AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಡ್ನವಿಸ್ ಮುಂದಿದೆ ವಿಶ್ವಾಸಮತದ ಸವಾಲು, ಸುಪ್ರೀಂ ಕೈಯಲ್ಲಿ ದೇವೇಂದ್ರ ಭವಿಷ್ಯ

ನವದೆಹಲಿ: ಒಂದು ತಿಂಗಳ ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಮಹಾ ಕಿತ್ತಾಟದ ವಿಚಾರವಾಗಿ ಇಂದು ಸುಪ್ರೀಂಕೋರ್ಟ್ ನೀಡಲಿರುವ ತೀರ್ಪು ಮಹತ್ವದ್ದಾಗಿದೆ. ಶಾಸಕರ ಬಚಾವ್ ಮಾಡಲು ಮೂರು ಪಕ್ಷಗಳು ಎತ್ನಿಸುತ್ತಿದ್ದು, ಬಿಜೆಪಿಗೆ ವಿಶ್ವಾಸಮತದಲ್ಲಿ ಸೋಲು ಭಯ ಕಾಡ್ತಿದೆ. ರಾತ್ರಿ ಕಳೆದು ಬೆಳಗಾಗುಷ್ಟರಲ್ಲಿ ಏನ್ ಬೇಕಾದ್ರೂ ಆಗ್ಬಹುದು ಅನ್ನೋದಕ್ಕೆ ಮಹಾರಾಷ್ಟ್ರ ರಾಜಕೀಯ ಸಾಕ್ಷಿಯಾಗಿದೆ. ಮಹಾಮೈತ್ರಿ ಸರ್ಕಾರ ರಚಿಸಲು ಎಲ್ಲಾ ತಯಾರಿ ಮಾಡ್ಕೊಂಡಿದ್ದ ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೆಸ್​ಗೆ ಶಾಕ್ ಕೊಟ್ಟು ಬಿಜೆಪಿ ಸರ್ಕಾರ ರಚಿಸಿತು. ದೇವೇಂದ್ರ […]

ಫಡ್ನವಿಸ್ ಮುಂದಿದೆ ವಿಶ್ವಾಸಮತದ ಸವಾಲು, ಸುಪ್ರೀಂ ಕೈಯಲ್ಲಿ ದೇವೇಂದ್ರ ಭವಿಷ್ಯ
ಸಾಧು ಶ್ರೀನಾಥ್​
|

Updated on:Nov 25, 2019 | 6:16 AM

Share

ನವದೆಹಲಿ: ಒಂದು ತಿಂಗಳ ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಮಹಾ ಕಿತ್ತಾಟದ ವಿಚಾರವಾಗಿ ಇಂದು ಸುಪ್ರೀಂಕೋರ್ಟ್ ನೀಡಲಿರುವ ತೀರ್ಪು ಮಹತ್ವದ್ದಾಗಿದೆ. ಶಾಸಕರ ಬಚಾವ್ ಮಾಡಲು ಮೂರು ಪಕ್ಷಗಳು ಎತ್ನಿಸುತ್ತಿದ್ದು, ಬಿಜೆಪಿಗೆ ವಿಶ್ವಾಸಮತದಲ್ಲಿ ಸೋಲು ಭಯ ಕಾಡ್ತಿದೆ.

ರಾತ್ರಿ ಕಳೆದು ಬೆಳಗಾಗುಷ್ಟರಲ್ಲಿ ಏನ್ ಬೇಕಾದ್ರೂ ಆಗ್ಬಹುದು ಅನ್ನೋದಕ್ಕೆ ಮಹಾರಾಷ್ಟ್ರ ರಾಜಕೀಯ ಸಾಕ್ಷಿಯಾಗಿದೆ. ಮಹಾಮೈತ್ರಿ ಸರ್ಕಾರ ರಚಿಸಲು ಎಲ್ಲಾ ತಯಾರಿ ಮಾಡ್ಕೊಂಡಿದ್ದ ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೆಸ್​ಗೆ ಶಾಕ್ ಕೊಟ್ಟು ಬಿಜೆಪಿ ಸರ್ಕಾರ ರಚಿಸಿತು. ದೇವೇಂದ್ರ ಫಡ್ನವಿಸ್ 2ನೇ ಬಾರಿಗೆ ಸಿಎಂ ಆದ್ರೆ, ಎನ್​ಸಿಪಿಯ ಅಜಿತ್ ಪವಾರ್ ಡಿಸಿಎಂ ಆಗಿದ್ದಾರೆ.

ಆದ್ರೀಗ ಅವರ ಮುಂದೆ ಬಹುದೊಡ್ಡ ಸವಾಲಿದೆ. ದೇವೇಂದ್ರ ಫಡ್ನವಿಸ್ ಅವರ ಭವಿಷ್ಯವನ್ನು ಸರ್ವೋಚ್ಛ ನ್ಯಾಯಾಲಯ ಇಂದು ನಿರ್ಧರಿಸಲಿದೆ. ಇದ್ರಿಂದ ಕಮಲ ನಾಯಕರಲ್ಲೀಗ ಆತಂಕ ಮನೆ ಮಾಡಿದೆ.

ಫಡ್ನವಿಸ್ ಮುಂದಿದೆ ವಿಶ್ವಾಸಮತದ ಬಹುದೊಡ್ಡ ಸವಾಲು..! ಸಿಎಂ ಆಗಿ ಪ್ರಮಾಣ ಸ್ವೀಕರಿಸಿರುವ ದೇವೇಂದ್ರ ಫಡ್ನವಿಸ್​ಗೆ ಬಹುಮತ ಸಾಬೀತು ಪಡಿಸಲೇಬೇಕಾದ ಅನಿವಾರ್ಯ ಇದೆ. ಆದ್ರೆ, ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಫಡ್ನವಿಸ್​ಗೆ ಟೈಂ ಫಿಕ್ಸ್ ಮಾಡಿಲ್ಲ. ರಾಜ್ಯಪಾಲರ ಕ್ರಮದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ ಕಾಂಗ್ರೆಸ್, ಶಿವಸೇನೆ ಮತ್ತು ಎನ್​ಸಿಪಿ ನಾಯಕರು ಬಹುಮತ ಸಾಬೀತಿಗೆ ಟೈಂ ಫಿಕ್ಸ್ ಮಾಡುವಂತೆ ಕೋರಿದ್ದಾರೆ.

ನಿನ್ನೆ ಭಾನುವಾರ ರಜಾ ದಿನವಾದ್ರೂ ವಿಚಾರಣೆ ನಡೆಸಿದ್ದ ಕೋರ್ಟ್, 3 ಪಕ್ಷ ಗಳ ವಾದ ಆಲಿಸಿದೆ. ಆದ್ರೆ, ಕೆಲವೊಂದಿಷ್ಟು ದಾಖಲೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಖಡಕ್ ಆಗಿ ಹೇಳಿದೆ.

ಕೇಂದ್ರಕ್ಕೆ ‘ಸುಪ್ರೀಂ’ ಸೂಚನೆ: 2ಪತ್ರಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಖಡಕ್ ಆಗಿ ಹೇಳಿದೆ. ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನಿಸಿದ ರಾಜ್ಯಪಾಲರ ಪತ್ರ ಮತ್ತು ರಾಜ್ಯಪಾಲರಿಗೆ ನೀಡಿರುವ ಬಿಜೆಪಿಗೆ ಇರುವ ಶಾಸಕರ ಬೆಂಬಲದ ಪತ್ರವನ್ನು ಸಲ್ಲಿಸಿವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಸುಪ್ರೀಂಕೋರ್ಟ್ ಸೂಚನೆಯಂತೆ ಇಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಮಾಹಿತಿ ಸಲ್ಲಿಸಬೇಕಿದೆ. ಅಲ್ದೆ ಸಿಎಂ‌ ದೇವೇಂದ್ರ ಫಡ್ನವಿಸ್, ಡಿಸಿಎಂ ಅಜಿತ್ ಪವಾರ್​ಗೆ ನೋಟಿಸ್ ನೀಡಿದ್ದು, ಇಂದು ತಮ್ಮ ಪರವಾಗಿ ಇರುವ ಶಾಸಕರ ಬೆಂಬಲವನ್ನು ಸುಪ್ರೀಂಕೋರ್ಟ್​ನಲ್ಲಿ ದೃಢಪಡಿಸಬೇಕಾಗುತ್ತೆ.

ಈ ಬಗ್ಗೆ ಬೆಳಗ್ಗೆ 10.30ಕ್ಕೆ ನ್ಯಾ. ರಮಣ ನೇತೃತ್ವದ ಪೀಠ ವಿಚಾರಣೆ ನಡೆಸಲಿದ್ದು, ಮಹತ್ವದ ಆದೇಶ ಹೊರಡಿಸಲಿದೆ. ಸಿಎಂ ಫಡ್ನವಿಸ್ ಬಹುಮತ ಸಾಬೀತು ಪಡಿಸುವ ಕುರಿತು ಟೈಂ ಫಿಕ್ಸ್ ಮಾಡುವ ಸಾಧ್ಯತೆ ಇದ್ದು, ತೀವ್ರ ಕುತೂಹಲ ಕೆರಳಿಸಿದೆ.

Published On - 6:15 am, Mon, 25 November 19

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ