AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ್ ಬಂದ್ರೆ ಹೆಲೋ ಬದಲು ವಂದೇ ಮಾತರಂ ಹೇಳಿ: ಆದೇಶ ಹೊರಡಿಸಿದ ಶಿಂದೆ ಸರ್ಕಾರ

ಮೊಬೈಲ್​ಗೆ ಕರೆ ಬಂದರೆ ಹೆಲೋ ಎನ್ನುವ ಬದಲು ವಂದೇ ಮಾತರಂ ಹೇಳುವಂತೆ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.

ಕಾಲ್ ಬಂದ್ರೆ ಹೆಲೋ ಬದಲು ವಂದೇ ಮಾತರಂ ಹೇಳಿ: ಆದೇಶ ಹೊರಡಿಸಿದ ಶಿಂದೆ ಸರ್ಕಾರ
Eknath Shinde
TV9 Web
| Updated By: ನಯನಾ ರಾಜೀವ್|

Updated on: Oct 02, 2022 | 9:48 AM

Share

ಫೋನ್​ ಕರೆಗಳು ಬಂದರೆ ಹೆಲೋ ಎನ್ನುವ ಬದಲು ವಂದೇ ಮಾತರಂ ಹೇಳುವಂತೆ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ನಾಗರಿಕರಿಂದ ದೂರವಾಣಿ ಅಥವಾ ಮೊಬೈಲ್ ಫೋನ್ ಕರೆಗಳನ್ನು ಸ್ವೀಕರಿಸುವಾಗ ಹೆಲೋ ಬದಲಿಗೆ ವಂದೇ ಮಾತರಂ ಎಂದು ಉದ್ಘರಿಸುವುದನ್ನು ಕಡ್ಡಾಯಗೊಳಿಸಿದೆ.

ಸರ್ಕಾರಿ ಅಧಿಕಾರಿಗಳು, ಸಾಮಾನ್ಯ ಆಡಳಿತ ಇಲಾಖೆ ಹೊರಡಿಸಿದ ನಿರ್ಣಯದಲ್ಲಿ ಅಧಿಕಾರಿಗಳು ತಮ್ಮನ್ನು ಭೇಟಿಯಾಗಲು ಬರುವ ಜನರಲ್ಲಿ ವಂದೇ ಮಾತರಂ ಎಂದು ಬಳಸುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಲಾಗಿದೆ.

ಹೆಲೋ ಎಂಬುದು ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಯಾಗಿದೆ ಮತ್ತು ಕೇವಲ ಯಾವುದೇ ನಿರ್ದಿಷ್ಟ ಅರ್ಥವಿಲ್ಲದ ಶುಭಾಶಯ ಮತ್ತು ಯಾವುದೇ ಪ್ರೀತಿಯನ್ನು ಉಂಟುಮಾಡುವುದಿಲ್ಲ ಎಂದು ಹೇಳಲಾಗಿದೆ.

ಮಹಾರಾಷ್ಟ್ರದಲ್ಲಿ ಎಸ್‌ಪಿ ನಾಯಕ ಅಬು ಅಸಿಮ್ ಅಜ್ಮಿ ಅವರು ಸರ್ಕಾರಿ ನೌಕರರು ಫೋನ್‌ನಲ್ಲಿ ಹೆಲೋ ಬದಲು ವಂದೇ ಮಾತರಂ ಎಂದು ಹೇಳುವುದನ್ನು ವಿರೋಧಿಸಿದ್ದಾರೆ.

ಸರ್ಕಾರದ ಈ ಆದೇಶ ತಪ್ಪು ಎಂದು ಹೇಳಿದ್ದು, ಬಿಜೆಪಿ ಉದ್ದೇಶಪೂರ್ವಕವಾಗಿಯೇ ಇಂತಹ ಆದೇಶ ಹೊರ ಹಾಕಿದ್ದು, ಹಿಂದೂ-ಮುಸ್ಲಿಂ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಾವು ದೇಶವನ್ನು ಪ್ರೀತಿಸುತ್ತೇವೆ, ಆದರೆ ಅಲ್ಲಾಹುವಿನ ಮುಂದೆ ಮಾತ್ರ ತಲೆ ಬಾಗುತ್ತೇವೆ ಎಂದು ಅಬು ಅಸಿಮ್ ಹೇಳಿದ್ದಾರೆ. ನಾವು ಎಂದಿಗೂ ವಂದೇ ಮಾತರಂ ಹೇಳುವುದಿಲ್ಲ ಎಂದು ಹೇಳಿದ್ದಾರೆ.

ವಾಸ್ತವವಾಗಿ, ಗಾಂಧಿ ಜಯಂತಿಯಿಂದ, ಮಹಾರಾಷ್ಟ್ರ ಸರ್ಕಾರವು ಎಲ್ಲಾ ಸರ್ಕಾರಿ ನೌಕರರಿಗೆ ಫೋನ್‌ನಲ್ಲಿ ಹಲೋ ಬದಲಿಗೆ ವಂದೇ ಮಾತರಂ ಎಂದು ಹೇಳಲು ಆದೇಶಿಸಿದೆ. ಬಾಳಾಸಾಹೇಬರಂತೆ ಸದಾ ಜೈ ಮಹಾರಾಷ್ಟ್ರ ಎನ್ನುತ್ತಿದ್ದ ನೀವು ಬಿಜೆಪಿ, ಆರ್‌ಎಸ್‌ಎಸ್‌ ಒತ್ತಡಕ್ಕೆ ಮಣಿದು ಅದನ್ನು ಬಿಟ್ಟು ಏಕೆ ಹೇಳುತ್ತಿದ್ದೀರಿ ಎಂದು ಅಬು ಅಸಿಂ ಅಜ್ಮಿ ಹೇಳಿದ್ದಾರೆ. ಜೈ ಮಹಾರಾಷ್ಟ್ರ ಎಂದು ಹೇಳುವುದು ದೇಶದ್ರೋಹವೇ?

ಮಹಾರಾಷ್ಟ್ರದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸುಧೀರ್ ಮುಂಗಂಟಿವಾರ್ ಅವರು ಆಗಸ್ಟ್ 14 ರಂದು ಆದೇಶ ಹೊರಡಿಸಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ ಫೋನ್ ಕರೆಗಳನ್ನು ತೆಗೆದುಕೊಳ್ಳುವಾಗ ಹೆಲೋ ಬದಲಿಗೆ ವಂದೇ ಮಾತರಂ ಎಂದು ಹೇಳುವುದನ್ನು ಕಡ್ಡಾಯಗೊಳಿಸಲಾಗಿದೆ.

ವಂದೇ ಮಾತರಂ ಕೇವಲ ಪದವಲ್ಲ ಬದಲಾಗಿ ಪ್ರತಿಯೊಬ್ಬ ಭಾರತೀಯನ ಭಾವನೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?