AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anil Deshmukh Resigns: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಸೂಚನೆ; ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ

ಬಾಂಬೆ ಹೈಕೋರ್ಟ್ ಅನಿಲ್ ದೇಶ್​ಮುಖ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್​ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್​ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Anil Deshmukh Resigns: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಸೂಚನೆ; ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ
ಅನಿಲ್ ದೇಶ್​ಮುಖ್
TV9 Web
| Edited By: |

Updated on:Apr 05, 2022 | 12:49 PM

Share

ಮುಂಬೈ: ಸದ್ಯ ಅಮಾನತು ಆಗಿರುವ, ಮುಂಬೈ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತೀ ತಿಂಗಳು ₹ 100 ಕೋಟಿ ಸಂಗ್ರಹಿಸುವಂತೆ ಒತ್ತಡ ಹಾಕಿದ್ದರು ಎಂಬ  ಪ್ರಕರಣಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್ ಅನಿಲ್ ದೇಶ್​ಮುಖ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್​ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್​ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಒತ್ತಡ ಆರೋಪಿಸಿ ಪತ್ರ ಬರೆದಿದ್ದ ಪರಮ್​ವೀರ್ ಸಿಂಗ್ ಪ್ರಕರಣವನ್ನು ಸಿಬಿಐ ಮೆಟ್ಟಿಲೇರಿದೆ. 15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಇನ್ನೂ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಎಫ್​ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿತ್ತು.

ಕೆಲ ದಿನಗಳ ಹಿಂದೆ ಮುಕೇಶ್ ಅಂಬಾನಿ ಮನೆ ಮುಂದೆ ಸ್ಪೋಟಕ ಹೊತ್ತಿದ್ದ ಕಾರು ಪತ್ತೆ ಪ್ರಕರಣ ರೋಚಕ ತಿರುವು ಪಡೆದಿತ್ತು. ಸಸ್ಪೆಂಡ್ ಆಗಿರುವ ಎಎಸ್ಐ​ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್, ಬಾರ್ ಮತ್ತು ರೆಸ್ಟೊರೆಂಟ್​​ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇಂದು ಪತ್ರ ಬರೆದಿದ್ದರು. ಈ ಗಂಭೀರ ಆರೋಪದಿಂದ ಮಹಾರಾಷ್ಟ್ರ ಶಿವಸೇನೆ-ಎನ್​ಸಿಪಿ ಮೈತ್ರಿಕೂಟದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: ಅನಿಲ್ ದೇಶ್​ಮುಖ್ ಅಪರಾಧ ತಿಳಿದೂ ಎಫ್​ಐಆರ್ ದಾಖಲಿಸಿಲ್ಲ ಏಕೆ?; ಪರಮ್​ವೀರ್ ಸಿಂಗ್​ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

Published On - 2:59 pm, Mon, 5 April 21

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು