AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anil Deshmukh Resigns: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಸೂಚನೆ; ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ

ಬಾಂಬೆ ಹೈಕೋರ್ಟ್ ಅನಿಲ್ ದೇಶ್​ಮುಖ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್​ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್​ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Anil Deshmukh Resigns: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಸೂಚನೆ; ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ
ಅನಿಲ್ ದೇಶ್​ಮುಖ್
TV9 Web
| Edited By: |

Updated on:Apr 05, 2022 | 12:49 PM

Share

ಮುಂಬೈ: ಸದ್ಯ ಅಮಾನತು ಆಗಿರುವ, ಮುಂಬೈ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತೀ ತಿಂಗಳು ₹ 100 ಕೋಟಿ ಸಂಗ್ರಹಿಸುವಂತೆ ಒತ್ತಡ ಹಾಕಿದ್ದರು ಎಂಬ  ಪ್ರಕರಣಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್ ಅನಿಲ್ ದೇಶ್​ಮುಖ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್​ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್​ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಒತ್ತಡ ಆರೋಪಿಸಿ ಪತ್ರ ಬರೆದಿದ್ದ ಪರಮ್​ವೀರ್ ಸಿಂಗ್ ಪ್ರಕರಣವನ್ನು ಸಿಬಿಐ ಮೆಟ್ಟಿಲೇರಿದೆ. 15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಇನ್ನೂ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಎಫ್​ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿತ್ತು.

ಕೆಲ ದಿನಗಳ ಹಿಂದೆ ಮುಕೇಶ್ ಅಂಬಾನಿ ಮನೆ ಮುಂದೆ ಸ್ಪೋಟಕ ಹೊತ್ತಿದ್ದ ಕಾರು ಪತ್ತೆ ಪ್ರಕರಣ ರೋಚಕ ತಿರುವು ಪಡೆದಿತ್ತು. ಸಸ್ಪೆಂಡ್ ಆಗಿರುವ ಎಎಸ್ಐ​ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್, ಬಾರ್ ಮತ್ತು ರೆಸ್ಟೊರೆಂಟ್​​ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇಂದು ಪತ್ರ ಬರೆದಿದ್ದರು. ಈ ಗಂಭೀರ ಆರೋಪದಿಂದ ಮಹಾರಾಷ್ಟ್ರ ಶಿವಸೇನೆ-ಎನ್​ಸಿಪಿ ಮೈತ್ರಿಕೂಟದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: ಅನಿಲ್ ದೇಶ್​ಮುಖ್ ಅಪರಾಧ ತಿಳಿದೂ ಎಫ್​ಐಆರ್ ದಾಖಲಿಸಿಲ್ಲ ಏಕೆ?; ಪರಮ್​ವೀರ್ ಸಿಂಗ್​ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

Published On - 2:59 pm, Mon, 5 April 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ