AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 5.93 ಕೋಟಿ ರೂ. ಮೌಲ್ಯದ ವಿದ್ಯುತ್ ಕದ್ದ ಅಪ್ಪ-ಮಗ!; ಮಹಾರಾಷ್ಟ್ರದಲ್ಲೊಂದು ವಿಚಿತ್ರ ಘಟನೆ

ಚಂದ್ರಕಾಂತ್ ಭಾಂಬ್ರೆ ಮತ್ತು ಅವರ ಪುತ್ರ ಸಚಿನ್ ವಿರುದ್ಧ ವಿದ್ಯುತ್ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮುರ್ಬಾದ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

Viral News: 5.93 ಕೋಟಿ ರೂ. ಮೌಲ್ಯದ ವಿದ್ಯುತ್ ಕದ್ದ ಅಪ್ಪ-ಮಗ!; ಮಹಾರಾಷ್ಟ್ರದಲ್ಲೊಂದು ವಿಚಿತ್ರ ಘಟನೆ
ಬಿರುಗಾಳಿಯಿಂದ ವಿದ್ಯುತ್ ವಿತರಣೆಯಲ್ಲಿ ಸಮಸ್ಯೆಯಾಗಿತ್ತು
TV9 Web
| Edited By: |

Updated on:May 14, 2022 | 7:08 PM

Share

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುರ್ಬಾದ್ ಪ್ರದೇಶದಲ್ಲಿ 5.93 ಕೋಟಿ ರೂ. ವಿದ್ಯುತ್ ಕಳ್ಳತನದ ಆರೋಪದ ಮೇಲೆ ತಂದೆ ಮತ್ತು ಮಗ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 5 ರಂದು ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MSEDCL) ತಂಡವು ಫಲೇಗಾಂವ್‌ನಲ್ಲಿ ಕಲ್ಲು ಪುಡಿ ಮಾಡುವ ಘಟಕದ ಮೇಲೆ ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ.

“ಮೀಟರ್ ರೀಡಿಂಗ್ ಅನ್ನು ಟ್ಯಾಂಪರಿಂಗ್ ಮಾಡುವ ಗ್ಯಾಜೆಟ್ ಬಳಕೆಯಿಂದ ರಿಮೋಟ್ ಮೂಲಕ ವಿದ್ಯುತ್ ಕದಿಯಲಾಗುತ್ತಿತ್ತು. ಕಳೆದ 29 ತಿಂಗಳಲ್ಲಿ ಒಟ್ಟು 34,09,901 ಯೂನಿಟ್ 5.93 ಕೋಟಿ ರೂ. ಮೌಲ್ಯದ ವಿದ್ಯುತ್ ಕಳ್ಳತನವಾಗಿದೆ” ಎಂದು ಅವರು ಹೇಳಿದ್ದಾರೆ.

ಚಂದ್ರಕಾಂತ್ ಭಾಂಬ್ರೆ ಮತ್ತು ಅವರ ಪುತ್ರ ಸಚಿನ್ ವಿರುದ್ಧ ವಿದ್ಯುತ್ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮುರ್ಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ತಿಂಗಳು ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ (MSEDCL) ವಿದ್ಯುತ್ ಕದಿಯಲು ಬಳಸಲಾದ 46,000 ಲೋಹದ ಕೊಕ್ಕೆಗಳನ್ನು ತೆಗೆದುಹಾಕಿತ್ತು. ಇದರಿಂದ ಸುಮಾರು 500 ಮೆಗಾ ವ್ಯಾಟ್ ವಿದ್ಯುತ್ ಉಳಿತಾಯವಾಗಿದೆ.

ಮಹಾರಾಷ್ಟ್ರ ಇಂಧನ ಸಚಿವ ನಿತಿನ್ ರಾವತ್ ಮಾತನಾಡಿ, ಕಳೆದ 22 ದಿನಗಳಿಂದ ಮಹಾರಾಷ್ಟ್ರದಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಆಗಿಲ್ಲ. ಗ್ರಾಹಕರು ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸಿ ವಿದ್ಯುತ್ ಪೋಲು ಮಾಡುವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Sat, 14 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!