AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anil Deshmukh Resigns: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಸೂಚನೆ; ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ

ಬಾಂಬೆ ಹೈಕೋರ್ಟ್ ಅನಿಲ್ ದೇಶ್​ಮುಖ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್​ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್​ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Anil Deshmukh Resigns: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಸೂಚನೆ; ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ
ಅನಿಲ್ ದೇಶ್​ಮುಖ್
TV9 Web
| Edited By: |

Updated on:Apr 05, 2022 | 12:49 PM

Share

ಮುಂಬೈ: ಸದ್ಯ ಅಮಾನತು ಆಗಿರುವ, ಮುಂಬೈ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತೀ ತಿಂಗಳು ₹ 100 ಕೋಟಿ ಸಂಗ್ರಹಿಸುವಂತೆ ಒತ್ತಡ ಹಾಕಿದ್ದರು ಎಂಬ  ಪ್ರಕರಣಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್ ಅನಿಲ್ ದೇಶ್​ಮುಖ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್​ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್​ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಒತ್ತಡ ಆರೋಪಿಸಿ ಪತ್ರ ಬರೆದಿದ್ದ ಪರಮ್​ವೀರ್ ಸಿಂಗ್ ಪ್ರಕರಣವನ್ನು ಸಿಬಿಐ ಮೆಟ್ಟಿಲೇರಿದೆ. 15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಇನ್ನೂ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಎಫ್​ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿತ್ತು.

ಕೆಲ ದಿನಗಳ ಹಿಂದೆ ಮುಕೇಶ್ ಅಂಬಾನಿ ಮನೆ ಮುಂದೆ ಸ್ಪೋಟಕ ಹೊತ್ತಿದ್ದ ಕಾರು ಪತ್ತೆ ಪ್ರಕರಣ ರೋಚಕ ತಿರುವು ಪಡೆದಿತ್ತು. ಸಸ್ಪೆಂಡ್ ಆಗಿರುವ ಎಎಸ್ಐ​ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್, ಬಾರ್ ಮತ್ತು ರೆಸ್ಟೊರೆಂಟ್​​ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇಂದು ಪತ್ರ ಬರೆದಿದ್ದರು. ಈ ಗಂಭೀರ ಆರೋಪದಿಂದ ಮಹಾರಾಷ್ಟ್ರ ಶಿವಸೇನೆ-ಎನ್​ಸಿಪಿ ಮೈತ್ರಿಕೂಟದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: ಅನಿಲ್ ದೇಶ್​ಮುಖ್ ಅಪರಾಧ ತಿಳಿದೂ ಎಫ್​ಐಆರ್ ದಾಖಲಿಸಿಲ್ಲ ಏಕೆ?; ಪರಮ್​ವೀರ್ ಸಿಂಗ್​ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

Published On - 2:59 pm, Mon, 5 April 21

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!