AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಎಲ್ಲರಿಗೂ ಕೊವಿಡ್ ಲಸಿಕೆ ಉಚಿತ; ಸಚಿವ ನವಾಬ್ ಮಲಿಕ್ ಘೋಷಣೆ

Free Covid Vaccine: ಮಹಾರಾಷ್ಟ್ರದ ಎಲ್ಲ ನಾಗರಿಕರಿಗೂ ಕೊವಿಡ್ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎಲ್ಲರಿಗೂ ಕೊವಿಡ್ ಲಸಿಕೆ ಉಚಿತ; ಸಚಿವ ನವಾಬ್ ಮಲಿಕ್ ಘೋಷಣೆ
ಕೊರೊನಾ ಲಸಿಕೆ (ಸಂಗ್ರಹ ಚಿತ್ರ)
Follow us
guruganesh bhat
|

Updated on:Apr 25, 2021 | 2:47 PM

ಮುಂಬೈ: ಮಹಾರಾಷ್ಟ್ರದಲ್ಲಿ ಎಲ್ಲ ಸಾರ್ವಜನಿಕರಿಗೂ ಉಚಿತವಾಗಿ ಕೊವಿಡ್ ಲಸಿಕೆ ನೀಡುವುದಾಗಿ ಮಹಾರಾಷ್ಟ್ರ ರಾಜ್ಯ ಸರ್ಕಾರದ  ಸಚಿವ ನವಾಬ್ ಮಲಿಕ್ ಘೋಷಿಸಿದ್ದಾರೆ. ಮೇ1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ ಒದಗಿಸುವುದಾಗಿ ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಘೋಷಿಸಿತ್ತು. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳ ಕಂಡುಬರುತ್ತಿರುವ ಬೆನ್ನಲ್ಲೇ ಲಸಿಕೆಗೆ ದರ ವಿಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಕಲಹಗಳೂ ನಡೆಯುತ್ತಿವೆ. ಈ ಹೊತ್ತಲ್ಲಿ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಈ ಮಹತ್ವದ ಘೋಷಣೆ ಮಾಡಿದ್ದಾರೆ.

ಲಸಿಕೆಗೆ ದರ ನಿಗದಿಪಡಿಸುವ ಕುರಿತು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಕೊವಿಶೀಲ್ಡ್​ ಲಸಿಕೆ ಮೇ 1 ರಿಂದ ದುಬಾರಿ ಆಗಲಿದೆ. ಈಗ ಕೊವಿಶೀಲ್ಡ್​ ಲಸಿಕೆ ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿದೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಇದನ್ನು ರೂ 250 ಕ್ಕೆ ನೀಡಲಾಗುತ್ತಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ನೀಡುವುದರಿಂದ ಲಸಿಕೆ ಉತ್ಪಾದಕರಿಂದ ನೇರವಾಗಿ ಕೊರೊನಾ ಲಸಿಕೆ ಖರೀದಿಸಲು ರಾಜ್ಯ ಸರ್ಕಾರಗಳಿಗೆ ಅನುವು ಮಾಡಿಕೊಡುವುದಾಗಿ ಕೇಂದ್ರ ಸರ್ಕಾರ ತಿಳಿಸಿತ್ತು.

ಸೀರಂ ಇನ್ಸ್​​ಟಿಟ್ಯೂಟ್​ ಆಫ್​ ಇಂಡಿಯಾ ಉತ್ಪಾದಿಸುವ ಕೋವಿಶೀಲ್ಡ್ ಲಸಿಕೆಯನ್ನು ಇನ್ನು ಮುಂದೆ, ಅಂದರೆ ಮೇ 1 ರಿಂದ, ಮೂರು ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಸೀರಂ ಇನ್ಸ್​​ಟಿಟ್ಯೂಟ್​ನ ಮುಖ್ಯಸ್ಥ ಅದಾರ್​ ಪೂನಾವಾಲಾ ಹೇಳಿದ್ದಾರೆ. ತಾನು ಉತ್ಪಾದಿಸುವ ಲಸಿಕೆಯಲ್ಲಿ 590 ಪ್ರತಿಶತ ಲಸಿಕೆಯನ್ನು ಕೇಂದ್ರ ಸರಕಾರಕ್ಕೆ ರೂ 150 ಕ್ಕೆ ನೀಡಲಾಗುವುದು. ಉಳಿದ 50 ಪ್ರತಿಶತ ಲಸಿಕೆಯಲ್ಲಿ ಅರ್ಧದಷ್ಟನ್ನು ರಾಜ್ಯ ಸರಕಾರಗಳಿಗೆ ತಲಾ ರೂ 400 ಕ್ಕೂ ಮತ್ತು ಖಾಸಗೀ ಆಸ್ಪತ್ರೆಗಳಿಗೆ ರೂ 600 ಕ್ಕೆ ಮಾರಾಟ ಮಾಡಲು ನಿರ್ಧರಿಸುವುದಾಗಿ ಅವರು ಇಂಗ್ಲಿಷ್​ ಟಿವಿ ಚಾನೆಲ್​ ಎನ್​ಡಿ ಟಿವಿಗೆ ಹೇಳಿದ್ದರು. ಜತೆಗೆ ವಿದೇಶಿ ಲಸಿಕೆಗಳಿಗಿಂತ ತಮ್ಮ ಕಂಪೆನಿಯ ಲಸಿಕೆ ಕಡಿಮೆ ದರದಲ್ಲಿ ಸಿಗುತ್ತಿದೆ ಎಂಬುದನ್ನು ಜನ ಗಮನಿಸಬೇಕು. ವಿದೇಶಿ ಲಸಿಕೆ ₹ 750 ರಿಂದ ರೂ 1,500 ವೆಚ್ಚವಾಗುತ್ತದೆ. ಅದಕ್ಕೆ ಹೊಲಿಸಿದರೆ, ಕೊವಿಶೀಲ್ಡ್​ ಕಡಿಮೆ ದರದಲ್ಲಿ ಸಿಗುತ್ತದೆ, ಎಂದು ಹೇಳಿದ್ದಾರೆ. ಸರ್ಕಾರದ ಹೊಸ ನೀತಿಯ ಭಾಗವಾಗಿ, ಶೇಕಡಾ 50 ರಷ್ಟು ಲಸಿಕೆ ಪ್ರಮಾಣವನ್ನು ಕೇಂದ್ರಕ್ಕೆ ಮೀಸಲಿಡಲಾಗುವುದು ಮತ್ತು ಉಳಿದವುಗಳನ್ನು ರಾಜ್ಯ ಮತ್ತು ಖಾಸಗಿ ಆಸ್ಪತ್ರೆಗಳ ನಡುವೆ ಹಂಚಲಾಗುತ್ತದೆ ಎಂದು ಅವರು ತಿಳಿಸಿದ್ದರು.

ಮಹಾರಾಷ್ಟ್ರದಲ್ಲಿ ಕೊವಿಡ್ ರೋಗಿಗಳು ಆಕ್ಸಿಜನ್ ಲಭಿಸದೆ ಸಂಕಷ್ಟಕ್ಕೀಡಾಗಿರುವ ಹೊತ್ತಲ್ಲಿ ಇದೇ ಮೊದಲ ಬಾರಿ ಆಕ್ಸಿಜನ್ ಎಕ್ಸ್​ಪ್ರೆಸ್ ಗುರುವಾರ ವಿಶಾಖಪಟ್ಟಣಂನಿಂದ ಮಹಾರಾಷ್ಟ್ರಕ್ಕೆ ಆಕ್ಸಿಜನ್ ಸಾಗಿಸಿದೆ.ಆಂಧ್ರ ಪ್ರದೇಶದ ರಾಷ್ಟ್ರೀಯ ಇಸ್ಪತ್ ನಿಗಮ್ ( ಆರ್‌ಐಎನ್‌ಎಲ್) ನಿಂದ ಗುರುವಾರ ಆಕ್ಸಿಜನ್ ಟ್ಯಾಂಕರ್ ಹೊತ್ತು ಈ ರೈಲು ಮಹಾರಾಷ್ಟ್ರಕ್ಕೆ ಹೊರಟಿತ್ತು. ಮಹಾರಾಷ್ಟ್ರದಿಂದ 7 ಖಾಲಿ ಟ್ಯಾಂಕರ್​ಗಳು ಇಂದು ಬೆಳಗ್ಗೆ ವಿಶಾಖಪಟ್ಟಣದ ರಾಷ್ಟ್ರೀಯ ಇಸ್ಪತ್ ನಿಗಮ್ ತಲುಪಿದೆ. ಬೆಳಗ್ಗಿನಿಂದ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (LMO) ಇದಕ್ಕೆ ತುಂಬಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಗುರುವಾರ ತಮ್ಮ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Maharashtra govt will vaccinate its all citizens free of cost says Maharashtra minister Nawab Malik

Published On - 2:29 pm, Sun, 25 April 21

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ