AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ಬೆಲೆಗಾಗಿ ಮುಂಬೈಯತ್ತ ಬೃಹತ್ ಮೆರವಣಿಗೆ ಹೊರಟಿದ್ದ ಮಹಾರಾಷ್ಟ್ರ ರೈತರ ಪ್ರತಿಭಟನೆ ರದ್ದು

ಈರುಳ್ಳಿ ಬೆಲೆ ವಿಚಾರಕ್ಕೆ ಸಂಬಂಧಿಸಿ ಮುಂಬೈಯತ್ತ ಬೃಹತ್ ಮೆರವಣಿ ಹೊರಟಿದ್ದ ಮಹಾರಾಷ್ಟ್ರ ರೈತರು ತಮ್ಮ ಪ್ರತಿಭಟನೆಯನ್ನು ರದ್ದುಗೊಳಿಸಿದ್ದಾರೆ. ಬೇಡಿಕೆಗಳ ಬಗ್ಗೆ ರೈತರ ನಿಯೋಗದ ಜತೆ ಮಾತುಕತೆ ನಡೆಸಿರುವುದಾಗಿ ಮುಖ್ಯಮಂತ್ರಿ ಏಕನಾಥ ಶಿಂದೆ ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿದ ಬೆನ್ನಲ್ಲೇ ಪ್ರತಿಭಟನೆಯನ್ನು ರದ್ದುಗೊಳಿಸಲಾಗಿದೆ.

ಈರುಳ್ಳಿ ಬೆಲೆಗಾಗಿ ಮುಂಬೈಯತ್ತ ಬೃಹತ್ ಮೆರವಣಿಗೆ ಹೊರಟಿದ್ದ ಮಹಾರಾಷ್ಟ್ರ ರೈತರ ಪ್ರತಿಭಟನೆ ರದ್ದು
ಮಹಾರಾಷ್ಟ್ರ ರೈತರ ಬೃಹತ್ ಮೆರವಣಿ
ಗಣಪತಿ ಶರ್ಮಾ
|

Updated on: Mar 18, 2023 | 4:33 PM

Share

ಮುಂಬೈ: ಈರುಳ್ಳಿ ಬೆಲೆ (Onion Price) ವಿಚಾರಕ್ಕೆ ಸಂಬಂಧಿಸಿ ಮುಂಬೈಯತ್ತ ಬೃಹತ್ ಮೆರವಣಿ ಹೊರಟಿದ್ದ ಮಹಾರಾಷ್ಟ್ರ (Maharashtra) ರೈತರು ತಮ್ಮ ಪ್ರತಿಭಟನೆಯನ್ನು ರದ್ದುಗೊಳಿಸಿದ್ದಾರೆ. ಬೇಡಿಕೆಗಳ ಬಗ್ಗೆ ರೈತರ ನಿಯೋಗದ ಜತೆ ಮಾತುಕತೆ ನಡೆಸಿರುವುದಾಗಿ ಮುಖ್ಯಮಂತ್ರಿ ಏಕನಾಥ ಶಿಂದೆ ರಾಜ್ಯ ವಿಧಾನಸಭೆಗೆ ಮಾಹಿತಿ ನೀಡಿದ ಬೆನ್ನಲ್ಲೇ ಪ್ರತಿಭಟನೆಯನ್ನು ರದ್ದುಗೊಳಿಸಲಾಗಿದೆ. ಸಾವಿರಾರು ರೈತರ ನಾಶಿಕ್​ನಿಂದ ಮುಂಬೈಗೆ ಮೆರವಣಿಗೆ ಹೊರಟಿದ್ದರು. 200 ಕಿಲೋಮೀಟರ್ ದೂರದ ಮೆರವಣಿಗೆಯ ನೇತೃತ್ವವನ್ನು ಸಿಪಿಐ ನಾಯಕ, ಮಾಜಿ ಶಾಸಕ ಜೀವ ಪಾಂಡು ಗವಿತ್ ವಹಿಸಿದ್ದರು. ಅವರೇ ಇದೀಗ ಪ್ರತಿಭಟನೆ ರದ್ದುಗೊಳಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಭರವಸೆಗಳನ್ನು ಈಡೇರಿಸುವುದಕ್ಕಾಗಿ ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿಗಳು ನಾಶಿಕ್ ಹಾಗೂ ಇತರ ಕೆಲವು ಕಡೆಗಳಿಗೆ ಭೇಟಿ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಸರ್ಕಾರ ಕೇವಲ ಆಶ್ವಾಸನೆಗಳನ್ನು ನೀಡುತ್ತದೆಯೇ ಹೊರತು ಆ ನಿಟ್ಟಿನಲ್ಲಿ ಕ್ರಮಕೈಗೊಳ್ಳುವುದಿಲ್ಲ ಎಂದು ನಾವು ಭಾವಿಸಿದ್ದೆವು. ಆದರೆ, ಈಗ ಅವರು ಸೂಕ್ತ ಕ್ರಮ ಕೈಗೊಳ್ಳಲು ಆರಂಭಿಸಿದ್ದು, ನಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ರೈತರೆಲ್ಲರೂ ಮನೆಗೆ ಮರಳುತ್ತಿದ್ದಾರೆ ಎಂದು ಗವಿತ್ ತಿಳಿಸಿದ್ದಾರೆ.

ಅರಣ್ಯ ಹಕ್ಕುಗಳು, ಅರಣ್ಯ ಪ್ರದೇಶ ಒತ್ತುವರಿ, ದೇಗುಲ ಟ್ರಸ್ಟ್​​ಗಳಿಗೆ ನೀಡಿರುವ ಭೂಮಿಯ ವರ್ಗಾವಣೆ, ಬೇಸಾಯಕ್ಕಾಗಿ ಕೃಷಿಕರಿಗೆ ಹುಲ್ಲುಗಾವಲು ನೀಡುವುದು ಸೇರಿದಂತೆ 14 ವಿಚಾರಗಳ ಬಗ್ಗೆ ರೈತರ ನಿಯೋಗದ ಜತೆ ಶಿಂದೆ ಮಾತುಕತೆ ನಡೆಸಿದ್ದರು. ಬೃಹತ್ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ರೈತರಿಗೆ ಮನವಿ ಮಾಡಿದ್ದ ಅವರು, ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ತಕ್ಷಣವೇ ಜಾರಿಗೆ ತರಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ: Onion Price: ಗ್ರಾಹಕರಿಗೆ ಗುಡ್ ನ್ಯೂಸ್; ಇನ್ನು ಗಗನಕ್ಕೇರಲ್ಲ ಈರುಳ್ಳಿ ಬೆಲೆ, ಸರ್ಕಾರದ ಹೊಸ ಪ್ಲಾನ್

ಕಡಿಮೆ ಬೆಲೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ಹಾನಿ ಅನುಭವಿಸುತ್ತಿರುವ ಈರುಳ್ಳಿ ಬೆಳೆಗಾರರಿಗೆ ಆರ್ಥಿಕ ಪರಿಹಾರವಾಗಿ ಕ್ವಿಂಟಲ್‌ಗೆ 350 ರೂ. ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದರು.

ರೈತರಿಗೆ ಪ್ರತಿ ಕ್ವಿಂಟಾಲ್‌ ಈರುಳ್ಳಿಗೆ 600 ರೂ. ಪರಿಹಾರ, ರೈತರಿಗೆ 12 ಗಂಟೆಗಳ ನಿರಂತರ ವಿದ್ಯುತ್ ಸರಬರಾಜು ಮತ್ತು ಕೃಷಿ ಸಾಲ ಮನ್ನಾ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು. ಬೆಲೆ ಕುಸಿತದಿಂದ ಮಹಾರಾಷ್ಟ್ರದ ಈರುಳ್ಳಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರಕ್ಕೆ ಬೇಡಿಕೆಗಳನ್ನು ಸಲ್ಲಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ