AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಜೈಲಿನಿಂದ ಬಿಡುಗಡೆಗೊಂಡ ಮಹಾರಾಷ್ಟ್ರದ ಮಾಜಿ ಸಚಿವ

ಮಹಾರಾಷ್ಟ್ರದ ಮಾಜಿ ಸಚಿವ ಜೈಲಿನಿಂದ ಬಿಡುಗಡೆ. ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ 1 ವರ್ಷದ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Maharashtra: ಜೈಲಿನಿಂದ ಬಿಡುಗಡೆಗೊಂಡ ಮಹಾರಾಷ್ಟ್ರದ ಮಾಜಿ ಸಚಿವ
Anil Deshmukh
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Dec 28, 2022 | 6:26 PM

Share

ಮುಂಬೈ: ಮಹಾರಾಷ್ಟ್ರ(Maharashtra) ಮಾಜಿ ಸಚಿವ ಜೈಲಿನಿಂದ ಬಿಡುಗಡೆ. ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ (anil deshmukh) ದೇಶಮುಖ್ 1 ವರ್ಷದ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲುವಾಸದ ನಂತರ ಇಂದು ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಅವರ ಪಕ್ಷದ ಪ್ರಮುಖ ನಾಯಕರು ಮತ್ತು ಬೆಂಬಲಿಗರು ವೀರೋಚಿತ ಸ್ವಾಗತವನ್ನು ನೀಡಿದರು. 72 ವರ್ಷದ ಅವರು ಕೇಂದ್ರೀಯ ತನಿಖಾ ದಳ ಅವರ ವಿರುದ್ಧ ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದರು.

ದೇಶಮುಖ್ ಅವರನ್ನು ಸ್ವಾಗತಿಸಲು ಜೈಲಿನ ಹೊರಗೆ ಕಾಯುತ್ತಿದ್ದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕರು, ಸಿದ್ಧಿವಿನಾಯಕ ದೇವಸ್ಥಾನಕ್ಕೆ ಮೆರವಣಿಗೆ ಹೋಗುತ್ತಾರೆ. ಜೊತೆಗೆ ವರ್ಲಿಯಲ್ಲಿರುವ ಅವರ ಮನೆಗೆ ಓಪನ್ ಜಿಪಿನಲ್ಲಿ ಯಾತ್ರೆ ಮಾಡಿದ್ದು, ಈ ಮೆರವಣಿಗೆಯಲ್ಲಿ ಸಂಸದೆ ಮತ್ತು ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಕೂಡ ಭಾಗವಹಿಸುತ್ತಾರೆ.

ಎರಡು ಪ್ರಕರಣಗಳಲ್ಲಿ ಜೈಲಿನಲ್ಲಿರುವ ಮತ್ತು ಈ ಹಿಂದೆ ಅಮಾನತುಗೊಂಡಿರುವ ಸಚಿನ್ ವಾಝೆ ಅವರ ಆದೇಶದ ಮೇರೆಗೆ ನನ್ನನ್ನು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಇರಿಸಲಾಗಿತ್ತು ಎಂದು ದೇಶಮುಖ್ ಬಿಡುಗಡೆಯಾದ ನಂತರ ಮಾಧ್ಯಮಗಳಿಗೆ ತಿಳಿಸಿದರು. ಯಾವುದೇ ಅಪರಾಧಕ್ಕಾಗಿ ನನ್ನನ್ನು ಜೈಲಿಗೆ ಹಾಕಲಾಯಿತು. ಆದರೆ ಅಂತಿಮವಾಗಿ, ನ್ಯಾಯಾಲಯದಿಂದ ನನಗೆ ನ್ಯಾಯ ಸಿಕ್ಕಿತು. ದೇಶದ ಹೊಸ ಆಡಳಿತದಲ್ಲಿ ನನಗೆ ನಂಬಿಕೆಯಿದೆ. ನಾನು ಭಾರತದ ಸಂವಿಧಾನದಲ್ಲಿ ನಂಬಿಕೆ ಹೊಂದಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ:  ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್‌

ಡಿಸೆಂಬರ್ 12ರಂದು ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿತು, ಆದರೆ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಅದನ್ನು ಪ್ರಶ್ನಿಸಲು ಸಮಯ ಕೋರಿದ್ದರಿಂದ ನ್ಯಾಯಾಧೀಶರು ಆದೇಶವನ್ನು 10 ದಿನಗಳವರೆಗೆ ಸ್ಥಗಿತಗೊಳಿಸಿದರು. ಏಜೆನ್ಸಿಯು ಉನ್ನತ ನ್ಯಾಯಾಲಯಕ್ಕೆ ಹೋಗಿದೆ, ಆದರೆ ಚಳಿಗಾಲದ ರಜೆಯ ನಂತರ ಜನವರಿಯಲ್ಲಿ ನ್ಯಾಯಾಲಯವು ಮತ್ತೆ ತೆರೆದ ನಂತರವೇ ಅದರ ಮೇಲ್ಮನವಿಯನ್ನು ಆಲಿಸಬಹುದು ಎಂದು ಹೇಳಿದೆ.

ಈ ಹಿಂದೆ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಅವರಿಗೆ ನೀಡಿದ್ದ ಜಾಮೀನಿನ ಮೇಲೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಅವರು ಅಕ್ಟೋಬರ್‌ನಲ್ಲಿ ಜಾಮೀನು ಪಡೆದರು, ಆದರೆ ಸಿಬಿಐ ದಾಖಲಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೈಲಿನ ಇರಬೇಕಾಗಿತ್ತು. ದೇಶಮುಖ್ ಅವರು ರಾಜ್ಯದ ಗೃಹ ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಕೆಲವು ಪೊಲೀಸ್ ಅಧಿಕಾರಿಗಳ ಮೂಲಕ ಮುಂಬೈನ ವಿವಿಧ ಬಾರ್‌ಗಳಿಂದ 4.7 ಕೋಟಿ ರೂ. ಸಂಗ್ರಹಿಸಿದ್ದಾರೆ ಎಂದು ಸಂಸ್ಥೆ ಹೇಳುತ್ತದೆ.

ಜಾಮೀನು ನೀಡುವಾಗ, ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಅವರ ಹೇಳಿಕೆಯನ್ನು ಹೊರತುಪಡಿಸಿ, ಬಾರ್ ಮಾಲೀಕರಿಂದ ಹಣ ಸುಲಿಗೆ ಮಾಡಲಾಗುತ್ತಿದೆ ಎಂದು ಸೂಚಿಸಲು ಸಿಬಿಐಗೆ ಯಾವುದೇ ಸಾಕ್ಷಿ ಇಲ್ಲ ಎಂದು ಹೈಕೋರ್ಟ್ ಹೇಳಿದೆ. ಸಚಿನ್ ವಾಝೆ, ದೇಶ್‌ಮುಖ್ ಅವರು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದರು, ಆದರೆ ಅವರಿಗೆ ನವೆಂಬರ್‌ನಿಂದ ಜಾಮೀನು ನೀಡಲಾಗಿದೆ. ವೈದ್ಯಕೀಯ ಕಾರಣಗಳು ಹಾಗೂ ತಮ್ಮ ವಿರುದ್ಧದ ಪ್ರಕರಣದಲ್ಲಿನ ಲೋಪದೋಷಗಳನ್ನು ಉಲ್ಲೇಖಿಸಿ ದೇಶಮುಖ್ ಜಾಮೀನಿಗೆ ಮನವಿ ಮಾಡಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Wed, 28 December 22

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್