AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತಿ-ರಾಜಸ್ತಾನಿ ಹೇಳಿಕೆಗೆ ಕ್ಷಮೆ ಕೇಳಿದ ಮಹಾರಾಷ್ಟ್ರ ರಾಜ್ಯಪಾಲ ಬಿಎಸ್ ಕೊಶಿಯಾರಿ 

ಕಳೆದ ಶುಕ್ರವಾರ ಕೊಶಿಯಾರಿ ಅವರು  ಮುಂಬೈಯಿಂದ ಗುಜರಾತಿ ಮತ್ತು ರಾಜಸ್ತಾನಿ ಜನರನ್ನು ಹೊರ ಕಳುಹಿಸಿದರೆ  ಮುಂಬೈ ಮತ್ತು ಥಾಣೆಯಲ್ಲಿ  ಹಣವೇ ಇರಲ್ಲ ಎಂದಿದ್ದು ವಿವಾದವಾಗಿತ್ತು.

ಗುಜರಾತಿ-ರಾಜಸ್ತಾನಿ ಹೇಳಿಕೆಗೆ ಕ್ಷಮೆ ಕೇಳಿದ ಮಹಾರಾಷ್ಟ್ರ ರಾಜ್ಯಪಾಲ ಬಿಎಸ್ ಕೊಶಿಯಾರಿ 
ಬಿಎಸ್ ಕೊಶಿಯಾರಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 01, 2022 | 8:56 PM

Share

ಗುಜರಾತಿಗಳು- ರಾಜಸ್ತಾನಿಗಳು ಎಂಬ ಹೇಳಿಕೆಗೆ ಮಹಾರಾಷ್ಟ್ರ ಗವರ್ನರ್  ಬಿಎಸ್ ಕೊಶಿಯಾರಿ (BS Koshyari) ಕ್ಷಮೆಯಾಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕಳೆದ ಶುಕ್ರವಾರ ಕೊಶಿಯಾರಿ ಅವರು  ಮುಂಬೈಯಿಂದ ಗುಜರಾತಿ ಮತ್ತು ರಾಜಸ್ತಾನಿ ಜನರನ್ನು ಹೊರ ಕಳುಹಿಸಿದರೆ  ಮುಂಬೈ ಮತ್ತು ಥಾಣೆಯಲ್ಲಿ  ಹಣವೇ ಇರಲ್ಲ. ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಮಹಾರಾಷ್ಟ್ರ (Maharashtra) ರಾಜ್ಯಪಾಲರು ಇಂದು ಮರಾಠಿಯಲ್ಲಿ ಟ್ವೀಟ್ ಮಾಡಿ ಕ್ಷಮೆಯಾಚಿಸಿದ್ದಾರೆ.  ಮಹಾರಾಷ್ಟ್ರದ ಜನರು ಹೃದಯವಂತರು. ನನ್ನ  ಇತ್ತೀಚಿನ ಹೇಳಿಕೆಗಳನ್ನು ಕ್ಷಮಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ರಾಜಭವನ ಹೊರಡಿಸಿದ ಹೇಳಿಕೆಯಲ್ಲಿ ಬಿಎಸ್ ಕೊಶಿಯರಿ ಹೇಳಿದ್ದು, ಸಮಾಜದ ಕೆಲವು ಸದಸ್ಯರ ಕೊಡುಗೆಯ ಬಗ್ಗೆ ಮಾತನಾಡುವಾಗ ಅವರು ತಪ್ಪಾಗಿ ಈ ಮಾತುಗಳನ್ನಾಡಿದ್ದಾರೆ ಎಂದು ಹೇಳಿದೆ.

ಇದಕ್ಕಿಂತ ಮುಂಚೆ  ರಾಜ್ಯಪಾಲರು ತಮ್ಮ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ಮರಾಠಿ ಮಾತನಾಡುವ ಜನರ ಶ್ರಮವನ್ನು ಕಡಿಮೆ ಮಾಡುವ ಉದ್ದೇಶ ನನಗಿರಲಿಲ್ಲ ಎಂದು ಹೇಳಿದ್ದರು.  ರಾಜ್ಯಪಾಲರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದ  ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಇದು ರಾಜ್ಯಪಾಲರ ವೈಯಕ್ತಿಕ ಹೇಳಿಕೆಗಳು. ನಾನು  ಅದನ್ನುಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೂಡ ಶಿಂಧೆ ಅವರ ನಿಲುವನ್ನು ಒಪ್ಪಿಕೊಂಡು ಬಿಎಸ್ ಕೊಶಿಯಾರಿ ಅವರನ್ನು ದೂರವಿಟ್ಟಿದ್ದಾರೆ.

ಶಿವಸೇನಾ ಮತ್ತು ಕಾಂಗ್ರೆಸ್‌ನ ಹಲವಾರು ನಾಯಕರು ವಾರದಲ್ಲಿ ಕೊಶಿಯಾರಿ  ಅವರನ್ನು ಟೀಕಿಸಿದ್ದು    ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದರು.

Published On - 7:41 pm, Mon, 1 August 22

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ