AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಫ್ಟ್​ ಕೊಡ್ತೀನಿ ಎಂದು ಕಾರು ಹತ್ತಿಸಿಕೊಂಡು ಕೊಂದೇ ಬಿಟ್ಟ, ದೇಹ ಒಳಗಿಟ್ಟು ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ್ರೂ ಸಿಕ್ಕಿಬಿದ್ದ

ಗಣೇಶ್ ಚೌಹಾಣ್ ಎಂಬ ಬ್ಯಾಂಕ್ ಏಜೆಂಟ್ 1 ಕೋಟಿ ರೂ. ವಿಮಾ ಹಣಕ್ಕಾಗಿ ತನ್ನ ಸಾವಿನ ನಾಟಕವಾಡಿದ್ದಾನೆ. ಅಮಾಯಕನಿಗೆ ಲಿಫ್ಟ್ ಕೊಟ್ಟು ಕೊಂದು, ಆ ದೇಹವನ್ನು ತನ್ನ ಕಾರಿನಲ್ಲಿಟ್ಟು ಸುಟ್ಟುಹಾಕಿದ್ದ. ಆದರೆ, ಪೊಲೀಸರ ತನಿಖೆಯಿಂದ ಆತನ ನಕಲಿ ಸಾವು ಬಯಲಿಗೆ ಬಿದ್ದಿದ್ದು, ಪ್ರಿಯತಮೆಗೆ ಸಂದೇಶ ಕಳುಹಿಸಿ ಸಿಕ್ಕಿಬಿದ್ದಿದ್ದಾನೆ. ಮಹಾರಾಷ್ಟ್ರದಲ್ಲಿ ನಡೆದ ಈ ವಿಮಾ ವಂಚನೆ ಪ್ರಕರಣದಲ್ಲಿ ಆತನನ್ನು ಬಂಧಿಸಲಾಗಿದೆ.

ಲಿಫ್ಟ್​ ಕೊಡ್ತೀನಿ ಎಂದು ಕಾರು ಹತ್ತಿಸಿಕೊಂಡು ಕೊಂದೇ ಬಿಟ್ಟ, ದೇಹ ಒಳಗಿಟ್ಟು ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ್ರೂ ಸಿಕ್ಕಿಬಿದ್ದ
ಗಣೇಶ್ ಚೌಹಾಣ್
ನಯನಾ ರಾಜೀವ್
|

Updated on: Dec 16, 2025 | 7:58 AM

Share

ಮುಂಬೈ, ಡಿಸೆಂಬರ್ 16: ಮಹಾರಾಷ್ಟ್ರದ ಲಾತೂರಿನಲ್ಲಿ ಕಾರೊಂದು ಸುಟ್ಟುಕರಕಲಾದ ರೀತಿಯಲ್ಲಿ ಪತ್ತೆಯಾಗಿತ್ತು, ಅದರಲ್ಲಿ ಗೋಣಿಚೀಲದಲ್ಲಿದ್ದ ಶವ(Dead Body) ಕೂಡ ಬೆಂದು ಹೋಗಿತ್ತು. ಈ ಕಾರು ಬ್ಯಾಂಕ್ ವಸೂಲಾತಿ ಏಜೆಂಟ್ ಗಣೇಶ್ ಚೌಹಾಣ್​ನದ್ದು ಆದ ಕಾರಣ ಆತನೇ ಸಾವನ್ನಪ್ಪಿದ್ದಾನೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ನಡೆದಿರುವ ಘಟನೆಯೇ ಬೇರೆ, ಈ ಗಣೇಶ್ ಚೌಹಾಣ್ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವನಿಗೆ ಲಿಫ್ಟ್​ ಕೊಡುತ್ತೀನಿ ಎಂದು ಹತ್ತಿಸಿಕೊಂಡು ಕೊಂದೇ ಬಿಟ್ಟಿದ್ದ. ಬಳಿಕ ಆತನನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿರಿಸಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ.

ಆದರೆ ಗಣೇಶ್​ಗೆ ಮತ್ತೊಬ್ಬನನ್ನು ಕೊಲ್ಲುವ ಉದ್ದೇಶವಿರಲಿಲ್ಲ, ಒಟ್ಟಿನಲ್ಲಿ ತಾನು ಸತ್ತಿದ್ದೇನೆಂದು ಎಲ್ಲರೂ ತಿಳಿದುಕೊಳ್ಳಬೇಕೆಂಬ ಉದ್ದೇಶವಿದ್ದಿದ್ದು ಸ್ಪಷ್ಟವಾಗಿದೆ. ಕಾರಿನ ಮಾಲೀಕರನ್ನು ಪೊಲೀಸರು ಪತ್ತೆ ಹಚ್ಚಿದಾಗ ಅವರು ಅದನ್ನು ತಮ್ಮ ಸಂಬಂಧಿಕರೊಬ್ಬರಿಗೆ ನೀಡಿರುವುದು ಕಂಡುಬಂದಿತ್ತು. ಆ ವ್ಯಕ್ತಿ ಸಂಬಂಧಿ ಗಣೇಶ್​ ಚೌಹಾಣ್​ ಸಂಪರ್ಕಿಸಲು ಮುಂದಾದಾಗ ಆತ ಮನೆಗೆ ಬಂದಿಲ್ಲ, ಮೊಬೈಲ್ ಕೂಡ ಸ್ವಿಚ್ಡ್​ ಆಫ್ ಆಗಿದೆ ಎಂದು ಪೊಲೀಸರಿಗೆ ತಿಳಿಸಲಾಯಿತು.

ಈ ಎಲ್ಲಾ ಸಂಗತಿಗಳ ಆಧಾರದ ಮೇಲೆ ಮೃತಪಟ್ಟ ವ್ಯಕ್ತಿ ಗಣೇಶ್ ಎಂಬುದು ಆರಂಭಿಕ ಊಹೆಯಾಗಿತ್ತು. ಆದರೆ ಪೊಲೀಸರ ತನಿಖೆ ಮುಂದುವರೆದಂತೆ ಪೊಲೀಸರಿಗೆ ಹಲವು ಅಂಶಗಳು ಮನವರಿಕೆಯಾಗುತ್ತಾ ಹೋಗಿತ್ತು. ಆತನಿಗೆ ಓರ್ವ ಯುವತಿ ಜತೆ ಪ್ರೀತಿ ಇದೆ ಎಂಬುದು ತಿಳಿದುಬಂದಿತ್ತು.

ಮತ್ತಷ್ಟು ಓದಿ: ಮಹಾರಾಷ್ಟ್ರ: ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿರಿಸಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಆಕೆಯನ್ನು ಸಂಪರ್ಕಿಸಿದಾಗ ಈ ಘಟನೆಯ ಬಳಿಕ ಗಣೇಶ್ ಬೇರೊಂದು ನಂಬರ್​ ಬಳಸಿ ಆಕೆಗೆ ಸಂದೇಶ ಕಳುಹಿಸಿರುವುದು ತಿಳಿದುಬಂದಿತ್ತು. ಸತ್ತಿದ್ದಾನೆಂದು ಭಾವಿಸಿದ ವ್ಯಕ್ತಿ ಜೀವಂತವಾಗಿದ್ದಾನೆ ಎಂಬುದನ್ನು ಅರಿತ ಪೊಲೀಸರು ಹುಡುಕಾಟ ಆರಂಭಿಸಿದ್ದರು.

ಆ ಫೋನ್ ನಂಬರ್ ಪೊಲೀಸರನ್ನು ಕೊಲ್ಹಾಪುರಕ್ಕೆ ಕೊಂಡೊಯ್ದಿತ್ತು, ಅಲ್ಲಿ ಚೌಹಾಣ್ ಸಿಕ್ಕಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ. ಈ ಘಟನೆ ಬಗ್ಗೆ ಆತನನ್ನು ಪ್ರಶ್ನಿಸಿದಾಗ ಆತ 1 ಕೋಟಿ ರೂಗಳಜೀವ ವಿಮಾ ಪಾಲಿಸಿಯನ್ನು ಮಾಡಿಸಿದ್ದ, ಗೃಹ ಸಾಲದ ಹಣವನ್ನು ತೀರಿಸಲು ಈ ನಾಟಕವಾಡಿದ್ದ, ಅದಕ್ಕೆ ಒಂದು ಅಮಾಯಕನ ಜೀವವನ್ನು ಬಲಿ ಪಡೆದಿದ್ದ ಎಂಬುದು ತಿಳಿದುಬಂದಿದೆ.

ಶನಿವಾರ ಔಸಾದ ತುಳಜಾಪುರ ಟಿ ಜಂಕ್ಷನ್​ನಲ್ಲಿ ಗೋವಿಂದ್ ಯಾದವ್ ಎಂಬ ವ್ಯಕ್ತಿಗೆ ಗಣೇಶ್ ಲಿಫ್ಟ್​ ಕೊಟ್ಟಿದ್ದ. ಯಾದವ್ ಕುಡಿದ ಮತ್ತಿನಲ್ಲಿದ್ದ, ಚೌಹಾಣ್ ಇದರ ಲಾಭವನ್ನು ಪಡೆದಿದ್ದ.ಆತ ಕಾರನ್ನು ನಿಲ್ಲಿಸಿ ಯಾದವ್​ಗೆ ಊಟ ತಂದುಕೊಟ್ಟಿದ್ದ, ಊಟದ ಬಳಿಕ ಯಾದವ್ ನಿದ್ರೆಗೆ ಜಾರಿದ್ದ, ಬಳಿಕ ಕೊಲೆ ಮಾಡಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ