AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪ್ರಕರಣದಲ್ಲಿ ಇಳಿಕೆ ಹಿನ್ನೆಲೆ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ಏಪ್ರಿಲ್ 2 ರಿಂದ ಮಹಾರಾಷ್ಟ್ರದಲ್ಲಿ ಕೊರೊನಾ ನಿರ್ಬಂಧ ತೆರವು ಜಾರಿಗೊಳಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಸ್ಥಗಿತಗೊಳಿಸಲಾಗುತ್ತೆ. ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಸಿಎಂ ಉದ್ಧವ್ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

ಕೊರೊನಾ ಪ್ರಕರಣದಲ್ಲಿ ಇಳಿಕೆ ಹಿನ್ನೆಲೆ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದ ಮಹಾರಾಷ್ಟ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Mar 31, 2022 | 7:16 PM

Share

ಮುಂಬೈ: ಮಹಾಮಾರಿ ಕೊರೊನಾ(Coronavirus) ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದ ಹಿನ್ನೆಲೆ ಮಹಾರಾಷ್ಟ್ರ ಸರ್ಕಾರವು(Maharashtra Government) ರಾಜ್ಯದಲ್ಲಿ ಎಲ್ಲ ರೀತಿಯ ಕೊವಿಡ್ ನಿರ್ಬಂಧ ತೆರವುಗೊಳಿಸಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಮಾಸ್ಕ್ ಧರಿಸುವುದು ಜನರಿಗೆ ಸಲಹೆ ಮಾತ್ರ ಎಂದು ತಿಳಿಸಿದೆ. ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹಾದ್, ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಕೊರೊನಾ ನಿರ್ಬಂಧಗಳನ್ನು ತೆಗೆದುಹಾಕಲು ರಾಜ್ಯ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಏಪ್ರಿಲ್ 2 ರಿಂದ ಮಹಾರಾಷ್ಟ್ರದಲ್ಲಿ ಕೊರೊನಾ ನಿರ್ಬಂಧ ತೆರವು ಜಾರಿಗೊಳಿಸಲಾಗುತ್ತದೆ. ಸಾಂಕ್ರಾಮಿಕ ರೋಗ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಸ್ಥಗಿತಗೊಳಿಸಲಾಗುತ್ತೆ. ಎಲ್ಲ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ಅವಕಾಶ ನೀಡಲಾಗಿದೆ ಎಂದು ಸಿಎಂ ಉದ್ಧವ್ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ. ಮಾಸ್ಕ್ ಧರಿಸುವುದು ಜನರಿಗೆ ಸಲಹೆ ಮಾತ್ರ. ಮಾಸ್ಕ್ ಹಾಕಲು ಬಯಸುವವರು ಮಾಸ್ಕ್ ಬಳಸಬಹುದು. ಸಾರ್ವಜನಿಕ ಸಾರಿಗೆಯಲ್ಲಿ ಸಂಚಾರ, ಮಾಲ್, ಸಿನಿಮಾ ಹಾಲ್ ಪ್ರವೇಶಕ್ಕೆ ಸಂಪೂರ್ಣ ಲಸಿಕೆ ಕಡ್ಡಾಯವಲ್ಲ ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ಮೂಲಕ ಮಾಸ್ಕ್ ಕಡ್ಡಾಯವಲ್ಲ ಎಂದ ದೇಶದ ಮೊದಲ ರಾಜ್ಯ ಮಹಾರಾಷ್ಟ್ರವಾಗಿದೆ.

ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿದ್ದು, ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳವನ್ನು ನೋಡಿದರೆ, ಮಾಸ್ಕ್ ಬಳಸುವುದನ್ನು ನಿಲ್ಲಿಸುವುದು ಅಪಾಯ. ನಾವು ಮೂರನೇ ಅಲೆಯ ಪರಿಣಾಮವನ್ನು ನೋಡಿದ್ದೇವೆ, ನಾವು ಮಾಸ್ಕ್ ತೆಗೆದುಹಾಕುವ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಂಸದ ಮುನಿಸ್ವಾಮಿ; ಕೋಲಾರದ ಕ್ಲಾಕ್ ಟವರ್ ತ್ರಿವರ್ಣ ಧ್ವಜ ಹಾರಿಸಿದ ವಿಚಾರ ಪ್ರಸ್ತಾಪ

Personal Loan: ಕೈದಿಗಳಿಗೆ ಶೇ 7ರ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ನೀಡುವ ಯೋಜನೆ ಆರಂಭಿಸಿದ ಮಹಾರಾಷ್ಟ್ರ ಸರ್ಕಾರ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್