AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವೆಂಬರ್ 15ರವರೆಗೆ ಇಡಿ ಕಸ್ಟಡಿಗೆ ಅನಿಲ್ ದೇಶ್‌ಮುಖ್

Anil Deshmukh ದೇಶ್‌ಮುಖ್ ಅವರು ಇಡಿ ಮಾಡಿರುವ ಆರೋಪಗಳನ್ನು ನಿರಾಕರಿಸಿದ್ದು, ನನ್ನನ್ನು ಸುಳ್ಳು ಆರೋಪಗಳಿಗೆ ಗುರಿಯಾಗಿರಿಸಲಾಗಿದೆ ಎಂದು ಹೇಳಿದ್ದಾರೆ. ತನಿಖಾ ಸಂಸ್ಥೆಯು ಪ್ರಕರಣದ ನಿಭಾಯಿಸುವ ರೀತಿ "ಪಾರದರ್ಶಕವಲ್ಲ" ಮತ್ತು "ಅನ್ಯಾಯದ್ದು" ಎಂದು ಅವರು ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವೆಂಬರ್ 15ರವರೆಗೆ ಇಡಿ ಕಸ್ಟಡಿಗೆ ಅನಿಲ್ ದೇಶ್‌ಮುಖ್
ಅನಿಲ್​ ದೇಶ್​ಮುಖ್​
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 12, 2021 | 3:08 PM

Share

ಮುಂಬೈ: ಪಿಎಂಎಲ್‌ಎ (PMLA )ನ್ಯಾಯಾಲಯವು ಶುಕ್ರವಾರ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ (Anil Deshmukh) ಅವರನ್ನು ನವೆಂಬರ್ 15 ರವರೆಗೆ ಇಡಿ ಕಸ್ಟಡಿಗೆ (ED custody) ಕಳುಹಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ನವೆಂಬರ್ 1 ರಂದು ಬಂಧಿಸಲಾಯಿತು. ದೇಶ್‌ಮುಖ್ ಅವರು ರಾಜ್ಯ ಗೃಹ ಸಚಿವರಾಗಿದ್ದಾಗ ಡಿಸೆಂಬರ್ 2020 ಮತ್ತು ಫೆಬ್ರವರಿ 2021 ರ ನಡುವೆ ಈಗ ವಜಾಗೊಂಡಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜ್ ಮೂಲಕ “ವಿವಿಧ ಆರ್ಕೆಸ್ಟ್ರಾ ಬಾರ್ ಮಾಲೀಕರಿಂದ ಸುಮಾರು 4.7 ಕೋಟಿ ರೂಪಾಯಿಗಳ ಲಂಚ ಪಡೆದಿದ್ದಾರೆ” ಎಂದು ಇಡಿ ಹೇಳಿಕೊಂಡಿದೆ. ಇಡಿ ಪ್ರಕಾರ ದೇಶಮುಖ್ ಅವರ ಕುಟುಂಬವು “4.18 ಕೋಟಿ ರೂಪಾಯಿಗಳ ಅಕ್ರಮ ಹಣ ವ್ಯವಹಾರಗಳನ್ನು ಮಾಡಿದೆ ಮತ್ತು ಟ್ರಸ್ಟ್ ಸ್ವೀಕರಿಸಿದ ಅದೇ ಮೊತ್ತವನ್ನು ಅಂದರೆ ಶ್ರೀ ಸಾಯಿ ಶಿಕ್ಷಣ ಸಂಸ್ಥೆ” ಎಂದು ತೋರಿಸುವುದರ ಮೂಲಕ ಅದನ್ನು ಕಳಂಕರಹಿತ ಎಂದು ತೋರಿಸಿದೆ.

ದೇಶ್‌ಮುಖ್ ಅವರು ಇಡಿ ಮಾಡಿರುವ ಆರೋಪಗಳನ್ನು ನಿರಾಕರಿಸಿದ್ದು, ನನ್ನನ್ನು ಸುಳ್ಳು ಆರೋಪಗಳಿಗೆ ಗುರಿಯಾಗಿರಿಸಲಾಗಿದೆ ಎಂದು ಹೇಳಿದ್ದಾರೆ. ತನಿಖಾ ಸಂಸ್ಥೆಯು ಪ್ರಕರಣದ ನಿಭಾಯಿಸುವ ರೀತಿ “ಪಾರದರ್ಶಕವಲ್ಲ” ಮತ್ತು “ಅನ್ಯಾಯದ್ದು” ಎಂದು ಅವರು ಹೇಳಿದ್ದಾರೆ. ನಿನ್ನೆ ಬಿಡುಗಡೆ ಮಾಡಿದ ತಮ್ಮ ಇತ್ತೀಚಿನ ಹೇಳಿಕೆಯಲ್ಲಿ, ದೇಶಮುಖ್ ನಾನು ಯಾವಾಗಲೂ ನೆಲದ ಕಾನೂನನ್ನು ಅನುಸರಿಸುತ್ತೇನೆ, ಆದರೆ ನನ್ನ ವಿರುದ್ಧ ಪಟ್ಟಭದ್ರ ಹಿತಾಸಕ್ತಿಯಿಂದ ಸುಳ್ಳು ನಿರೂಪಣೆಯನ್ನು ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ.

ಅನಿಲ್​ ದೇಶ್​​ಮುಖ್​ ವಿರುದ್ಧ ಮಾಜಿ ಪೊಲೀಸ್​ ಅಧಿಕಾರಿ ಪರಮ್​ ಬೀರ್​ ಸಿಂಗ್​ ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದಾರೆ. ಈ ಹಿಂದಿನ ಪೊಲೀಸ್ ಅಧಿಕಾರಿ ಸಚಿನ್​ ವಾಜ್​​ರನ್ನು ಬಳಸಿಕೊಂಡು  ಬಾರ್​ ಆ್ಯಂಡ್​ ರೆಸ್ಟೋರೆಂಟ್​, ಹೋಟೆಲ್​ಗಳ  ಮೂಲಕ 100 ಕೋಟಿ ರೂಪಾಯಿ ವಸೂಲಿ ಮಾಡುತ್ತಿದ್ದರು ಎಂದು ಪರಮ್​ ಬೀರ್​ ಸಿಂಗ್​​ ಪತ್ರ ಬರೆದು ಉದ್ಧವ್​ ಠಾಕ್ರೆಗೆ ತಿಳಿಸಿದ್ದರು. ಅದಾದ ಮೇಲೆ ಅನಿಲ್​ ದೇಶ್​ಮುಖ್​ ಮೇಲಿನ ಆರೋಪಗಳೆಲ್ಲ ಮುನ್ನೆಲೆಗೆ ಬಂದು, ಇ.ಡಿ. ಮತ್ತು ಸಿಬಿಐ ಎರಡೂ ತನಿಖಾ ದಳಗಳೂ ಪ್ರಕರಣ ದಾಖಲು ಮಾಡಿವೆ. ಅನಿಲ್​ ದೇಶ್​ಮುಖ್​ ವಿರುದ್ಧ ಮಾಡಲಾದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ನಡೆಸಲಾದ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸುವಂತೆ ಮಾರ್ಚ್​ನಲ್ಲಿಯೇ ಬಾಂಬೆ ಹೈಕೋರ್ಟ್ ಸಿಬಿಐಗೆ ಸೂಚಿಸಿತ್ತು.  ಇನ್ನು ಇ.ಡಿ. ವಿಚಾರಣೆಗೆ ಅವರು ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಅನಿಲ್​ ದೇಶ್​ಮುಖ್​ ನ.12ರವರೆಗೆ ಇ.ಡಿ.ಕಸ್ಟಡಿಗೆ; ಮಾಜಿ ಸಚಿವನಿಗೆ ಶುರುವಾಗಲಿದೆ ಸಿಬಿಐ ಸಂಕಷ್ಟ !

Published On - 3:03 pm, Fri, 12 November 21

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್