AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾ’ಮೈತ್ರಿ ಕಸರತ್ತು! ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆ ಸ್ಕೆಚ್ಚು

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದೆ. ಚುನಾವಣೆಗೆ ಮುನ್ನಾ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಫಲಿತಾಂಶದ ನಂತರ ಸಿಎಂ ಸ್ಥಾನಕ್ಕೆ ಶಿವಸೇನೆ ಸ್ಕೆಚ್ ಹಾಕಿದೆ. ಮರಾಠರ ನಾಡಿನಲ್ಲೀಗ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಬಂದು 14 ದಿನ ಕಳೆದರೂ ಸರ್ಕಾರ ರಚನೆಯಾಗಿಲ್ಲ. ಕಾರಣ ಚುನಾವಣೆಗೂ ಮುನ್ನ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಶಿವಸೇನೆ, ಇದೀಗ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದೆ. 50-50 ಸೂತ್ರದಡಿ ಮುಖ್ಯಮಂತ್ರಿ ಸ್ಥಾನದ ಹಂಚಿಕೆಗೆ ಬೇಡಿಕೆ ಇಟ್ಟಿದೆ. ಆದ್ರೆ ಇದಕ್ಕೆ ಬಿಜೆಪಿ […]

‘ಮಹಾ’ಮೈತ್ರಿ ಕಸರತ್ತು! ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನೆ ಸ್ಕೆಚ್ಚು
ಸಾಧು ಶ್ರೀನಾಥ್​
|

Updated on:Nov 08, 2019 | 4:19 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದೆ. ಚುನಾವಣೆಗೆ ಮುನ್ನಾ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಫಲಿತಾಂಶದ ನಂತರ ಸಿಎಂ ಸ್ಥಾನಕ್ಕೆ ಶಿವಸೇನೆ ಸ್ಕೆಚ್ ಹಾಕಿದೆ.

ಮರಾಠರ ನಾಡಿನಲ್ಲೀಗ ರಾಜಕೀಯ ಅರಾಜಕತೆ ಸೃಷ್ಟಿಯಾಗಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಬಂದು 14 ದಿನ ಕಳೆದರೂ ಸರ್ಕಾರ ರಚನೆಯಾಗಿಲ್ಲ. ಕಾರಣ ಚುನಾವಣೆಗೂ ಮುನ್ನ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಶಿವಸೇನೆ, ಇದೀಗ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದೆ. 50-50 ಸೂತ್ರದಡಿ ಮುಖ್ಯಮಂತ್ರಿ ಸ್ಥಾನದ ಹಂಚಿಕೆಗೆ ಬೇಡಿಕೆ ಇಟ್ಟಿದೆ. ಆದ್ರೆ ಇದಕ್ಕೆ ಬಿಜೆಪಿ ನಾಯಕರು ಒಪ್ಪುತ್ತಿಲ್ಲ, ಇದು ಎರಡೂ ಪಕ್ಷಗಳ ಮಧ್ಯೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.

ಎನ್​ಸಿಪಿ-ಕಾಂಗ್ರೆಸ್ ಒಪ್ಪುತ್ತಿಲ್ಲ, ಶಿವಸೇನೆ ಸಿಎಂ ಪಟ್ಟ ಬಿಡ್ತಿಲ್ಲ! ತನ್ನ ಬಹುಕಾಲದ ಗೆಳೆಯ ಬಿಜೆಪಿಗೆ ಗುಡ್​ಬೈ ಹೇಳಿ, ಎನ್​ಸಿಪಿ ಹಾಗೂ ಕಾಂಗ್ರೆಸ್ ನೇತೃತ್ವದಲ್ಲಿ ಸರ್ಕಾರ ರಚನೆಗೆ ಶಿವಸೇನೆ ಒಲವು ತೋರಿತ್ತು. ಆದ್ರೆ ಇದಕ್ಕೆ ಎನ್​ಸಿಪಿ-ಕಾಂಗ್ರೆಸ್ ವರಷ್ಠರು ಒಪ್ಪಿಗೆ ಸೂಚಿಸಿರಲಿಲ್ಲ. ಹೀಗಾಗಿ ಮಹಾರಾಷ್ಟ್ರದಲ್ಲಿ ಫಲಿತಾಂಶ ಬಂದು 2 ವಾರ ಕಳೆದರೂ ಸರ್ಕಾರ ರಚನೆ ಪ್ರಕ್ರಿಯೆ ಆರಂಭವಾಗಿಲ್ಲ. ಇನ್ನು ಸರ್ಕಾರ ರಚನೆ ಕಸರತ್ತಿನ ಭಾಗವಾಗಿ ಉದ್ಧವ್ ಠಾಕ್ರೆ ನಿವಾಸ ‘ಮಾತೋಶ್ರೀ’ಯಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಎನ್​ಡಿಎ ಮೈತ್ರಿ ಮುರಿದುಕೊಳ್ಳಲು ಇಷ್ಟವಿಲ್ಲ ಅಂತಾ ಉದ್ಧವ್ ಠಾಕ್ರೆ ಹೇಳಿದ್ದಾರೆ. ಇನ್ನು ಸರ್ಕಾರ ರಚನೆ ಅಂತಿಮ ನಿರ್ಧಾರ ಉದ್ಧವ್ ಠಾಕ್ರೆಗೆ ಬಿಟ್ಟಿದ್ದು ಅಂತಾ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸಭೆ ಬಳಿಕ ಶಿವಸೇನೆ ಶಾಸಕರನ್ನ ಬಾಂದ್ರಾದ ರಂಗ್​ಶಾರದಾ ಹೋಟೆಲ್​ಗೆ ಶಿಫ್ಟ್ ಮಾಡಲಾಗಿದೆ.

‘ಮಹಾ’ ಅಖಾಡಕ್ಕೆ ಗಡ್ಕರಿ ಎಂಟ್ರಿ ಹುಸಿ! ಇನ್ನು ಸರ್ಕಾರ ರಚನೆ ಕಸರತ್ತಿಗೆ ನಿತಿನ್ ಗಡ್ಕರಿ ಎಂಟ್ರಿಯಾಗಲಿದ್ದಾರೆ, ಅವರ ಆಗಮನದಿಂದ ಬಹು ದೊಡ್ಡ ಬದಲಾವಣೆ ಆಗಲಿದೆ ಅನ್ನೋ ಮಾತುಗಳು ಕೇಳಿಬಂದಿದ್ದವು. ಆದ್ರೆ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ನಾನು ಮತ್ತೆ ಮಹಾರಾಷ್ಟ್ರ ರಾಜಕೀಯಕ್ಕೆ ಎಂಟ್ರಿಯಾಗೋದಿಲ್ಲ ಎಂದಿದ್ದಾರೆ. ಹೀಗಾಗಿ ಗಡ್ಕರಿ ಆಗಮನದ ನಿರೀಕ್ಷೆಯಲ್ಲಿದ್ದ ಮಹಾರಾಷ್ಟ್ರದ ಸ್ಥಳೀಯ ಬಿಜೆಪಿ ನಾಯಕರಿಗೆ ಭಾರಿ ನಿರಾಸೆಯಾಗಿದೆ.

ಇವತ್ತು ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಗೆ ಡೆಡ್​ಲೈನ್ ಇದ್ದು, ಇಂದು ಸರ್ಕಾರ ರಚನೆಗೆ ಯಾವುದೇ ಪಕ್ಷ ಮುಂದಾಗದಿದ್ರೆ ರಾಷ್ಟ್ರಪತಿ ಆಳ್ವಿಕೆಗೆ ಮಹಾರಾಷ್ಟ್ರ ರಾಜ್ಯಪಾಲರು ಶಿಫಾರಸು ಮಾಡಬಹುದು.

Published On - 8:42 am, Fri, 8 November 19

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!