಗೆ ದೂರು ಸಲ್ಲಿಸುವುದನ್ನು ಪೊಲೀಸ್ ತಡೆದ ನಂತರ ಪತ್ರವನ್ನು ಇಮೇಲ್ ಮಾಡಿದ ಮಲ್ಲಿಕಾರ್ಜುನ ಖರ್ಗೆ

ಪ್ರಚಾರದಿಂದ ದೂರ ಉಳಿದು ಸದ್ದಿಲ್ಲದೆ ಕೆಲಸ ಮಾಡಿದರು. ನಾನು ಅವರನ್ನು ಶಿವಸೇನಾಗೆ ಸ್ವಾಗತಿಸುತ್ತೇನೆ ಅವರ ಕೆಲಸದಿಂದ ನಾನು ಪ್ರಭಾವಿತನಾಗಿದ್ದೇನೆ ಎಂದು ಶಿಂಧೆ ಹೇಳಿದ್ದಾರೆ.

ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ-ಶಿವಸೇನಾ ಸಮ್ಮಿಶ್ರ ಸರ್ಕಾರದಲ್ಲಿ ಸಾವಂತ್ ಅವರು 2014 ಮತ್ತು 2018 ರ ನಡುವೆ ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದರು. ಆದರೆ ಉದ್ಧವ್ ಠಾಕ್ರೆ ಅವರಿಗೆ ವಿಧಾನ ಪರಿಷತ್ತಿನಲ್ಲಿ ಮತ್ತೊಂದು ಅವಧಿಯನ್ನು ನೀಡದಿರಲು ನಿರ್ಧರಿಸಿದರು. 2018 ರಲ್ಲಿ ಸಾವಂತ್ ಅವರು ಸಂಪುಟದಿಂದ ನಿರ್ಗಮಿಸಿದ ನಂತರ, ಫಡ್ನವೀಸ್ ಅವರು ಆಗ ತಮ್ಮ ತಂಡದಲ್ಲಿ ಸಚಿವರಾಗಿದ್ದ ಏಕನಾಥ್ ಶಿಂಧೆಗೆ ತಮ್ಮ ಖಾತೆಯನ್ನು ನೀಡಿದ್ದರು.

ನಾನು ಮಂತ್ರಿಯಾಗಲು ಬಯಸುವುದಿಲ್ಲ ಆದರೆ ನನ್ನ ಕೌಶಲ್ಯವನ್ನು ಪಕ್ಷವು ಬಳಸಬೇಕೆಂದು ಬಯಸುತ್ತೇನೆ ಎಂದಿದ್ದರು ಸಾವಂತ್. “ನಾನು ನನ್ನ ಕೌಶಲ್ಯಗಳನ್ನು ಬಳಸಲು ಬಯಸಿದ್ದೆ. ಅವಕಾಶವನ್ನು ಪಡೆದುಕೊಂಡಿದ್ದೇನೆ ಮತ್ತು ಆದ್ದರಿಂದ ನಾನು ಶಿವಸೇನಾದೊಂದಿಗೆ ಕೆಲಸ ಮಾಡಲು ನಿರ್ಧರಿಸಿದೆ. ನನಗೆ ಮಂತ್ರಿಗಿರಿ ಬೇಡ, ನಾನು ಕೆಲಸ ಮಾಡಲು ಮಾತ್ರ ಬಯಸುತ್ತೇನೆ… ಆದರೆ ಉದ್ಧವ್ ಜೀ ಅವರು ನನಗೆ ಏಕೆ ಯಾವುದೇ ಕೆಲಸವನ್ನು ವಹಿಸಲಿಲ್ಲ ಎಂದು ನನಗೆ ಗೊತ್ತಿಲ್ಲ. ನಾನು ಶಿವಸೇನಾವನ್ನು ತಳಮಟ್ಟದವರೆಗೆ ಕೊಂಡೊಯ್ಯಲು ಬಯಸುತ್ತೇನೆ ಎಂದಿದ್ದಾರೆ ಸಾವಂತ್ ಹೇಳಿದ್ದಾರೆ.

ಅವರು ಏಕನಾಥ್ ಶಿಂಧೆ ಅವರ ಪರಿಕಲ್ಪನೆಯಡಿಯಲ್ಲಿ ಬಾಳ್ ಠಾಕ್ರೆ ಅಪಘಾತ ವಿಮಾ ಯೋಜನೆಯನ್ನು ಪ್ರಾರಂಭಿಸಲು ಕೇಳಿಕೊಂಡರು. ಅಂಧೇರಿಯಲ್ಲಿ ವಾಸಿಸುವ ಸಾವಂತ್ ಈ ವರ್ಷದ ಜನವರಿಯಲ್ಲಿ ಟ್ರಕ್ ಅವರ ಕಾರಿಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು