AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರು ಹೋಂ ಕ್ವಾರಂಟೈನ್ ಆಗುವಂತಿಲ್ಲ, ಕೊವಿಡ್​ ಕೇರ್​ ಸೆಂಟರ್​ಗೆ ದಾಖಲಾಗಲೇಬೇಕು: ಮಹಾರಾಷ್ಟ್ರದಲ್ಲಿ ನೂತನ ನಿಯಮ

ಪಾಸಿಟಿವಿಟಿ ಪ್ರಮಾಣ ಅತ್ಯಧಿಕವಿರುವ 18 ಜಿಲ್ಲೆಗಳಲ್ಲಿ ಈ ಕ್ರಮ ಜಾರಿಗೆ ಬರಲಿದ್ದು, ಅಲ್ಲಿನ ಎಲ್ಲಾ ಕೊರೊನಾ ಸೋಂಕಿತರು ಕೊವಿಡ್​ ಕೇರ್ ಸೆಂಟರ್​ಗಳಿಗೆ ದಾಖಲಾಗಬೇಕು ಎಂದು ಮಹಾರಾಷ್ಟ್ರ ರಾಜ್ಯ ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದಾರೆ.

ಸೋಂಕಿತರು ಹೋಂ ಕ್ವಾರಂಟೈನ್ ಆಗುವಂತಿಲ್ಲ, ಕೊವಿಡ್​ ಕೇರ್​ ಸೆಂಟರ್​ಗೆ ದಾಖಲಾಗಲೇಬೇಕು: ಮಹಾರಾಷ್ಟ್ರದಲ್ಲಿ ನೂತನ ನಿಯಮ
ಪ್ರಾತಿನಿಧಿಕ ಚಿತ್ರ
Skanda
|

Updated on: May 25, 2021 | 7:06 PM

Share

ಮುಂಬೈ: ಕೊರೊನಾ ಎರಡನೇ ಅಲೆಯ ತೀವ್ರ ಆಘಾತಕ್ಕೆ ಸಿಕ್ಕು ಕೊಂಚ ಚೇತರಿಸಿಕೊಳ್ಳುತ್ತಿರುವ ಮಹಾರಾಷ್ಟ್ರ ರಾಜ್ಯದ 18 ಜಿಲ್ಲೆಗಳಲ್ಲಿ ಕೊವಿಡ್​ 19 ಸೋಂಕಿತರಿಗೆ ಹೋಂ ಕ್ವಾರಂಟೈನ್ ಸ್ಥಗಿತಗೊಳಿಸುವುದಾಗಿ ಅಲ್ಲಿನ ರಾಜ್ಯ ಸರ್ಕಾರ ತಿಳಿಸಿದೆ. ಪಾಸಿಟಿವಿಟಿ ಪ್ರಮಾಣ ಅತ್ಯಧಿಕವಿರುವ 18 ಜಿಲ್ಲೆಗಳಲ್ಲಿ ಈ ಕ್ರಮ ಜಾರಿಗೆ ಬರಲಿದ್ದು, ಅಲ್ಲಿನ ಎಲ್ಲಾ ಕೊರೊನಾ ಸೋಂಕಿತರು ಕೊವಿಡ್​ ಕೇರ್ ಸೆಂಟರ್​ಗಳಿಗೆ ದಾಖಲಾಗಬೇಕು ಎಂದು ಮಹಾರಾಷ್ಟ್ರ ರಾಜ್ಯ ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದಾರೆ.

ರಾಜ್ಯದ ಒಟ್ಟು 36 ಜಿಲ್ಲೆಗಳ ಪೈಕಿ 18 ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಿರುವ ಕಾರಣ ಸದರಿ ಜಿಲ್ಲೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರಾಸರಿಗಿಂತ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದ ಈ ನಿರ್ಧಾರ ಅನಿವಾರ್ಯವೂ ಆಗಿದೆ ಎಂದು ಸರ್ಕಾರ ತಿಳಿಸಿದೆ.

ಸದ್ಯ ಮಹಾರಾಷ್ಟ್ರದಲ್ಲಿ ಸುಮಾರು 3,27,000 ಸಕ್ರಿಯ ಪ್ರಕರಣಗಳಿದ್ದು, ಚೇತರಿಕೆ ಪ್ರಮಾಣ ಶೇ.93ಕ್ಕೆ ಏರಿದೆ. ಪರೀಕ್ಷೆಗೆ ಒಳಪಡುವ ಮಾದರಿಗಳಲ್ಲಿ ಶೇ.12ರಷ್ಟು ಪಾಸಿಟಿವ್ ಕಾಣಿಸಿಕೊಳ್ಳುತ್ತಿದ್ದು, ಮರಣ ಪ್ರಮಾಣ ಶೇ.1.5ರಷ್ಟಿದೆ ಎಂದು ಅಲ್ಲಿನ ಆರೋಗ್ಯ ಸಚಿವರು ಹೇಳಿದ್ದಾರೆ. ಆದರೆ, 18 ಜಿಲ್ಲೆಗಳ ಪಾಸಿಟಿವಿಟಿ ಪ್ರಮಾಣವು ರಾಜ್ಯದ ಒಟ್ಟಾರೆ ಪಾಸಿಟಿವಿಟಿ ಪ್ರಮಾಣಕ್ಕಿಂತ ಹೆಚ್ಚಿರುವುದರಿಂದ ಅಲ್ಲಿನ ಸೋಂಕಿತರನ್ನು ಕೊವಿಡ್ ಕಾಳಜಿ ಕೇಂದ್ರಗಳಿಗೆ ದಾಖಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,96,427 ಹೊಸ ಕೊವಿಡ್ ಪ್ರಕರಣ ದಾಖಲು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,96,427 ಹೊಸ ಕೊವಿಡ್ ಪ್ರಕರಣ ದಾಖಲಿಸಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,69,48,874 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದೇ ಅವಧಿಯಲ್ಲಿ 3,511 ಸಾವುಗಳು ದಾಖಲಾಗಿದ್ದು ದೇಶದಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ ಇದು 3,07,231 ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 133,934 ರಷ್ಟು ಕಡಿಮೆಯಾಗಿದ್ದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,58,67,782 ಕ್ಕೆ ತಲುಪಿದೆ.

ಕಳೆದ ಹಲವಾರು ದಿನಗಳಿಂದ ಸಾವಿನ ಸಂಖ್ಯೆ 4,000 ಸಮೀಪದಲ್ಲಿದ್ದು ,ಇದು ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.  ನಿನ್ನೆ ಪರೀಕ್ಷಿಸಿದ 20,58,112 ಮಾದರಿಗಳನ್ನು ಒಳಗೊಂಡಂತೆ ಮೇ 24 ರವರೆಗೆ ಒಟ್ಟು 33,25,94,176 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಆದಾಗ್ಯೂ, ಮಹಾರಾಷ್ಟ್ರ, ಉತ್ತರ ಪ್ರದೇಶ ದೆಹಲಿಯಂತಹ ಹೆಚ್ಚಿನ ಪ್ರಕರಣಗಳಿರುವ ರಾಜ್ಯಗಳಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿದೆ. ಇದು ಕೊವಿಡ್ -19 ರ ಎರಡನೇ ಅಲೆಯ ತೀವ್ರತೆಯು ಭಾರತದಲ್ಲಿ ಕ್ಷೀಣಿಸುತ್ತಿದೆ ಎಂಬುದನ್ನು ತೋರಿಸುತ್ತದೆ.

ಕೊರೊನಾವೈರಸ್ ಸೋಂಕು ಹರಡದಂತೆ ತಡೆಯಲು ಹಲವಾರು ರಾಜ್ಯಗಳು ಲಾಕ್​ಡೌನ್ ಹೇರಿವೆ. ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಕರ್ನಾಟಕ, ತೆಲಂಗಾಣ, ಉತ್ತರ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ, ಮೇಘಾಲಯ, ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಗೋವಾ ಮತ್ತೆ ಕರ್ಫ್ಯೂ ತರಹದ ನಿರ್ಬಂಧಗಳನ್ನು ವಿಧಿಸಿದ ನಂತರ ಸಕ್ರಿಯ ಪ್ರಕರಣಗಳು ಇಳಿಮುಖವಾಗಿವೆ.

ಮಹಾರಾಷ್ಟ್ರದಲ್ಲಿ ಸೋಮವಾರ 22,122 ಹೊಸ ಕೊವಿಡ್ ಪ್ರಕರಣಗಳು ಮತ್ತು 592 ಸಾವು ವರದಿ ಆಗಿದೆ. ಸೋಂಕಿನ ಪ್ರಮಾಣವು 56.02 ಲಕ್ಷಕ್ಕೂ ಹೆಚ್ಚು ಮತ್ತು ಸಾವಿನ ಸಂಖ್ಯೆ 89,212 ಕ್ಕೆ ತಲುಪಿದೆ.

ಮಹಾರಾಷ್ಟ್ರದ ನಂತರ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳಲ್ಲಿ ಅತಿ ಹೆಚ್ಚು ಸೋಂಕುಗಳು ಕಂಡುಬಂದಿವೆ. ಎರಡನೇ ಅಲೆಯಲ್ಲಿ ಕೊರೊನಾವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ಎರಡನೇ ರಾಜ್ಯ ಕರ್ನಾಟಕದಲ್ಲಿ 25,311 ಹೊಸ ಪ್ರಕರಣಗಳು ಕಂಡುಬಂದವು. ರಾಜಧಾನಿ ಬೆಂಗಳೂರಿನಲ್ಲಿ 5,701 ಸೋಂಕುಗಳನ್ನು ದಾಖಲಾಗಿದೆ.

ಇದನ್ನೂ ಓದಿ: Covid Antibody Cocktail: ಕೊರೊನಾ ಚಿಕಿತ್ಸೆಗೆ ಹೊಸ ಔಷಧಿ, ಗುರುಗ್ರಾಮದಲ್ಲಿ ಮೇ 26ರಿಂದ ಆ್ಯಂಟಿಬಾಡಿ ಕಾಕ್​ಟೇಲ್ ಚಿಕಿತ್ಸೆ ಆರಂಭ 

ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಮೌಢ್ಯದಾಚೆಗೂ ವಾತಾವರಣ ಶುದ್ಧೀಕರಣಕ್ಕೆ ಹೋಮ-ಹವನ ಮಾಡಿಸಿದ ಶಾಸಕ ಅಭಯ್ ಪಾಟೀಲ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ