AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uddhav Thackeray: ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ 2012ರ ಜುಲೈ 20ರಂದು ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಬೇಕಾಯಿತು. ವೈದ್ಯರು ಅವರ ಹೃದಯದಲ್ಲಿ 3 ಮುಖ್ಯ ಅಪಧಮನಿಗಳಲ್ಲಿನ ಬಹು ಅಡೆತಡೆಗಳ ಸಂಕೋಚನವನ್ನು ತೆಗೆದುಹಾಕಲು 8 ಸ್ಟೆಂಟ್‌ಗಳನ್ನು ಹಾಕಿದ್ದರು.

Uddhav Thackeray: ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು
ಉದ್ಧವ್ ಠಾಕ್ರೆ
ಸುಷ್ಮಾ ಚಕ್ರೆ
|

Updated on: Oct 14, 2024 | 4:14 PM

Share

ಮುಂಬೈ: ಶಿವಸೇನಾ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆಂಜಿಯೋಪ್ಲ್ಯಾಸ್ಟಿ ಪ್ರಕ್ರಿಯೆಗಾಗಿ ಇಂದು ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರಿಗೆ ತಪಾಸಣೆ ನಡೆಸಲಾಗುತ್ತಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೂ ಮೊದಲು, ಉದ್ಧವ್ ಠಾಕ್ರೆ ಅವರು 2012ರಲ್ಲಿ ಕೂಡ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.

ಉದ್ಧವ್ ಠಾಕ್ರೆ ಅವರಿಗೆ ಇಂದು ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮೊದಲು 2014ರಲ್ಲಿ ಉದ್ಧವ್ ಠಾಕ್ರೆ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಯಿತು. ಆಸ್ಪತ್ರೆಯ ಮೂಲಗಳ ಪ್ರಕಾರ, ಉದ್ಧವ್ ಠಾಕ್ರೆ ಇನ್ನೂ ಒಂದು ದಿನ ಆಸ್ಪತ್ರೆಯಲ್ಲಿ ಉಳಿಯಬೇಕಾಗುತ್ತದೆ. ನಾಳೆ ಸಂಜೆ ಅಥವಾ ಬುಧವಾರ ಅವರನ್ನು ಡಿಸ್ಚಾರ್ಜ್ ಮಾಡಬಹುದು.

ಇದನ್ನೂ ಓದಿ: ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ

ಆಂಜಿಯೋಪ್ಲಾಸ್ಟಿ ನಂತರ ಉದ್ಧವ್ ಠಾಕ್ರೆ ಅವರ ಆರೋಗ್ಯ ಸುಧಾರಿಸಲಿದೆ ಎನ್ನಲಾಗಿದೆ. ಆತಂಕ ಪಡುವ ಅಗತ್ಯವಿಲ್ಲ, ಶೀಘ್ರದಲ್ಲೇ ಅವರು ಚೇತರಿಸಿಕೊಳ್ಳುತ್ತಾರೆ, ಮನೆಗೆ ಮರಳುತ್ತಾರೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸುತ್ತಾರೆ ಎನ್ನಲಾಗಿದೆ.

ಉದ್ಧವ್ ಠಾಕ್ರೆ ಅವರು 2012ರ ಜುಲೈ 20ರಂದು ಆಂಜಿಯೋಪ್ಲ್ಯಾಸ್ಟಿಯ ಅನುಸರಣೆಯಲ್ಲಿ ಕಾರ್ಯವಿಧಾನಕ್ಕೆ ಒಳಗಾಗಬೇಕಾಯಿತು. ವೈದ್ಯರು ಅವರ ಹೃದಯದಲ್ಲಿ ಮೂರು ಮುಖ್ಯ ಅಪಧಮನಿಗಳಲ್ಲಿನ ಬಹು ಅಡೆತಡೆಗಳ ಸಂಕೋಚನವನ್ನು ತೆಗೆದುಹಾಕಲು 8 ಸ್ಟೆಂಟ್‌ಗಳನ್ನು ಹಾಕಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More