AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಅರೆಸ್ಟ್ ಮಾಡಿದ ಇ ಡಿ ಅಧಿಕಾರಿಗಳು; ಪರಮ್​ ಬೀರ್​ ಸಿಂಗ್​ ಎಲ್ಲಿ?

Anil Deshmukh: ತಮ್ಮ ವಿರುದ್ಧದ ಆರೋಪಗಳೆಲ್ಲ ಸುಳ್ಳು ಎಂದು ಅನಿಲ್​ ದೇಶ್​ಮುಖ್​ ಹೇಳುತ್ತಲೇ ಬಂದಿದ್ದಾರೆ. ನಿನ್ನೆ ಕೂಡ ಇದನ್ನೇ  ಹೇಳಿದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಅರೆಸ್ಟ್ ಮಾಡಿದ ಇ ಡಿ ಅಧಿಕಾರಿಗಳು; ಪರಮ್​ ಬೀರ್​ ಸಿಂಗ್​ ಎಲ್ಲಿ?
ಅನಿಲ್​ ದೇಶ್​ಮುಖ್​
TV9 Web
| Updated By: Digi Tech Desk|

Updated on:Nov 02, 2021 | 10:49 AM

Share

ಮುಂಬೈ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್(Anil Deshmukh)​​ರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಸುಮಾರು 12 ತಾಸುಗಳ ಕಾಲ ತಮ್ಮ ಕಚೇರಿಯಲ್ಲಿ ಅನಿಲ್​ ದೇಶ್​ಮುಖರ್​​ನ್ನು ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಕೊನೆಯಲ್ಲಿ ಅವರನ್ನು ಬಂಧಿಸಿ ಕರೆದುಕೊಂಡು ಹೋಗಿವೆ.  ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಅನಿಲ್​ ದೇಶ್​ಮುಖ್​ ಸರಿಯಾಗಿ ಉತ್ತರಿಸಲಿಲ್ಲ..ಅವರಿಗೆ ಸಹಕಾರ ನೀಡಲು ಹಿಂದೇಟು ಹಾಕಿದ್ದೇ ಬಂಧನಕ್ಕೆ ಕಾರಣ ಎನ್ನಲಾಗಿದೆ. ಅನಿಲ್​ ದೇಶ್​ಮುಖ್​ ವಿರುದ್ಧ ಲಂಚ ಪಡೆದ ಆರೋಪ ಇದೆ. ಇದೇ ಕಾರಣಕ್ಕೆ ಈ ವರ್ಷದ ಪ್ರಾರಂಭದಲ್ಲಿ ಅವರು ತಮ್ಮ ಸಚಿವ ಸ್ಥಾನದಿಂದ ಕೆಳಗೆ ಇಳಿದಿದ್ದರು. ಇಡಿ ತಮಗೆ ನೀಡಿರುವ ಸಮನ್ಸ್​​ನ್ನು ರದ್ದುಗೊಳಿಸಬೇಕು ಎಂದು ಅನಿಲ್​ ದೇಶ್​ಮುಖ್​​ ಬಾಂಬೆ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯನ್ನು ಕೋರ್ಟ್​​ ಪುರಸ್ಕರಿಸಲಿಲ್ಲ.  ಈ ಅನಿಲ್​ ದೇಶ್​​ಮುಖ್​ ವಿರುದ್ಧ ಮುಂಬೈನ ಮಾಜಿ ಪೊಲೀಸ್​ ಉನ್ನತಾಧಿಕಾರಿ ಪರಮ್​ ಬೀರ್​ ಸಿಂಗ್​ ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದರು. ಸಿಎಂ ಉದ್ಧವ್​ ಠಾಕ್ರೆಗೆ ಪತ್ರ ಬರೆದಿದದ ಅವರು, ಗೃಹ ಸಚಿವರಾಗಿರುವ ಅನಿಲ್​ ದೇಶ್​ಮುಖ್​​ ಪೊಲೀಸ್​ ಇಲಾಖೆಯಲ್ಲಿ ತುಂಬ ಹಸ್ತಕ್ಷೇಪ ಮಾಡುತ್ತಾರೆ. ಪೊಲೀಸರನ್ನು ಬಳಸಿಕಂಡು ಪ್ರತಿ ತಿಂಗಳೂ ಬಾರ್​ ಆ್ಯಂಡ್ ರೆಸ್ಟೋರೆಂಟ್ ಸೇರಿ ವಿವಿಧ ಮೂಲಗಳಿಂದ 100 ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದರು. ಅಂದಹಾಗೆ ಮುಕೇಶ್ ಅಂಬಾನಿ ಮನೆಯ ಎದುರು ಬಾಂಬ್​ ಸಿಕ್ಕ ಪ್ರಕರಣದಲ್ಲಿ ಈ ಪರಮ್​ ಬೀರ್ ಸಿಂಗ್​ ತಮ್ಮ ಸ್ಥಾನ ಕಳೆದುಕೊಂಡಿದ್ದರು. ಅದಾದ ಬಳಿಕ ಅವರು ಅನಿಲ್​ ದೇಶ್​ಮುಖ್​ ವಿರುದ್ಧ ಆರೋಪ ಹೊರೆಸಿದ್ದರು.

ತಮ್ಮ ವಿರುದ್ಧದ ಆರೋಪಗಳೆಲ್ಲ ಸುಳ್ಳು ಎಂದು ಅನಿಲ್​ ದೇಶ್​ಮುಖ್​ ಹೇಳುತ್ತಲೇ ಬಂದಿದ್ದಾರೆ. ನಿನ್ನೆ ಕೂಡ ಇದನ್ನೇ  ಹೇಳಿದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಪರಮ್​ಬೀರ್​ ಸಿಂಗ್​ ವಿರುದ್ಧವೂ ಕೂಡ ಭ್ರಷ್ಟಾಚಾರ ಆರೋಪ ಇದೆ. ಅವರಿಗೆ ಲುಕ್​ಔಟ್​ ನೋಟಿಸ್​ ಕೂಡ ಜಾರಿ ಮಾಡಲಾಗಿದ್ದರೂ ಅವರ ಪತ್ತೆಯಿಲ್ಲ. ಈ ಬಗ್ಗೆ ನಿನ್ನೆ ಪ್ರಶ್ನೆ ಎತ್ತಿರುವ ಅನಿಲ್​ ದೇಶ್​ಮುಖ್​, ಪರಮ್​ ಬೀರ್​ ಸಿಂಗ್ ಎಲ್ಲಿ ಹೋಗಿದ್ದಾರೆ? ನನ್ನ ವಿರುದ್ಧ ಆರೋಪ ಮಾಡಿದವರೇ ಕಾಣುತ್ತಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ಅಭಿಮಾನಿಗಳಿಗೆ ಖಂಡಿತಾ ಅಪ್ಪು ಸಮಾಧಿ ದರ್ಶನಕ್ಕೆ ಅವಕಾಶ ಕೊಡ್ತೀವಿ, ಆದರೆ 2 ದಿನ ಕಾಯಿರಿ’: ಶಿವಣ್ಣ

Coriander leaves: ಅಡುಗೆಯಲ್ಲಿ ರುಚಿ ಹೆಚ್ಚಿಸಲು ಮಾತ್ರವಲ್ಲ ಕೊತ್ತಂಬರಿ ಸೊಪ್ಪು ಆರೋಗ್ಯಕ್ಕೂ ಉತ್ತಮ

Published On - 10:20 am, Tue, 2 November 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್