AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾ’ಅಚ್ಚರಿ! CM ಆಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಬಿಜೆಪಿ-ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿಸಿಎಂ ಆಗಿ ಎನ್​ಸಿಪಿ ಪಕ್ಷದ ಅಜಿತ್ ಪವಾರ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆ 3 ಪಕ್ಷಗಳು ಸೇರಿ ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಪಕ್ಷಗಳು ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಆದ್ರೆ ಅಚ್ಚರಿ ಬೆಳವಣಿಗೆಯಲ್ಲಿ ಬಿಜೆಪಿ, ಎನ್‌ಸಿಪಿ ಸರ್ಕಾರ ರಚನೆ ಮಾಡಿವೆ. ವಿಡಿಯೋ ನೋಡಿ: ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ […]

‘ಮಹಾ’ಅಚ್ಚರಿ! CM ಆಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 23, 2019 | 2:23 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಬಿಜೆಪಿ-ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿಸಿಎಂ ಆಗಿ ಎನ್​ಸಿಪಿ ಪಕ್ಷದ ಅಜಿತ್ ಪವಾರ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಹಿಂದೆ 3 ಪಕ್ಷಗಳು ಸೇರಿ ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಪಕ್ಷಗಳು ಸರ್ಕಾರ ರಚನೆಗೆ ನಿರ್ಧರಿಸಿದ್ದವು. ಆದ್ರೆ ಅಚ್ಚರಿ ಬೆಳವಣಿಗೆಯಲ್ಲಿ ಬಿಜೆಪಿ, ಎನ್‌ಸಿಪಿ ಸರ್ಕಾರ ರಚನೆ ಮಾಡಿವೆ.

ವಿಡಿಯೋ ನೋಡಿ: ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್‌ ಪ್ರಮಾಣ ವಚನ ಸ್ವೀಕಾರ

ಶಿವಸೇನೆಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಬಿಜೆಪಿ! ಕಾಂಗ್ರೆಸ್, ಎನ್​ಸಿಪಿ ಜೊತೆ ಮೈತ್ರಿಗೆ ಶಿವಸೇನೆ ಮುಂದಾಗಿತ್ತು. ಈ ಮೂರೂ ಪಕ್ಷಗಳ ನಾಯಕರು ನಿರಂತರವಾಗಿ ಮಾತುಕತೆ ನಡೆಸುತ್ತಿದ್ದರು. ಸಚಿವ ಸ್ಥಾನದ ಹಂಚಿಕೆ ಬಗ್ಗೆಯೂ ಮಾತುಕತೆ ನಡೆದಿತ್ತು. ಶಿವಸೇನೆಯ ಉದ್ಧವ್ ಠಾಕ್ರೆಗೆ ಈ ಎರಡೂ ಪಕ್ಷಗಳು ಸಿಎಂ ಸ್ಥಾನ ಬಿಟ್ಟುಕೊಟ್ಟಿತ್ತು.

ಸರ್ಕಾರ ರಚನೆಗೂ ಮುನ್ನವೇ ರಾಷ್ಟ್ರಪತಿ ಆಡಳಿತ ವಾಪಸ್! ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸೇರಿ ಸರ್ಕಾರ ರಚನೆ ಮಾಡಿವೆ. ಆದ್ರೆ ಸರ್ಕಾರ ರಚನೆಗೂ ಮುನ್ನವೇ ರಾಷ್ಟ್ರಪತಿ ಆಡಳಿತವನ್ನು ಹಿಂಪಡೆಯಲಾಗಿದೆ. ಇಂದು ಮುಂಜಾನೆ 5.47ಕ್ಕೆ ರಾಷ್ಟ್ರಪತಿ ಆಡಳಿತವನ್ನು ವಾಪಸ್ ಪಡೆದಿದ್ದಾರೆ. ಮಹಾರಾಷ್ಟ್ರದಲ್ಲಿ ನವೆಂಬರ್ 12ರಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿತ್ತು.

Published On - 8:23 am, Sat, 23 November 19

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ