AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ್ ಬಂದ್ರೆ ಹೆಲೋ ಬದಲು ವಂದೇ ಮಾತರಂ ಹೇಳಿ: ಆದೇಶ ಹೊರಡಿಸಿದ ಶಿಂದೆ ಸರ್ಕಾರ

ಮೊಬೈಲ್​ಗೆ ಕರೆ ಬಂದರೆ ಹೆಲೋ ಎನ್ನುವ ಬದಲು ವಂದೇ ಮಾತರಂ ಹೇಳುವಂತೆ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.

ಕಾಲ್ ಬಂದ್ರೆ ಹೆಲೋ ಬದಲು ವಂದೇ ಮಾತರಂ ಹೇಳಿ: ಆದೇಶ ಹೊರಡಿಸಿದ ಶಿಂದೆ ಸರ್ಕಾರ
Eknath Shinde
TV9 Web
| Edited By: |

Updated on: Oct 02, 2022 | 9:48 AM

Share

ಫೋನ್​ ಕರೆಗಳು ಬಂದರೆ ಹೆಲೋ ಎನ್ನುವ ಬದಲು ವಂದೇ ಮಾತರಂ ಹೇಳುವಂತೆ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳು ನಾಗರಿಕರಿಂದ ದೂರವಾಣಿ ಅಥವಾ ಮೊಬೈಲ್ ಫೋನ್ ಕರೆಗಳನ್ನು ಸ್ವೀಕರಿಸುವಾಗ ಹೆಲೋ ಬದಲಿಗೆ ವಂದೇ ಮಾತರಂ ಎಂದು ಉದ್ಘರಿಸುವುದನ್ನು ಕಡ್ಡಾಯಗೊಳಿಸಿದೆ.

ಸರ್ಕಾರಿ ಅಧಿಕಾರಿಗಳು, ಸಾಮಾನ್ಯ ಆಡಳಿತ ಇಲಾಖೆ ಹೊರಡಿಸಿದ ನಿರ್ಣಯದಲ್ಲಿ ಅಧಿಕಾರಿಗಳು ತಮ್ಮನ್ನು ಭೇಟಿಯಾಗಲು ಬರುವ ಜನರಲ್ಲಿ ವಂದೇ ಮಾತರಂ ಎಂದು ಬಳಸುವಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಲಾಗಿದೆ.

ಹೆಲೋ ಎಂಬುದು ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆಯಾಗಿದೆ ಮತ್ತು ಕೇವಲ ಯಾವುದೇ ನಿರ್ದಿಷ್ಟ ಅರ್ಥವಿಲ್ಲದ ಶುಭಾಶಯ ಮತ್ತು ಯಾವುದೇ ಪ್ರೀತಿಯನ್ನು ಉಂಟುಮಾಡುವುದಿಲ್ಲ ಎಂದು ಹೇಳಲಾಗಿದೆ.

ಮಹಾರಾಷ್ಟ್ರದಲ್ಲಿ ಎಸ್‌ಪಿ ನಾಯಕ ಅಬು ಅಸಿಮ್ ಅಜ್ಮಿ ಅವರು ಸರ್ಕಾರಿ ನೌಕರರು ಫೋನ್‌ನಲ್ಲಿ ಹೆಲೋ ಬದಲು ವಂದೇ ಮಾತರಂ ಎಂದು ಹೇಳುವುದನ್ನು ವಿರೋಧಿಸಿದ್ದಾರೆ.

ಸರ್ಕಾರದ ಈ ಆದೇಶ ತಪ್ಪು ಎಂದು ಹೇಳಿದ್ದು, ಬಿಜೆಪಿ ಉದ್ದೇಶಪೂರ್ವಕವಾಗಿಯೇ ಇಂತಹ ಆದೇಶ ಹೊರ ಹಾಕಿದ್ದು, ಹಿಂದೂ-ಮುಸ್ಲಿಂ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಾವು ದೇಶವನ್ನು ಪ್ರೀತಿಸುತ್ತೇವೆ, ಆದರೆ ಅಲ್ಲಾಹುವಿನ ಮುಂದೆ ಮಾತ್ರ ತಲೆ ಬಾಗುತ್ತೇವೆ ಎಂದು ಅಬು ಅಸಿಮ್ ಹೇಳಿದ್ದಾರೆ. ನಾವು ಎಂದಿಗೂ ವಂದೇ ಮಾತರಂ ಹೇಳುವುದಿಲ್ಲ ಎಂದು ಹೇಳಿದ್ದಾರೆ.

ವಾಸ್ತವವಾಗಿ, ಗಾಂಧಿ ಜಯಂತಿಯಿಂದ, ಮಹಾರಾಷ್ಟ್ರ ಸರ್ಕಾರವು ಎಲ್ಲಾ ಸರ್ಕಾರಿ ನೌಕರರಿಗೆ ಫೋನ್‌ನಲ್ಲಿ ಹಲೋ ಬದಲಿಗೆ ವಂದೇ ಮಾತರಂ ಎಂದು ಹೇಳಲು ಆದೇಶಿಸಿದೆ. ಬಾಳಾಸಾಹೇಬರಂತೆ ಸದಾ ಜೈ ಮಹಾರಾಷ್ಟ್ರ ಎನ್ನುತ್ತಿದ್ದ ನೀವು ಬಿಜೆಪಿ, ಆರ್‌ಎಸ್‌ಎಸ್‌ ಒತ್ತಡಕ್ಕೆ ಮಣಿದು ಅದನ್ನು ಬಿಟ್ಟು ಏಕೆ ಹೇಳುತ್ತಿದ್ದೀರಿ ಎಂದು ಅಬು ಅಸಿಂ ಅಜ್ಮಿ ಹೇಳಿದ್ದಾರೆ. ಜೈ ಮಹಾರಾಷ್ಟ್ರ ಎಂದು ಹೇಳುವುದು ದೇಶದ್ರೋಹವೇ?

ಮಹಾರಾಷ್ಟ್ರದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸುಧೀರ್ ಮುಂಗಂಟಿವಾರ್ ಅವರು ಆಗಸ್ಟ್ 14 ರಂದು ಆದೇಶ ಹೊರಡಿಸಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ ಫೋನ್ ಕರೆಗಳನ್ನು ತೆಗೆದುಕೊಳ್ಳುವಾಗ ಹೆಲೋ ಬದಲಿಗೆ ವಂದೇ ಮಾತರಂ ಎಂದು ಹೇಳುವುದನ್ನು ಕಡ್ಡಾಯಗೊಳಿಸಲಾಗಿದೆ.

ವಂದೇ ಮಾತರಂ ಕೇವಲ ಪದವಲ್ಲ ಬದಲಾಗಿ ಪ್ರತಿಯೊಬ್ಬ ಭಾರತೀಯನ ಭಾವನೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?