AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ದಾಖಲಾಗಿದ್ದ ಎಲ್ಲ ಕೇಸುಗಳನ್ನೂ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ

ಕಟ್ಟುನಿಟ್ಟಾದ ಕರ್ಫ್ಯೂ ಸಮಯದಲ್ಲಿ ರಾತ್ರಿಯಲ್ಲಿ ತಿರುಗಾಡುವುದು, ನಿಷೇಧಾಜ್ಞೆಗಳನ್ನು ಉಲ್ಲಂಘಿಸಿ ಗುಂಪುಗಳಲ್ಲಿ ಕಾಣಿಸಿಕೊಳ್ಳುವುದು ಮುಂತಾದ ನಿಯಮಗಳನ್ನು ಉಲ್ಲಂಘಿಸಿದವರ ಮೇಲೆ ಕೇಸ್ ದಾಖಲಾಗಿತ್ತು.

ಲಾಕ್​ಡೌನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ದಾಖಲಾಗಿದ್ದ ಎಲ್ಲ ಕೇಸುಗಳನ್ನೂ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 29, 2022 | 6:17 PM

Share

ಮುಂಬೈ: ಕಳೆದ 2 ವರ್ಷಗಳಿಂದ ದೇಶದಲ್ಲಿ ಕೊವಿಡ್ -19 ಕೇಸುಗಳು (Covid-19 Cases) ಹೆಚ್ಚಾಗಿದ್ದುದರಿಂದ ಅನೇಕ ರಾಜ್ಯಗಳಲ್ಲಿ ಲಾಕ್​ಡೌನ್ (Lockdown Rules) ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಇದೀಗ ಕಳೆದ ಎರಡು ವರ್ಷಗಳಲ್ಲಿ ಲಾಕ್‌ಡೌನ್ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ವಿದ್ಯಾರ್ಥಿಗಳು ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ದಾಖಲಿಸಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ (Maharashtra Government) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಕೇಸ್ ದಾಖಲಾಗಿದ್ದ ಎಲ್ಲ ನಾಗರಿಕರೂ ನಿಟ್ಟುಸಿರು ಬಿಡುವಂತಾಗಿದೆ. ಅನಗತ್ಯವಾಗಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದ ಸಾವಿರಾರು ಮಂದಿಗೆ ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರ ಸಮಾಧಾನ ತಂದಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣಗಳನ್ನು ಹೆಚ್ಚಾಗಿ ದಾಖಲಿಸಲಾಗಿದೆ ಮತ್ತು ಪ್ರಸ್ತಾವನೆಯನ್ನು ಅನುಮೋದನೆಗಾಗಿ ರಾಜ್ಯ ಸಚಿವ ಸಂಪುಟದ ಮುಂದೆ ಇಡಲಾಗುವುದು ಎಂದು ಮಹಾರಾಷ್ಟ್ರದ ಗೃಹ ಸಚಿವ ದಿಲೀಪ್ ವಾಲ್ಸೆ-ಪಾಟೀಲ್ ಹೇಳಿದ್ದಾರೆ. ಸಚಿವ ಸಂಪುಟದ ಒಪ್ಪಿಗೆಯ ನಂತರ, ರಾಜ್ಯಾದ್ಯಂತ ದಾಖಲಾಗಿರುವ ಅಂತಹ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲಾಗುತ್ತದೆ ಎಂದು ವಾಲ್ಸೆ-ಪಾಟೀಲ ತಿಳಿಸಿದ್ದಾರೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್‌ಗಳ ಸಮಯದಲ್ಲಿ, ವಿಶೇಷವಾಗಿ 2020-2021ರ ಅವಧಿಯಲ್ಲಿ ಮೊದಲ ಮತ್ತು ಎರಡನೆಯ ಕೋವಿಡ್ -19 ಅಲೆಗಳ ಸಮಯದಲ್ಲಿ, ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿಗಳು, ಯುವಕರು ಮತ್ತು ಸಾಮಾನ್ಯ ನಾಗರಿಕರು, ಕೆಲವು ಕುಟುಂಬಗಳ ವಿರುದ್ಧ ಸಾವಿರಾರು ಪ್ರಕರಣಗಳನ್ನು ದಾಖಲಿಸಲಾಗಿದೆ.

ಕಟ್ಟುನಿಟ್ಟಾದ ಕರ್ಫ್ಯೂ ಸಮಯದಲ್ಲಿ ರಾತ್ರಿಯಲ್ಲಿ ತಿರುಗಾಡುವುದು, ನಿಷೇಧಾಜ್ಞೆಗಳನ್ನು ಉಲ್ಲಂಘಿಸಿ ಗುಂಪುಗಳಲ್ಲಿ ಕಾಣಿಸಿಕೊಳ್ಳುವುದು, ಲಾಕ್‌ಡೌನ್ ಸಮಯದಲ್ಲಿ ಪ್ರವೇಶ ನಿಷೇಧಿಸಲಾದ ಬೀಚ್‌ಗಳಂತಹ ಸಾರ್ವಜನಿಕ ಸ್ಥಳಗಳಿಗೆ ಜನರು ಹೋಗುವುದು, ನಿಯಮಗಳನ್ನು ಉಲ್ಲಂಘಿಸಿದ ಕುಟುಂಬಗಳ ಮೇಲೆ ಕೇಸ್ ದಾಖಲಾಗಿತ್ತು. ಅಂತಹ ಉಲ್ಲಂಘನೆಗಳ ನಿಖರವಾದ ಸಂಖ್ಯೆಯು ತಕ್ಷಣವೇ ಲಭ್ಯವಿಲ್ಲ ಮತ್ತು ವಿವಿಧ ಅಧಿಕಾರಿಗಳಿಂದ ಕಂಪೈಲ್ ಮಾಡಲಾಗುತ್ತಿದೆಯಾದರೂ, IPC ಸೆಕ್ಷನ್ 188ರ ಅಡಿಯಲ್ಲಿ ಹೆಚ್ಚಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮುಂಬೈನಲ್ಲಿ​ ಪೊಲೀಸ್ ವಶಕ್ಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್​​ಗೆ ಮಾರ್ಚ್ 21ರವರೆಗೆ ನ್ಯಾಯಾಂಗ ಬಂಧನ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!