AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಅರೆಸ್ಟ್ ಮಾಡಿದ ಇ ಡಿ ಅಧಿಕಾರಿಗಳು; ಪರಮ್​ ಬೀರ್​ ಸಿಂಗ್​ ಎಲ್ಲಿ?

Anil Deshmukh: ತಮ್ಮ ವಿರುದ್ಧದ ಆರೋಪಗಳೆಲ್ಲ ಸುಳ್ಳು ಎಂದು ಅನಿಲ್​ ದೇಶ್​ಮುಖ್​ ಹೇಳುತ್ತಲೇ ಬಂದಿದ್ದಾರೆ. ನಿನ್ನೆ ಕೂಡ ಇದನ್ನೇ  ಹೇಳಿದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಅರೆಸ್ಟ್ ಮಾಡಿದ ಇ ಡಿ ಅಧಿಕಾರಿಗಳು; ಪರಮ್​ ಬೀರ್​ ಸಿಂಗ್​ ಎಲ್ಲಿ?
ಅನಿಲ್​ ದೇಶ್​ಮುಖ್​
TV9 Web
| Edited By: |

Updated on:Nov 02, 2021 | 10:49 AM

Share

ಮುಂಬೈ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್(Anil Deshmukh)​​ರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ (ED) ಬಂಧಿಸಿದೆ. ಸುಮಾರು 12 ತಾಸುಗಳ ಕಾಲ ತಮ್ಮ ಕಚೇರಿಯಲ್ಲಿ ಅನಿಲ್​ ದೇಶ್​ಮುಖರ್​​ನ್ನು ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಕೊನೆಯಲ್ಲಿ ಅವರನ್ನು ಬಂಧಿಸಿ ಕರೆದುಕೊಂಡು ಹೋಗಿವೆ.  ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಅನಿಲ್​ ದೇಶ್​ಮುಖ್​ ಸರಿಯಾಗಿ ಉತ್ತರಿಸಲಿಲ್ಲ..ಅವರಿಗೆ ಸಹಕಾರ ನೀಡಲು ಹಿಂದೇಟು ಹಾಕಿದ್ದೇ ಬಂಧನಕ್ಕೆ ಕಾರಣ ಎನ್ನಲಾಗಿದೆ. ಅನಿಲ್​ ದೇಶ್​ಮುಖ್​ ವಿರುದ್ಧ ಲಂಚ ಪಡೆದ ಆರೋಪ ಇದೆ. ಇದೇ ಕಾರಣಕ್ಕೆ ಈ ವರ್ಷದ ಪ್ರಾರಂಭದಲ್ಲಿ ಅವರು ತಮ್ಮ ಸಚಿವ ಸ್ಥಾನದಿಂದ ಕೆಳಗೆ ಇಳಿದಿದ್ದರು. ಇಡಿ ತಮಗೆ ನೀಡಿರುವ ಸಮನ್ಸ್​​ನ್ನು ರದ್ದುಗೊಳಿಸಬೇಕು ಎಂದು ಅನಿಲ್​ ದೇಶ್​ಮುಖ್​​ ಬಾಂಬೆ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯನ್ನು ಕೋರ್ಟ್​​ ಪುರಸ್ಕರಿಸಲಿಲ್ಲ.  ಈ ಅನಿಲ್​ ದೇಶ್​​ಮುಖ್​ ವಿರುದ್ಧ ಮುಂಬೈನ ಮಾಜಿ ಪೊಲೀಸ್​ ಉನ್ನತಾಧಿಕಾರಿ ಪರಮ್​ ಬೀರ್​ ಸಿಂಗ್​ ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದರು. ಸಿಎಂ ಉದ್ಧವ್​ ಠಾಕ್ರೆಗೆ ಪತ್ರ ಬರೆದಿದದ ಅವರು, ಗೃಹ ಸಚಿವರಾಗಿರುವ ಅನಿಲ್​ ದೇಶ್​ಮುಖ್​​ ಪೊಲೀಸ್​ ಇಲಾಖೆಯಲ್ಲಿ ತುಂಬ ಹಸ್ತಕ್ಷೇಪ ಮಾಡುತ್ತಾರೆ. ಪೊಲೀಸರನ್ನು ಬಳಸಿಕಂಡು ಪ್ರತಿ ತಿಂಗಳೂ ಬಾರ್​ ಆ್ಯಂಡ್ ರೆಸ್ಟೋರೆಂಟ್ ಸೇರಿ ವಿವಿಧ ಮೂಲಗಳಿಂದ 100 ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದರು. ಅಂದಹಾಗೆ ಮುಕೇಶ್ ಅಂಬಾನಿ ಮನೆಯ ಎದುರು ಬಾಂಬ್​ ಸಿಕ್ಕ ಪ್ರಕರಣದಲ್ಲಿ ಈ ಪರಮ್​ ಬೀರ್ ಸಿಂಗ್​ ತಮ್ಮ ಸ್ಥಾನ ಕಳೆದುಕೊಂಡಿದ್ದರು. ಅದಾದ ಬಳಿಕ ಅವರು ಅನಿಲ್​ ದೇಶ್​ಮುಖ್​ ವಿರುದ್ಧ ಆರೋಪ ಹೊರೆಸಿದ್ದರು.

ತಮ್ಮ ವಿರುದ್ಧದ ಆರೋಪಗಳೆಲ್ಲ ಸುಳ್ಳು ಎಂದು ಅನಿಲ್​ ದೇಶ್​ಮುಖ್​ ಹೇಳುತ್ತಲೇ ಬಂದಿದ್ದಾರೆ. ನಿನ್ನೆ ಕೂಡ ಇದನ್ನೇ  ಹೇಳಿದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಪರಮ್​ಬೀರ್​ ಸಿಂಗ್​ ವಿರುದ್ಧವೂ ಕೂಡ ಭ್ರಷ್ಟಾಚಾರ ಆರೋಪ ಇದೆ. ಅವರಿಗೆ ಲುಕ್​ಔಟ್​ ನೋಟಿಸ್​ ಕೂಡ ಜಾರಿ ಮಾಡಲಾಗಿದ್ದರೂ ಅವರ ಪತ್ತೆಯಿಲ್ಲ. ಈ ಬಗ್ಗೆ ನಿನ್ನೆ ಪ್ರಶ್ನೆ ಎತ್ತಿರುವ ಅನಿಲ್​ ದೇಶ್​ಮುಖ್​, ಪರಮ್​ ಬೀರ್​ ಸಿಂಗ್ ಎಲ್ಲಿ ಹೋಗಿದ್ದಾರೆ? ನನ್ನ ವಿರುದ್ಧ ಆರೋಪ ಮಾಡಿದವರೇ ಕಾಣುತ್ತಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ‘ಅಭಿಮಾನಿಗಳಿಗೆ ಖಂಡಿತಾ ಅಪ್ಪು ಸಮಾಧಿ ದರ್ಶನಕ್ಕೆ ಅವಕಾಶ ಕೊಡ್ತೀವಿ, ಆದರೆ 2 ದಿನ ಕಾಯಿರಿ’: ಶಿವಣ್ಣ

Coriander leaves: ಅಡುಗೆಯಲ್ಲಿ ರುಚಿ ಹೆಚ್ಚಿಸಲು ಮಾತ್ರವಲ್ಲ ಕೊತ್ತಂಬರಿ ಸೊಪ್ಪು ಆರೋಗ್ಯಕ್ಕೂ ಉತ್ತಮ

Published On - 10:20 am, Tue, 2 November 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ