AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪ್ರಕರಣದಲ್ಲಿ ಇಳಿಕೆ ಹಿನ್ನೆಲೆ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಏಪ್ರಿಲ್ 2 ರಿಂದ ಮಹಾರಾಷ್ಟ್ರದಲ್ಲಿ ಕೊರೊನಾ ನಿರ್ಬಂಧ ತೆರವು ಜಾರಿಗೊಳಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಸ್ಥಗಿತಗೊಳಿಸಲಾಗುತ್ತೆ. ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಸಿಎಂ ಉದ್ಧವ್ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

ಕೊರೊನಾ ಪ್ರಕರಣದಲ್ಲಿ ಇಳಿಕೆ ಹಿನ್ನೆಲೆ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದ ಮಹಾರಾಷ್ಟ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Mar 31, 2022 | 7:16 PM

Share

ಮುಂಬೈ: ಮಹಾಮಾರಿ ಕೊರೊನಾ(Coronavirus) ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರವು(Maharashtra Government) ರಾಜ್ಯದಲ್ಲಿ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಮಾಸ್ಕ್ ಧರಿಸುವುದು ಜನರಿಗೆ ಸಲಹೆ ಮಾತ್ರ ಎಂದು ತಿಳಿಸಿದೆ. ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹಾದ್, ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಕೊರೊನಾ ನಿರ್ಬಂಧಗಳನ್ನು ತೆಗೆದುಹಾಕಲು ರಾಜ್ಯ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಏಪ್ರಿಲ್ 2 ರಿಂದ ಮಹಾರಾಷ್ಟ್ರದಲ್ಲಿ ಕೊರೊನಾ ನಿರ್ಬಂಧ ತೆರವು ಜಾರಿಗೊಳಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಸ್ಥಗಿತಗೊಳಿಸಲಾಗುತ್ತೆ. ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಸಿಎಂ ಉದ್ಧವ್ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಮಾಸ್ಕ್ ಧರಿಸುವುದು ಜನರಿಗೆ ಸಲಹೆ ಮಾತ್ರ. ಮಾಸ್ಕ್ ಹಾಕಲು ಬಯಸುವವರು ಮಾಸ್ಕ್ ಬಳಸಬಹುದು. ಸಾರ್ವಜನಿಕ ಸಾರಿಗೆಯಲ್ಲಿ ಸಂಚಾರ, ಮಾಲ್, ಸಿನಿಮಾ ಹಾಲ್ ಪ್ರವೇಶಕ್ಕೆ ಸಂಪೂರ್ಣ ಲಸಿಕೆ ಕಡ್ಡಾಯವಲ್ಲ ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಮೂಲಕ ಮಾಸ್ಕ್ ಕಡ್ಡಾಯವಲ್ಲ ಎಂದ ದೇಶದ ಮೊದಲ ರಾಜ್ಯ ಮಹಾರಾಷ್ಟ್ರವಾಗಿದೆ.

ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿದ್ದು, ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ನೋಡಿದರೆ, ಮಾಸ್ಕ್ ಬಳಸುವುದನ್ನು ನಿಲ್ಲಿಸುವುದು ಅಪಾಯ. ನಾವು ಮೂರನೇ ಅಲೆಯ ಪರಿಣಾಮವನ್ನು ನೋಡಿದ್ದೇವೆ, ನಾವು ಮಾಸ್ಕ್ ತೆಗೆದುಹಾಕುವ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಂಸದ ಮುನಿಸ್ವಾಮಿ; ಕೋಲಾರದ ಕ್ಲಾಕ್ ಟವರ್ ತ್ರಿವರ್ಣ ಧ್ವಜ ಹಾರಿಸಿದ ವಿಚಾರ ಪ್ರಸ್ತಾಪ

Personal Loan: ಕೈದಿಗಳಿಗೆ ಶೇ 7ರ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ನೀಡುವ ಯೋಜನೆ ಆರಂಭಿಸಿದ ಮಹಾರಾಷ್ಟ್ರ ಸರ್ಕಾರ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ