ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್

ದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆ ವಿಚಾರ ಸಂಬಂಧಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ವು. ಈ ಕುರಿತು ಇಂದು ರಿಟ್‌ ಅರ್ಜಿ ವಿಚಾರಣೆ ನಡೆದಿದೆ. ವಿಚಾರಣೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ನಾಳೆ ಬೆಳಗ್ಗೆ 10.30ಕ್ಕೆ ಮತ್ತೆ ವಿಚಾರಣೆ ಶುರುವಾಗಲಿದ್ದು, ನಾಳೆ ರಾಜ್ಯಪಾಲರ ಆದೇಶ ಪತ್ರ, ಬೆಂಬಲ ಪತ್ರ ಸಲ್ಲಿಸಿಸುವಂತೆ ತಿಳಿಸಿದೆ. ವಕೀಲರಿಗೆ, ಸಿಎಂ […]

ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್
ಸಾಧು ಶ್ರೀನಾಥ್​

Updated on: Nov 24, 2019 | 1:23 PM

ದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆ ವಿಚಾರ ಸಂಬಂಧಿಸಿ ಕಾಂಗ್ರೆಸ್, ಎನ್​ಸಿಪಿ, ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ವು. ಈ ಕುರಿತು ಇಂದು ರಿಟ್‌ ಅರ್ಜಿ ವಿಚಾರಣೆ ನಡೆದಿದೆ. ವಿಚಾರಣೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ತಕ್ಷಣಕ್ಕೆ ಬಹುಮತ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ನಾಳೆ ಬೆಳಗ್ಗೆ 10.30ಕ್ಕೆ ಮತ್ತೆ ವಿಚಾರಣೆ ಶುರುವಾಗಲಿದ್ದು, ನಾಳೆ ರಾಜ್ಯಪಾಲರ ಆದೇಶ ಪತ್ರ, ಬೆಂಬಲ ಪತ್ರ ಸಲ್ಲಿಸಿಸುವಂತೆ ತಿಳಿಸಿದೆ. ವಕೀಲರಿಗೆ, ಸಿಎಂ ದೇವೇಂದ್ರ ಫಡ್ನವಿಸ್, ಅಜಿತ್‌ ಪವಾರ್‌ಗೂ ಸುಪ್ರೀಂಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ರಮಣ, ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾಯಮೂರ್ತಿ ಸಂಜೀವ್ ಖನ್ನಾ ಸೇರಿದಂತೆ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ಇಂದು ನಡೆದ ವಿಚಾರಣೆಯಲ್ಲಿ ದೇವೇಂದ್ರ ಫಡ್ನವಿಸ್ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

Published On - 12:55 pm, Sun, 24 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us