AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಮಾಜಿ ಸಚಿವ ಅನಿಲ್​ ದೇಶ್​ಮುಖ್​​ಗೆ ನವೆಂಬರ್​ 6ರವರೆಗೆ ಇ ಡಿ ಕಸ್ಟಡಿ; ವಿಶೇಷ ಪಿಎಂಎಲ್​ಎ ಕೋರ್ಟ್​ ಆದೇಶ

Anil Deshmukh: ಇಂದು ಕೋರ್ಟ್​​ನಲ್ಲಿ ಜಾರಿ ನಿರ್ದೇಶನಾಲಯದ ಪರ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಆಫ್​ ಇಂಡಿಯಾ ಅನಿಲ್​ ಸಿಂಗ್​ ಮತ್ತು ಹಿತೇನ್ ವೆನೆಗಾಂವ್ಕರ್ ಅವರು ವಾದಿಸಿದ್ದರು.

ಮಹಾರಾಷ್ಟ್ರ ಮಾಜಿ ಸಚಿವ ಅನಿಲ್​ ದೇಶ್​ಮುಖ್​​ಗೆ ನವೆಂಬರ್​ 6ರವರೆಗೆ ಇ ಡಿ ಕಸ್ಟಡಿ; ವಿಶೇಷ ಪಿಎಂಎಲ್​ಎ ಕೋರ್ಟ್​ ಆದೇಶ
ಅನಿಲ್​ ದೇಶ್​ಮುಖ್​​
TV9 Web
| Edited By: |

Updated on:Nov 02, 2021 | 4:51 PM

Share

ಅಕ್ರಮ ಹಣ ವಸೂಲಿ, ಭ್ರಷ್ಟಾಚಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​ ಅವರನ್ನು ನವೆಂಬರ್​ 6ರವರೆಗೆ ಇಡಿ ಕಸ್ಟಡಿಗೆ ನೀಡಿ ಮುಂಬೈನ ವಿಶೇಷ ಪಿಎಂಎಲ್​ಎ (Prevention of Money Laundering Act Court) ನ್ಯಾಯಾಲಯ ಆದೇಶ ನೀಡಿದೆ. ಸತತ 12 ತಾಸುಗಳ ಕಾಲ ಅನಿಲ್​ ದೇಶ್​ಮುಖ್​​ರನ್ನು ವಿಚಾರಣೆ ನಡೆಸಿದ್ದ ಇ.ಡಿ.ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದರು. ಅನಿಲ್​ ದೇಶ್​ಮುಖ್​ ವಿಚಾರಣೆಗೆ ಸರಿಯಾಗಿ ಸ್ಪಂದಿಸದ ಕಾರಣ ಬಂಧಿಸಿದ್ದಾಗಿ ಹೇಳಿಕೊಂಡಿದ್ದರು. ಅದಾದ ಬಳಿಕ ಅವರನ್ನು ವಿಶೇಷ ಪಿಎಂಎಲ್​ಎ ನ್ಯಾಯಾಲಯದ ಎದುರು ಹಾಜರು ಪಡಿಸಿ, 14 ದಿನಗಳ ಕಾಲ ತಮ್ಮ ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದ್ದರು.  

ಅನಿಲ್ ದೇಶ್​ಮುಖ್​ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಸೆಕ್ಷನ್​​ಗಳಡಿ ಪ್ರಕರಣ ದಾಖಲಾಗಿದೆ. ಅವರು ಗೃಹ ಸಚಿವರಾಗಿದ್ದಾಗ ಪೊಲೀಸರನ್ನು ಬಳಸಿಕೊಂಡು ಪ್ರತಿ ತಿಂಗಳಿಗೆ ಸುಮಾರು 100 ಕೋಟಿ ರೂಪಾಯಿಯನ್ನು ವಿವಿಧ ಮೂಲಗಳಿಂದ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಅನಿಲ್ ದೇಶ್​ಮುಖ್​ ವಿರುದ್ಧ ಆರೋಪ ಮಾಡಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದು ಮುಂಬೈನ ಮಾಜಿ ಪೊಲೀಸ್​ ಅಧಿಕಾರಿ ಪರಮ್​ ಬೀರ್​ ಸಿಂಗ್​. ಬರೀ ಇಡಿಯಷ್ಟೇ ಅಲ್ಲದೆ ಸಿಬಿಐ (ಕೇಂದ್ರೀಯ ತನಿಖಾ ದಳ) ಕೂಡ ಅನಿಲ್​ ದೇಶ್​ಮುಖ್​ ವಿರುದ್ಧ ಎಫ್​ಐಆರ್​ ದಾಖಲು ಮಾಡಿದೆ.

ಇಂದು ಕೋರ್ಟ್​​ನಲ್ಲಿ ಜಾರಿ ನಿರ್ದೇಶನಾಲಯದ ಪರ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಆಫ್​ ಇಂಡಿಯಾ ಅನಿಲ್​ ಸಿಂಗ್​ ಮತ್ತು ಹಿತೇನ್ ವೆನೆಗಾಂವ್ಕರ್ ಅವರು ವಾದಿಸಿದ್ದರು. ಅನಿಲ್​ ದೇಶ್​ಮುಖ್​ ಪರ ಹಿರಿಯ ವಕೀಲರಾದ ವಿಕ್ರಮ್​ ಚೌಧರಿ ಮತ್ತು ಅನಿಕೇತ್​ ನಿಕಾಮ್​ ಪ್ರತಿವಾದ ಮಂಡನೆ ಮಾಡಿದ್ದರು.

ಈ ಮಧ್ಯೆ, ತಮ್ಮ ವಿರುದ್ಧದ ಆರೋಪಗಳೆಲ್ಲ ಸುಳ್ಳು ಎಂದು ಅನಿಲ್​ ದೇಶ್​ಮುಖ್​ ಹೇಳುತ್ತಲೇ ಬಂದಿದ್ದಾರೆ. ನಿನ್ನೆ ಕೂಡ ಇದನ್ನೇ  ಹೇಳಿದ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಪರಮ್​ಬೀರ್​ ಸಿಂಗ್​ ವಿರುದ್ಧವೂ ಕೂಡ ಭ್ರಷ್ಟಾಚಾರ ಆರೋಪ ಇದೆ. ಅವರಿಗೆ ಲುಕ್​ಔಟ್​ ನೋಟಿಸ್​ ಕೂಡ ಜಾರಿ ಮಾಡಲಾಗಿದ್ದರೂ ಅವರ ಪತ್ತೆಯಿಲ್ಲ. ಈ ಬಗ್ಗೆ ನಿನ್ನೆ ಪ್ರಶ್ನೆ ಎತ್ತಿರುವ ಅನಿಲ್​ ದೇಶ್​ಮುಖ್​, ಪರಮ್​ ಬೀರ್​ ಸಿಂಗ್ ಎಲ್ಲಿ ಹೋಗಿದ್ದಾರೆ? ನನ್ನ ವಿರುದ್ಧ ಆರೋಪ ಮಾಡಿದವರೇ ಕಾಣುತ್ತಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಅರೆಸ್ಟ್ ಮಾಡಿದ ಇ ಡಿ ಅಧಿಕಾರಿಗಳು; ಪರಮ್​ ಬೀರ್​ ಸಿಂಗ್​ ಎಲ್ಲಿ?

ಸಂಘಟನೆ, ಸಿದ್ಧಾಂತ, ನೇತೃತ್ವ ಮೂರೂ ಸರಿ ಇಲ್ಲದಿದ್ದಾಗ ಆಗಬೇಕಾಗಿದ್ದೆ ಆಗಿದೆ: ಜೆಡಿಎಸ್ ಸೋಲಿನ ಬಗ್ಗೆ ಸಿಟಿ ರವಿ ಪ್ರತಿಕ್ರಿಯೆ

Published On - 4:50 pm, Tue, 2 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ