AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತಿ-ರಾಜಸ್ತಾನಿ ಹೇಳಿಕೆಗೆ ಕ್ಷಮೆ ಕೇಳಿದ ಮಹಾರಾಷ್ಟ್ರ ರಾಜ್ಯಪಾಲ ಬಿಎಸ್ ಕೊಶಿಯಾರಿ 

ಕಳೆದ ಶುಕ್ರವಾರ ಕೊಶಿಯಾರಿ ಅವರು  ಮುಂಬೈಯಿಂದ ಗುಜರಾತಿ ಮತ್ತು ರಾಜಸ್ತಾನಿ ಜನರನ್ನು ಹೊರ ಕಳುಹಿಸಿದರೆ  ಮುಂಬೈ ಮತ್ತು ಥಾಣೆಯಲ್ಲಿ  ಹಣವೇ ಇರಲ್ಲ ಎಂದಿದ್ದು ವಿವಾದವಾಗಿತ್ತು.

ಗುಜರಾತಿ-ರಾಜಸ್ತಾನಿ ಹೇಳಿಕೆಗೆ ಕ್ಷಮೆ ಕೇಳಿದ ಮಹಾರಾಷ್ಟ್ರ ರಾಜ್ಯಪಾಲ ಬಿಎಸ್ ಕೊಶಿಯಾರಿ 
ಬಿಎಸ್ ಕೊಶಿಯಾರಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 01, 2022 | 8:56 PM

Share

ಗುಜರಾತಿಗಳು- ರಾಜಸ್ತಾನಿಗಳು ಎಂಬ ಹೇಳಿಕೆಗೆ ಮಹಾರಾಷ್ಟ್ರ ಗವರ್ನರ್  ಬಿಎಸ್ ಕೊಶಿಯಾರಿ (BS Koshyari) ಕ್ಷಮೆಯಾಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕಳೆದ ಶುಕ್ರವಾರ ಕೊಶಿಯಾರಿ ಅವರು  ಮುಂಬೈಯಿಂದ ಗುಜರಾತಿ ಮತ್ತು ರಾಜಸ್ತಾನಿ ಜನರನ್ನು ಹೊರ ಕಳುಹಿಸಿದರೆ  ಮುಂಬೈ ಮತ್ತು ಥಾಣೆಯಲ್ಲಿ  ಹಣವೇ ಇರಲ್ಲ. ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಮಹಾರಾಷ್ಟ್ರ (Maharashtra) ರಾಜ್ಯಪಾಲರು ಇಂದು ಮರಾಠಿಯಲ್ಲಿ ಟ್ವೀಟ್ ಮಾಡಿ ಕ್ಷಮೆಯಾಚಿಸಿದ್ದಾರೆ.  ಮಹಾರಾಷ್ಟ್ರದ ಜನರು ಹೃದಯವಂತರು. ನನ್ನ  ಇತ್ತೀಚಿನ ಹೇಳಿಕೆಗಳನ್ನು ಕ್ಷಮಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ರಾಜಭವನ ಹೊರಡಿಸಿದ ಹೇಳಿಕೆಯಲ್ಲಿ ಬಿಎಸ್ ಕೊಶಿಯರಿ ಹೇಳಿದ್ದು, ಸಮಾಜದ ಕೆಲವು ಸದಸ್ಯರ ಕೊಡುಗೆಯ ಬಗ್ಗೆ ಮಾತನಾಡುವಾಗ ಅವರು ತಪ್ಪಾಗಿ ಈ ಮಾತುಗಳನ್ನಾಡಿದ್ದಾರೆ ಎಂದು ಹೇಳಿದೆ.

ಇದಕ್ಕಿಂತ ಮುಂಚೆ  ರಾಜ್ಯಪಾಲರು ತಮ್ಮ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ಮರಾಠಿ ಮಾತನಾಡುವ ಜನರ ಶ್ರಮವನ್ನು ಕಡಿಮೆ ಮಾಡುವ ಉದ್ದೇಶ ನನಗಿರಲಿಲ್ಲ ಎಂದು ಹೇಳಿದ್ದರು.  ರಾಜ್ಯಪಾಲರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ  ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಇದು ರಾಜ್ಯಪಾಲರ ವೈಯಕ್ತಿಕ ಹೇಳಿಕೆಗಳು. ನಾನು  ಅದನ್ನುಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಶಿಂಧೆ ಅವರ ನಿಲುವನ್ನು ಒಪ್ಪಿಕೊಂಡು ಬಿಎಸ್ ಕೊಶಿಯಾರಿ ಅವರನ್ನು ದೂರವಿಟ್ಟಿದ್ದಾರೆ.

ಶಿವಸೇನಾ ಮತ್ತು ಕಾಂಗ್ರೆಸ್‌ನ ಹಲವಾರು ನಾಯಕರು ವಾರದಲ್ಲಿ ಕೊಶಿಯಾರಿ  ಅವರನ್ನು ಟೀಕಿಸಿದ್ದು    ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದರು.

Published On - 7:41 pm, Mon, 1 August 22

Follow Us
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
10 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶೋತ್ಸವದ ಸಂಭ್ರಮ!
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
‘ಟಾಕ್ಸಿಕ್’ ಸಿನಿಮಾಗಾಗಿ ಯಶ್ ವರ್ಕೌಟ್ ಎಷ್ಟು ಕಠಿಣವಾಗಿತ್ತು ನೋಡಿ
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ