AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ರತ್ನ ಪ್ರಶಸ್ತಿಗೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ

ಭಾರತದ ಹಿರಿಯ ಕೈಗಾರಿಕೋದ್ಯಮಿ ರತನ್ ಎನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಮುಂಬೈನ ಎನ್‌ಸಿಪಿಎ ಹುಲ್ಲುಹಾಸಿನಲ್ಲಿ ಇರಿಸಲಾಗಿದೆ. ರತನ್ ಟಾಟಾ ನಿಧನಕ್ಕೆ ದೇಶಾದ್ಯಂತ ಕೋಟ್ಯಂತರ ಜನರು ಕಂಬನಿ ಮಿಡಿದಿದ್ದಾರೆ. ಈ ನಡುವೆ ರತನ್ ಟಾಟಾ ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ಭಾರತ ರತ್ನ ಪ್ರಶಸ್ತಿಗೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ
ರತನ್ ಟಾಟಾ
ಸುಷ್ಮಾ ಚಕ್ರೆ
|

Updated on: Oct 10, 2024 | 2:57 PM

Share

ಮುಂಬೈ: ಮಹಾರಾಷ್ಟ್ರ ಸರ್ಕಾರ ಇಂದು ನಡೆದ ಸಂಪುಟ ಸಭೆಯಲ್ಲಿ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಪ್ರಸ್ತಾಪಿಸಲು ನಿರ್ಧರಿಸಿದೆ. ಇಂದು ರಾಜ್ಯ ಸಚಿವ ಸಂಪುಟದಲ್ಲಿ ಟಾಟಾ ಅವರಿಗೆ ಸಂತಾಪ ಸೂಚಿಸುವ ಪ್ರಸ್ತಾವನೆಯನ್ನೂ ಅಂಗೀಕರಿಸಲಾಗಿದೆ. ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಇರಿಸಲಾಗಿರುವ ಮುಂಬೈನ ಎನ್‌ಸಿಪಿಎ ಹುಲ್ಲುಹಾಸಿಗೆ ಎಲ್ಲ ಪಕ್ಷಗಳ ನಾಯಕರು ಆಗಮಿಸುತ್ತಿದ್ದಾರೆ.

ಸಂಪುಟ ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ. ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾಗೆ ಭಾರತ ರತ್ನ ನೀಡಬೇಕೆಂದು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನೂ ಸಂಪುಟ ಅಂಗೀಕರಿಸಿತು. ಟಾಟಾ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿಯನ್ನು ಈಗಾಗಲೇ ನೀಡಲಾಗಿದೆ.

ಇದನ್ನೂ ಓದಿ: Ratan Tata Funeral: ಪಾರ್ಸಿಯಲ್ಲ ಹಿಂದೂ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಸಂಸ್ಕಾರ ಏಕೆ?

ಸಮಾಜದ ಬೆಳವಣಿಗೆಗೆ ಉದ್ಯಮಶೀಲತೆ ಪರಿಣಾಮಕಾರಿ ಮಾರ್ಗವಾಗಿದೆ ಎಂದು ನಿರ್ಣಯವು ಹೇಳಿದೆ. ಹೊಸ ಉದ್ಯಮಗಳನ್ನು ಸ್ಥಾಪಿಸುವ ಮೂಲಕ ದೇಶವನ್ನು ಪ್ರಗತಿ ಮತ್ತು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಬಹುದು. ಇದಕ್ಕೆ ದೇಶ ಪ್ರೇಮ ಮತ್ತು ಸಮಾಜದ ಉನ್ನತಿಗಾಗಿ ಪ್ರಾಮಾಣಿಕ ಭಾವನೆಗಳೂ ಬೇಕು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

ದೇಶ, ಸಮಾಜಕ್ಕಾಗಿ ಬದ್ಧತೆ ಹೊಂದಿದ್ದ ದೂರದೃಷ್ಟಿಯ ನಾಯಕನನ್ನು ಕಳೆದುಕೊಂಡಿದ್ದೇವೆ. ಕೈಗಾರಿಕಾ ವಲಯ ಮತ್ತು ಸಮಾಜದ ಉನ್ನತಿಯಲ್ಲಿ ಟಾಟಾ ಅವರ ಪಾತ್ರ ಅಪ್ರತಿಮವಾಗಿತ್ತು. ಅವರು ಉನ್ನತ ನೈತಿಕತೆ, ಪಾರದರ್ಶಕ ಮತ್ತು ಸ್ವಚ್ಛ ವ್ಯಾಪಾರದ ಆಡಳಿತವನ್ನು ಶಿಸ್ತಿನಿಂದ ಅನುಸರಿಸುವ ಮೂಲಕ ಎಲ್ಲಾ ಸವಾಲುಗಳನ್ನು ನಿಭಾಯಿಸಿದರು ಎಂದು ಸರ್ಕಾರದ ಪ್ರಕಟಣೆ ಹೇಳಿದೆ.

ಇದನ್ನೂ ಓದಿ: TATA’s First Car: ರತನ್ ಟಾಟಾ ನೇತೃತ್ವದಲ್ಲಿ ಟಾಟಾ ಮೋಟಾರ್ಸ್​ನ ಮೊದಲ ಭಾರತೀಯ ಕಾರು ಯಾವುದು ಗೊತ್ತೇ?

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಬುಧವಾರ ರಾತ್ರಿ 11.30ಕ್ಕೆ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಅಪ್ರತಿಮ ಕೈಗಾರಿಕೋದ್ಯಮಿಯಾದ ಅವರಿಗೆ ಇಂದು ಸಂಜೆ ಸರ್ಕಾರಿ ಅಂತ್ಯಕ್ರಿಯೆ ನಡೆಯಲಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್ ಗ್ರೂಪ್‌ವರೆಗೆ ಅಧ್ಯಕ್ಷರಾಗಿದ್ದ ರತನ್ ಟಾಟಾ ಅವರು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರೆಳೆದರು. ಪದ್ಮವಿಭೂಷಣ ಪುರಸ್ಕೃತರಾದ ರತನ್ ಟಾಟಾ ಅವರು ಸೋಮವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ