AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ; 34ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

Ambernath Gas Leak: ಅಂಬರ್‌ನಾಥ್ ಪಟ್ಟಣದ ಎಂಐಡಿಸಿ ಪ್ರದೇಶದ ರಾಸಾಯನಿಕ ಕಾರ್ಖಾನೆಯಿಂದ ಅನಿಲ ಸೋರಿಕೆ ವರದಿಯಾದ ನಂತರ 34ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ; 34ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು
ಮಹಾರಾಷ್ಟ್ರದಲ್ಲಿ ಗ್ಯಾಸ್ ಸೋರಿಕೆಯಾದ ಫ್ಯಾಕ್ಟರಿ
TV9 Web
| Edited By: |

Updated on: Oct 13, 2021 | 8:10 AM

Share

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರನಾಥ್ ನಗರದ ರಾಸಾಯನಿಕ ಕಾರ್ಖಾನೆಯಲ್ಲಿ ಮಂಗಳವಾರ ವಿಷಕಾರಿ ಅನಿಲ ಸೋರಿಕೆಯಾಗಿದೆ. ಗ್ಯಾಸ್ ಸೋರಿಕೆಯಿಂದ 34ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಅಂಬರ್‌ನಾಥ್ ಪಟ್ಟಣದ ಎಂಐಡಿಸಿ ಪ್ರದೇಶದ ರಾಸಾಯನಿಕ ಕಾರ್ಖಾನೆಯಿಂದ ಅನಿಲ ಸೋರಿಕೆ ವರದಿಯಾದ ನಂತರ 34ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟದ ತೊಂದರೆ, ಕಣ್ಣು, ಮೂಗು ಉರಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಅಂಬರನಾಥ್ ಪಶ್ಚಿಮದಲ್ಲಿರುವ ಆರ್.ಕೆ ಕೆಮಿಕಲ್ ಪ್ಲಾಂಟ್‌ನಿಂದ ಸಲ್ಫ್ಯೂರಿಕ್ ಅನಿಲ ಸೋರಿಕೆಯಾಗಿದೆ. ಕಂಪನಿಯ ಸಿಬ್ಬಂದಿ ಮತ್ತು ಸುತ್ತಮುತ್ತಲಿನ ಜನರು ಸೇರಿದಂತೆ 34 ಜನರು ತೊಂದರೆಗೀಡಾಗಿದ್ದಾರೆ. ಅಗ್ನಿಶಾಮಕ ದಳ ಮತ್ತು ಮಹಾರಾಷ್ಟ್ರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೋರಿಕೆಯಾದ ಬಗ್ಗೆ ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದರು.

ಉಸಿರಾಟದ ತೊಂದರೆ ಮತ್ತು ಇತರೆ ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ 34 ಜನರನ್ನು ಉಲ್ಲಾಸ್ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಎಲ್​ಜಿ ಪಾಲಿಮರ್ಸ್ ರಾಸಾಯನಿಕ ಸ್ಥಾವರದಿಂದ ರಾತ್ರಿಯಿಡೀ ಗ್ಯಾಸ್​ ಸೋರಿಕೆಯಾಗಿತ್ತು. ಇದರಿಂದ ಮಗು ಮತ್ತು 8 ಜನರು ಮೃತಪಟ್ಟಿದ್ದರು, 1000ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದರು.

ಇದನ್ನೂ ಓದಿ: Maharashtra Bandh: ಲಖಿಂಪುರ ಖೇರಿಯ ರೈತರ ಹತ್ಯೆ ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್

Maharashtra Bandh ಮಹಾರಾಷ್ಟ್ರ ಬಂದ್ ಯಶಸ್ವಿಯಾಗಿದೆ ಎಂದ ಶಿವಸೇನಾ ಸಂಸದ; 8 ಬೆಸ್ಟ್ ಬಸ್ ಧ್ವಂಸ, ಎಂವಿಎ ವಿರುದ್ಧ ಫಡ್ನವಿಸ್ ವಾಗ್ದಾಳಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ