ಮಾಜಿ ಪೊಲೀಸ್ ಆಯುಕ್ತ ಪರಮ್ ಸಿಂಗ್ ವಿರುದ್ಧ ಪ್ರಾಥಮಿಕ ತನಿಖೆ ನಡೆಸಿ, ತಕ್ಷಣ ರಿಪೋರ್ಟ್​ ಕೊಡಿ: ಮಹಾರಾಷ್ಟ್ರ ಸರ್ಕಾರ

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ 'ಪ್ರಾಥಮಿಕ ತನಿಖೆ' ನಡೆಸಲು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಮಾಜಿ ಪೊಲೀಸ್ ಆಯುಕ್ತ ಪರಮ್ ಸಿಂಗ್ ವಿರುದ್ಧ ಪ್ರಾಥಮಿಕ ತನಿಖೆ ನಡೆಸಿ, ತಕ್ಷಣ ರಿಪೋರ್ಟ್​ ಕೊಡಿ: ಮಹಾರಾಷ್ಟ್ರ ಸರ್ಕಾರ
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್
ಆಯೇಷಾ ಬಾನು

Updated on: Apr 28, 2021 | 9:17 AM

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ ಪ್ರಾಥಮಿಕ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ. ಪರಮ್ ಬಿರ್ ಸಿಂಗ್ ಆಗಿನ ಗೃಹ ಸಚಿವ ಅನಿಲ್ ದೇಶಮುಖ್ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು ಮತ್ತು ಅವರ ವಿರುದ್ಧ ಪಿಐಎಲ್ ಕೂಡ ಸಲ್ಲಿಸಿದ್ದರು.

ರಾಜ್ಯ ಗೃಹ ಇಲಾಖೆ, ಏಪ್ರಿಲ್ 20 ರ ಆದೇಶದ ಪ್ರಕಾರ, ಫೆಬ್ರವರಿ 2 ರಂದು ಸಿಂಗ್ ವಿರುದ್ಧ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಅನುಪ್ ಡಾಂಗೆ ಸಲ್ಲಿಸಿದ್ದ ದೂರಿನ ಕುರಿತು “ಪ್ರಾಥಮಿಕ ತನಿಖೆ” ನಡೆಸುವಂತೆ ಪೊಲೀಸ್ ಮಹಾನಿರ್ದೇಶಕ ಸಂಜಯ್ ಪಾಂಡೆ ಅವರನ್ನು ತಿಳಿಸಲಾಗಿತ್ತು. ಪರಮ್ ಸಿಂಗ್ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಡಾಂಗೆ ದೂರಿನಲ್ಲಿ ಆರೋಪಿಸಿದ್ದರು.

ಗೃಹ ಇಲಾಖೆಯ ಆದೇಶ ಮಂಗಳವಾರ ಲಭ್ಯವಾಯಿತು. ಏಪ್ರಿಲ್ 7 ರಂದು ಸಲ್ಲಿಸಿದ ಸಹಾಯಕ ಪೊಲೀಸ್ ಆಯುಕ್ತ ಸಿದ್ಧಪಡಿಸಿದ ವರದಿಯನ್ನು ಪರಿಶೀಲಿಸುವಂತೆ ಪಾಂಡೆ ಅವರನ್ನು ಸೂಚಿಸಲಾಗಿತ್ತು.

“ಡಾಂಗೆ ಎತ್ತಿದ ಎಲ್ಲ ಅಂಶಗಳನ್ನು ಆಧರಿಸಿ ಪ್ರಾಥಮಿಕ ವಿಚಾರಣಾ ವರದಿಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಶೀಘ್ರದಲ್ಲಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿತ್ತು. ಬಾಂಬ್ ಭೀತಿಯ ನಂತರ ಕಳೆದ ತಿಂಗಳು ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ಸಿಂಗ್ ಅವರನ್ನು ಹೊರಹಾಕಲಾಯಿತು. ಮುಖೇಶ್ ಅಂಬಾನಿ ಅವರ ನಿವಾಸದ ಹೊರಗೆ, ಉದ್ಯಮಿ ಮನ್ಸುಖ್ ಹಿರಾನ್ ಅವರ ಹತ್ಯೆ ಮತ್ತು ಎರಡೂ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎನ್ಐಎ ಬಂಧಿಸಿದೆ.

ನಂತರ ಸಿಂಗ್ ಅವರು ದೇಶಮುಖ್ ವಿರುದ್ಧ ಗಂಭೀರ ಆರೋಪವನ್ನು ಮಾಡಿದರು, ವಾಜೆ ಸೇರಿದಂತೆ ಪೊಲೀಸ್ ಅಧಿಕಾರಿಗಳಿಗೆ ಬಾರ್ ಮತ್ತು ರೆಸ್ಟೋರೆಂಟ್ಗಳಿಂದ 100 ಕೋಟಿ ರೂ. ಸಂಗ್ರಹಿಸುವಂತೆ ತಿಳಿಸಿದ್ದಾರೆ ಎಂದು ಆರೋಪಿಸಿದ್ದರು. ಹಾಗೂ ಈ ವಿಷಯದಲ್ಲಿ ತನಿಖೆ ನಡೆಸಬೇಕೆಂದು ಕೋರಿ ಎನ್‌ಸಿಪಿ ನಾಯಕನ ವಿರುದ್ಧ ಕ್ರಿಮಿನಲ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದರು. ಪ್ರಾಥಮಿಕ ವಿಚಾರಣೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ಆದೇಶಿಸಿದ ನಂತರ ದೇಶಮುಖ್ ರಾಜೀನಾಮೆ ನೀಡಿದರು.

ಇದನ್ನೂ ಓದಿ: ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Loading...
Unable to load recommendations.
Follow Us