AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿರ್ಬಂಧಗಳನ್ನು ಪರಿಷ್ಕರಿಸಿದ ಮಹಾರಾಷ್ಟ್ರ; ಶೇ 50 ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿವೆ ಬ್ಯೂಟಿ ಸಲೂನ್‌, ಜಿಮ್‌ಗಳು

ಈಜುಕೊಳಗಳು, ಸ್ಪಾಗಳು, ಜಿಮ್‌ಗಳು, ಬ್ಯೂಟಿ ಸಲೂನ್‌ಗಳು ಮತ್ತು ವೆಲ್ ನೆಸ್ ಕೇಂದ್ರಗಳನ್ನು ಮುಂದಿನ ಆದೇಶದವರೆಗೆ ಮುಚ್ಚಲಾಗುವುದು ಎಂದು ಆದೇಶದಲ್ಲಿ ಆರಂಭದಲ್ಲಿ ತಿಳಿಸಲಾಗಿತ್ತು. ಆದಾಗ್ಯೂ, ಈಗ, ಜಿಮ್‌ಗಳು ಮತ್ತು ಕೂದಲು ಕತ್ತರಿಸುವ ಸಲೂನ್‌ಗಳು ಶೇಕಡಾ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

ಕೊವಿಡ್ ನಿರ್ಬಂಧಗಳನ್ನು ಪರಿಷ್ಕರಿಸಿದ ಮಹಾರಾಷ್ಟ್ರ; ಶೇ 50 ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿವೆ ಬ್ಯೂಟಿ ಸಲೂನ್‌, ಜಿಮ್‌ಗಳು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 09, 2022 | 4:18 PM

Share

ಮಹಾರಾಷ್ಟ್ರ: ಜನವರಿ 10 ಸೋಮವಾರದಿಂದ ರಾಜ್ಯದಲ್ಲಿ ವಿಧಿಸಲಾಗುವ ನಿರ್ಬಂಧಗಳ ಹಿಂದಿನ ಆದೇಶವನ್ನು ಮಹಾರಾಷ್ಟ್ರ (maharashtra)  ಸರ್ಕಾರ ಭಾನುವಾರ ಪರಿಷ್ಕರಿಸಿದೆ. ಇದರ ಪ್ರಕಾರ ಬ್ಯೂಟಿ ಸಲೂನ್‌ಗಳು ಮತ್ತು ಜಿಮ್‌ಗಳು ಶೇ 50 ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಶನಿವಾರದ ಆದೇಶದಲ್ಲಿ ಎಲ್ಲಾ ಬ್ಯೂಟಿ ಸಲೂನ್‌ಗಳು, ಸ್ಪಾಗಳು, ಜಿಮ್‌ಗಳನ್ನು ಮುಚ್ಚುವಂತೆ ಸರ್ಕಾರ ಆದೇಶಿಸಿದೆ. ಕೂದಲು ಕತ್ತರಿಸುವ ಸಲೂನ್‌ಗಳಿಗೆ ಮಾತ್ರ ಅರ್ಧ ಸಾಮರ್ಥ್ಯದಲ್ಲಿ ವ್ಯಾಪಾರ ನಡೆಸಲು ಅನುಮತಿ ನೀಡಲಾಯಿತು. ಒಂದು ದಿನದ ನಂತರ ಸರ್ಕಾರವು ಆದೇಶವನ್ನು ಪರಿಷ್ಕರಿಸಿದ್ದ ನಿರ್ಬಂಧಿತ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾದ ಸಂಸ್ಥೆಗಳ ವರ್ಗದ ಅಡಿಯಲ್ಲಿ ಬ್ಯೂಟಿ ಸಲೂನ್‌ಗಳು ಮತ್ತು ಜಿಮ್‌ಗಳನ್ನು ಸೇರಿಸಿದೆ. ಜಿಮ್‌ಗಳು ಮತ್ತು ಬ್ಯೂಟಿ ಸಲೂನ್‌ಗಳ ಒಳಗೆ ಸಂಪೂರ್ಣವಾಗಿ ಲಸಿಕೆ ಹಾಕಿದವರಿಗೆ ಮಾತ್ರ ಅಮತಿಸಲಾಗುವುದು ಎಂದು ಪರಿಷ್ಕೃತ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.  ಶನಿವಾರ ಸರ್ಕಾರವು ಹೊಸ ಮಾರ್ಗಸೂಚಿಗಳೊಂದಿಗೆ ಪ್ರಕಟಿಸಿದ್ದು, ಜನರ ಸಂಚಾರವನ್ನು ನಿರ್ಬಂಧಿಸಿತ್ತು .ಅದೇ ವೇಳೆ ಕೊವಿಡ್-ಸೂಕ್ತ ನಡವಳಿಕೆಯನ್ನು ಉಲ್ಲಂಘಿಸಿದ್ದಕ್ಕಾಗಿ ದಂಡವನ್ನು ಘೋಷಿಸಿತು. ಹೊಸ ಆದೇಶದ ಪ್ರಕಾರ  ಬೆಳಿಗ್ಗೆ 5 ರಿಂದ ರಾತ್ರಿ 11 ರವರೆಗೆ ಐದು ಅಥವಾ ಅದಕ್ಕಿಂತ ಹೆಚ್ಚಿನ ಗುಂಪುಗಳಲ್ಲಿ ಜನರ ಚಲನೆಯನ್ನು ಅನುಮತಿಸಲಾಗುವುದಿಲ್ಲ. ಅಲ್ಲದೆ, ಅಗತ್ಯ ಉದ್ದೇಶಗಳನ್ನು ಹೊರತುಪಡಿಸಿ ರಾತ್ರಿ 11 ರಿಂದ ಸಂಜೆ 5 ರವರೆಗೆ ಜನರ ಸಂಚಾರಕ್ಕೆ ಅವಕಾಶವಿರುವುದಿಲ್ಲ.

ಈಜುಕೊಳಗಳು, ಸ್ಪಾಗಳು, ಜಿಮ್‌ಗಳು, ಬ್ಯೂಟಿ ಸಲೂನ್‌ಗಳು ಮತ್ತು ವೆಲ್ ನೆಸ್ ಕೇಂದ್ರಗಳನ್ನು ಮುಂದಿನ ಆದೇಶದವರೆಗೆ ಮುಚ್ಚಲಾಗುವುದು ಎಂದು ಆದೇಶದಲ್ಲಿ ಆರಂಭದಲ್ಲಿ ತಿಳಿಸಲಾಗಿತ್ತು. ಆದಾಗ್ಯೂ, ಈಗ, ಜಿಮ್‌ಗಳು ಮತ್ತು ಕೂದಲು ಕತ್ತರಿಸುವ ಸಲೂನ್‌ಗಳು ಶೇಕಡಾ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

ಮನರಂಜನಾ ಉದ್ಯಾನವನಗಳು, ಮೃಗಾಲಯಗಳು, ವಸ್ತುಸಂಗ್ರಹಾಲಯಗಳು ಮುಚ್ಚಲ್ಪಡುತ್ತವೆ. ಶಾಪಿಂಗ್ ಮಾಲ್‌ಗಳು ಮತ್ತು ಮಾರುಕಟ್ಟೆ ಸಂಕೀರ್ಣಗಳು ಕೊವಿಡ್ ಪ್ರೋಟೋಕಾಲ್‌ಗಳ ಅನುಸರಣೆಯೊಂದಿಗೆ ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತವೆ. ಲಸಿಕೆ ಹಾಕಿದ ವ್ಯಕ್ತಿಗಳಿಗೆ ಮಾತ್ರ ಪ್ರವೇಶ  ಅನುಮತಿಸಲಾಗುವುದು.

ಸಿನಿಮಾ ಹಾಲ್‌ಗಳು, ಥಿಯೇಟರ್‌ಗಳು, ರೆಸ್ಟೋರೆಂಟ್‌ಗಳು ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸುದೀರ್ಘ ಸಭೆಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೊಸ ಆದೇಶವನ್ನು ಅನುಮೋದಿಸಿದ್ದಾರೆ.

ಮದುವೆಗಳಲ್ಲಿ ಗರಿಷ್ಠ 50, ಅಂತ್ಯಕ್ರಿಯೆ ಮತ್ತು ಅಂತಿಮ ಸಂಸ್ಕಾರದಲ್ಲಿ 20, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಸಭೆಗಳಲ್ಲಿ 50 ಜನರಿಗೆ ಪಾಲ್ಗೊಳ್ಳುವ  ಅವಕಾಶವಿದೆ. ಸಾರ್ವಜನಿಕ ಸಾರಿಗೆಯಲ್ಲಿ ಸಂಪೂರ್ಣ ಲಸಿಕೆ ಹಾಕಿದ ವ್ಯಕ್ತಿಗಳನ್ನು ಮಾತ್ರ ಅನುಮತಿಸಲಾಗುವುದು ಎಂದು ಮಾರ್ಗಸೂಚಿಗಳು ತಿಳಿಸಿವೆ.

ದೇಶೀಯ ಪ್ರಯಾಣಿಕರಿಗೆ, ಎರಡು ಬಾರಿ ವ್ಯಾಕ್ಸಿನೇಷನ್ ಅಥವಾ ಕಡ್ಡಾಯ ಋಣಾತ್ಮಕ ಆರ್ ಟಿಪಿಸಿಆರ್ ಪರೀಕ್ಷಾ ವರದಿಯ ಅಗತ್ಯವಿದೆ.

ಈಗಿನಂತೆಸ್ಥಳೀಯ ರೈಲುಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಮತ್ತು ಎಲ್ಲಾ ಸಾರ್ವಜನಿಕ ಸಾರಿಗೆಯು ಎಂದಿನಂತೆ ಕಾರ್ಯನಿರ್ವಹಿಸುತ್ತದೆ ಆದರೆ ಸಂಪೂರ್ಣವಾಗಿ ಲಸಿಕೆ ಪಡೆದ ಜನರಿಗೆ ಮಾತ್ರ ಅನುಮತಿಸಲಾಗುತ್ತದೆ.

ಏತನ್ಮಧ್ಯೆ, ಕೊವಿಡ್-19 ಪ್ರಕರಣಗಳ ಉಲ್ಬಣದ ಮಧ್ಯೆ, ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಅವರು ನಗರದಲ್ಲಿ ವಾರಾಂತ್ಯದ ಲಾಕ್‌ಡೌನ್ ಅನ್ನು ಸದ್ಯಕ್ಕೆ ವಿಧಿಸಲಾಗುವುದಿಲ್ಲ ಆದರೆ ಕಟ್ಟುನಿಟ್ಟಾದ ನಿರ್ಬಂಧಗಳು, ಜನರು ಕೊವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸದಿದ್ದರೆ  ಎಸ್​​ಒಪಿಗಳನ್ನು ತರಬಹುದು ಎಂದು ಹೇಳಿದರು.

ಇದನ್ನೂ ಓದಿ:  ದೆಹಲಿಯಲ್ಲಿ ಲಾಕ್​​ಡೌನ್ ಇಲ್ಲ, ಆದರೆ ಎಚ್ಚರಿಕೆ ವಹಿಸಿ: ಅರವಿಂದ ಕೇಜ್ರಿವಾಲ್

Published On - 4:14 pm, Sun, 9 January 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ