Maharashtra: ಮಕ್ಕಳ ಕಳ್ಳರು ಎಂದು ಶಂಕಿಸಿ 4 ಸಾಧುಗಳ ಮೇಲೆ ಹಲ್ಲೆ

ಮಕ್ಕಳ ಕಳ್ಳರು ಎಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಅದರ ವಿಡಿಯೋ ವೈರಲ್ ಆಗಿದೆ. ಜಿಲ್ಲೆಯ ಲವಣ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Maharashtra: ಮಕ್ಕಳ ಕಳ್ಳರು ಎಂದು ಶಂಕಿಸಿ 4 ಸಾಧುಗಳ ಮೇಲೆ ಹಲ್ಲೆ
Gang attacked
Edited By:

Updated on: Sep 14, 2022 | 9:35 AM

ಮುಂಬೈ: ಮಂಗಳವಾರ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಮಕ್ಕಳ ಕಳ್ಳರು ಎಂದು ಶಂಕಿಸಿ ನಾಲ್ವರು ಸಾಧುಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಅದರ ವಿಡಿಯೋ ವೈರಲ್ ಆಗಿದೆ. ಜಿಲ್ಲೆಯ ಲವಣ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೋಲುಗಳಿಂದ ಜನ ಇರುವ ಪ್ರದೇಶದಲ್ಲಿ ಸಾಧುಗಳನ್ನು ಥಳಿಸುತ್ತಿರುವುದು ಕಂಡುಬಂದಿದೆ. ಆದರೆ ಈ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನಾವು ಯಾವುದೇ ದೂರು ಸ್ವೀಕರಿಸಿಲ್ಲ, ಆದರೆ ವೈರಲ್ ವೀಡಿಯೊಗಳನ್ನು ಪರಿಶೀಲಿಸುತ್ತಿದ್ದೇವೆ ಈ ಘಟನೆಯ ಬಗ್ಗೆ ನಿಜಾಂಶ ಏನು ಎಂದು ಪರಿಶೀಲಿಸುತ್ತಿದ್ದೇವೆ. ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಂಗ್ಲಿ ಎಸ್ಪಿ ದೀಕ್ಷಿತ್ ಗೆಡಮ್ ಸಂಸ್ಥೆ ANI ತಿಳಿಸಿದ್ದಾರೆ

ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ಘಟನೆಯನ್ನು ಖಂಡಿಸಿದ್ದಾರೆ ಮತ್ತು ರಾಜ್ಯ ಸರ್ಕಾರವು ಸಾಧುಗಳೊಂದಿಗೆ ಇಂತಹ ದುಷ್ಕೃತ್ಯವನ್ನು ಸಹಿಸುವುದಿಲ್ಲ ಎಂದು ಹೇಳಿದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಪಾಲ್ಘರ್‌ನಲ್ಲಿ ನಡೆದ ಸಾಧುಗಳ ಹತ್ಯೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರ ಅವರಿಗೆ ಅನ್ಯಾಯ ಮಾಡಿದೆ. ಆದರೆ ಪ್ರಸ್ತುತ ಮಹಾರಾಷ್ಟ್ರ ಸರ್ಕಾರವು ಯಾವುದೇ ಸಾಧುವಿನ ವಿರುದ್ಧ ಯಾವುದೇ ಅನ್ಯಾಯವನ್ನು ಮಾಡುವುದಿಲ್ಲ ಎಂದು 2020 ರ ಘಟನೆಯನ್ನು ಉಲ್ಲೇಖಿಸಿ ಹೇಳಿದರು.

Published On - 9:35 am, Wed, 14 September 22