AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವೇಂದ್ರ ಫಡ್ನವೀಸ್ ಸೇರಿ ಹಲವು ವಿಪಕ್ಷ ನಾಯಕರ ಭದ್ರತೆ ತಗ್ಗಿಸಿದ ಮಹಾರಾಷ್ಟ್ರ ಸರ್ಕಾರ

2019ರಲ್ಲಿ ಈ ಬಗ್ಗೆ ಕೊನೆಯ ಸಭೆ ನಡೆದಿತ್ತು. ಕೊರೊನಾ ಕಾರಣದಿಂದ 2020ರಲ್ಲಿ ಸಭೆ ಸೇರಲು ಆಗಿರಲಿಲ್ಲ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ದೇವೇಂದ್ರ ಫಡ್ನವೀಸ್ ಸೇರಿ ಹಲವು ವಿಪಕ್ಷ ನಾಯಕರ ಭದ್ರತೆ ತಗ್ಗಿಸಿದ ಮಹಾರಾಷ್ಟ್ರ ಸರ್ಕಾರ
ದೇವೇಂದ್ರ ಫಡಣವಿಸ್
ರಾಜೇಶ್ ದುಗ್ಗುಮನೆ
|

Updated on: Jan 10, 2021 | 9:59 PM

Share

ಮುಂಬೈ: ಮಹಾರಾಷ್ಟ್ರ ವಿರೋಧ ಪಕ್ಷ ನಾಯಕರಾದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​, ಮಹಾರಾಷ್ಟ್ರ ನವ ನಿರ್ಮಾಣ ಸೇನೆ (ಎಂಎನ್​ಎಸ್​)​ ನಾಯಕ ರಾಜ್​ ಠಾಕ್ರೆ ಹಾಗೂ ಕೇಂದ್ರ ಸಚಿವ ರಾಮ​​ದಾಸ್​ ಅಠಾವಳೆ ಭದ್ರತೆಯನ್ನು  ರಾಜ್ಯ ಸರ್ಕಾರ ತಗ್ಗಿಸಿದೆ.

ಎರಡು ದಿನಗಳ ಹಿಂದೆ ಮಹಾರಾಷ್ಟ್ರ ಸರ್ಕಾರ ಭದ್ರತೆ ಪರಿಶೀಲನಾ ಸಭೆ ಏರ್ಪಡಿಸಿತ್ತು. ಈ ವೇಳೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ವಿಐಪಿಗಳಿಗೆ ನೀಡುವ ಭದ್ರತೆಯನ್ನು ಆಗಾಗ ವಿಮರ್ಶೆ ಮಾಡಲಾಗುತ್ತದೆ. ಇದು ಸಾಮಾನ್ಯ ಪ್ರಕ್ರಿಯೆ. 2019ರಲ್ಲಿ ಈ ಬಗ್ಗೆ ಕೊನೆಯ ಸಭೆ ನಡೆದಿತ್ತು. ಕೊರೊನಾ ಕಾರಣದಿಂದ 2020ರಲ್ಲಿ ಸಭೆ ಸೇರಲು ಆಗಿರಲಿಲ್ಲ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ದೇವೇಂದ್ರ ಫಡ್ನವೀಸ್​ಗೆ ಈ ಮೊದಲು Z+ ಭದ್ರತೆ ನೀಡಲಾಗಿತ್ತು. ಇದನ್ನು ಈಗ Y+ಗೆ ಇಳಿಕೆ ಮಾಡಲಾಗಿದೆ. ಫಡ್ನವೀಸ್​ ಪತ್ನಿ ಅಮೃತಾ ಫಡ್ನವೀಸ್​ ಹಾಗೂ ಮಗಳಿಗೆ ನೀಡಲಾಗಿದ್ದ Y + ಭದ್ರತೆಯನ್ನು X ಶ್ರೇಣಿಗೆ ಇಳಿಕೆ ಮಾಡಲಾಗಿದೆ. ಎಂಎನ್​ಎಸ್​ ಪಕ್ಷದ ನಾಯಕ ರಾಜ್​ ಠಾಕ್ರೆ ಭದ್ರತೆಯನ್ನು Z ಶ್ರೇಣಿಯಿಂದ Y+ ಶ್ರೇಣಿಗೆ ಇಳಿಕೆ ಮಾಡಲಾಗಿದೆ. ಪ್ರಮುಖ ನಾಯಕರ ಭದ್ರತೆಯನ್ನು ತಗ್ಗಿಸಿದ ಸರ್ಕಾರದ ಕ್ರಮವನ್ನು ಬಿಜೆಪಿ ಟೀಕಿಸಿದೆ.

ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘Y’ ಶ್ರೇಣಿಯ ಭದ್ರತೆ ನೀಡಿದ ರಾಜ್ಯ ಸರ್ಕಾರ

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ