AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Johnson & Johnson: ಮಹಾರಾಷ್ಟ್ರದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಲೈಸೆನ್ಸ್​ ರದ್ದು

ಪ್ರಯೋಗಾಲಯದಲ್ಲಿ ಈ ಪೌಡರ್​ನ ಪರೀಕ್ಷೆ ಮಾಡಿದ ನಂತರ ಎಫ್‌ಡಿಎ ಡ್ರಗ್ಸ್ ಕಾಸ್ಮೆಟಿಕ್ಸ್ ಆಕ್ಟ್ 1940 ಮತ್ತು ನಿಯಮಗಳ ಅಡಿಯಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್‌ಗೆ ಶೋಕಾಸ್ ನೋಟಿಸ್ ನೀಡಿದೆ.

Johnson & Johnson: ಮಹಾರಾಷ್ಟ್ರದಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್ ಬೇಬಿ ಪೌಡರ್ ಲೈಸೆನ್ಸ್​ ರದ್ದು
ಜಾನ್ಸನ್ ಬೇಬಿ ಪೌಡರ್
TV9 Web
| Edited By: |

Updated on: Sep 17, 2022 | 2:49 PM

Share

ಮುಂಬೈ: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್ (Johnson & Johnson) ಪ್ರೈವೇಟ್ ಲಿಮಿಟೆಡ್‌ನ ಬೇಬಿ ಪೌಡರ್ ಉತ್ಪಾದನೆಯ ಲೈಸೆನ್ಸ್​ ಅನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ (ಎಫ್‌ಡಿಎ) ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಉತ್ಪನ್ನವಾದ ಜಾನ್ಸನ್ ಬೇಬಿ ಪೌಡರ್ ನವಜಾತ ಶಿಶುಗಳ ಚರ್ಮದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯೋಗಾಲಯದ ಪರೀಕ್ಷೆಯ ಸಮಯದಲ್ಲಿ ಶಿಶುಗಳಿಗೆ ಈ ಪೌಡರ್​ನ ಮಾದರಿಗಳು ಪ್ರಮಾಣಿತ ಪಿಹೆಚ್​ ಮೌಲ್ಯಕ್ಕೆ ಅನುಗುಣವಾಗಿಲ್ಲ ಎಂದು ತಿಳಿದುಬಂದಿದೆ ಎನ್ನಲಾಗಿದೆ. ಕೊಲ್ಕತ್ತಾ ಮೂಲದ ಸೆಂಟ್ರಲ್ ಡ್ರಗ್ಸ್ ಲ್ಯಾಬೊರೇಟರಿಯ ನಿರ್ಣಾಯಕ ವರದಿಯ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಪೌಡರ್ ಗುಣಮಟ್ಟದ ತಪಾಸಣೆಯ ಉದ್ದೇಶಗಳಿಂದ ಎಫ್‌ಡಿಎ ಪುಣೆ ಮತ್ತು ನಾಸಿಕ್‌ನಿಂದ ಜಾನ್ಸನ್ ಬೇಬಿ ಪೌಡರ್‌ನ ಮಾದರಿಗಳನ್ನು ಪಡೆದುಕೊಂಡಿತ್ತು.

ಇದನ್ನೂ ಓದಿ: 2023ರಲ್ಲಿ ಜಾಗತಿಕ ಮಟ್ಟದಲ್ಲಿ ಬೇಬಿ ಪೌಡರ್ ಮಾರಾಟ ನಿಲ್ಲಿಸಲಿದೆ ಜಾನ್ಸನ್ ಆಂಡ್ ಜಾನ್ಸನ್

ಪ್ರಯೋಗಾಲಯದಲ್ಲಿ ಈ ಪೌಡರ್​ನ ಪರೀಕ್ಷೆ ಮಾಡಿದ ನಂತರ ಎಫ್‌ಡಿಎ ಡ್ರಗ್ಸ್ ಕಾಸ್ಮೆಟಿಕ್ಸ್ ಆಕ್ಟ್ 1940 ಮತ್ತು ನಿಯಮಗಳ ಅಡಿಯಲ್ಲಿ ಜಾನ್ಸನ್ ಆ್ಯಂಡ್ ಜಾನ್ಸನ್‌ಗೆ ಶೋಕಾಸ್ ನೋಟಿಸ್ ನೀಡಿದೆ. ಹಾಗೇ, ಮಾರುಕಟ್ಟೆಯಿಂದ ಈ ಉತ್ಪನ್ನದ ಸ್ಟಾಕ್ ಅನ್ನು ಹಿಂಪಡೆಯಲು ಕಂಪನಿಗೆ ಸೂಚನೆಗಳನ್ನು ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿ ಈಗ ಕೋರ್ಟ್​ ಮೆಟ್ಟಿಲೇರಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ