AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವೆಂಬರ್ 15ರವರೆಗೆ ಇಡಿ ಕಸ್ಟಡಿಗೆ ಅನಿಲ್ ದೇಶ್‌ಮುಖ್

Anil Deshmukh ದೇಶ್‌ಮುಖ್ ಅವರು ಇಡಿ ಮಾಡಿರುವ ಆರೋಪಗಳನ್ನು ನಿರಾಕರಿಸಿದ್ದು, ನನ್ನನ್ನು ಸುಳ್ಳು ಆರೋಪಗಳಿಗೆ ಗುರಿಯಾಗಿರಿಸಲಾಗಿದೆ ಎಂದು ಹೇಳಿದ್ದಾರೆ. ತನಿಖಾ ಸಂಸ್ಥೆಯು ಪ್ರಕರಣದ ನಿಭಾಯಿಸುವ ರೀತಿ "ಪಾರದರ್ಶಕವಲ್ಲ" ಮತ್ತು "ಅನ್ಯಾಯದ್ದು" ಎಂದು ಅವರು ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವೆಂಬರ್ 15ರವರೆಗೆ ಇಡಿ ಕಸ್ಟಡಿಗೆ ಅನಿಲ್ ದೇಶ್‌ಮುಖ್
ಅನಿಲ್​ ದೇಶ್​ಮುಖ್​
TV9 Web
| Edited By: |

Updated on:Nov 12, 2021 | 3:08 PM

Share

ಮುಂಬೈ: ಪಿಎಂಎಲ್‌ಎ (PMLA )ನ್ಯಾಯಾಲಯವು ಶುಕ್ರವಾರ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ (Anil Deshmukh) ಅವರನ್ನು ನವೆಂಬರ್ 15 ರವರೆಗೆ ಇಡಿ ಕಸ್ಟಡಿಗೆ (ED custody) ಕಳುಹಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್ ಅವರನ್ನು ನವೆಂಬರ್ 1 ರಂದು ಬಂಧಿಸಲಾಯಿತು. ದೇಶ್‌ಮುಖ್ ಅವರು ರಾಜ್ಯ ಗೃಹ ಸಚಿವರಾಗಿದ್ದಾಗ ಡಿಸೆಂಬರ್ 2020 ಮತ್ತು ಫೆಬ್ರವರಿ 2021 ರ ನಡುವೆ ಈಗ ವಜಾಗೊಂಡಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜ್ ಮೂಲಕ “ವಿವಿಧ ಆರ್ಕೆಸ್ಟ್ರಾ ಬಾರ್ ಮಾಲೀಕರಿಂದ ಸುಮಾರು 4.7 ಕೋಟಿ ರೂಪಾಯಿಗಳ ಲಂಚ ಪಡೆದಿದ್ದಾರೆ” ಎಂದು ಇಡಿ ಹೇಳಿಕೊಂಡಿದೆ. ಇಡಿ ಪ್ರಕಾರ ದೇಶಮುಖ್ ಅವರ ಕುಟುಂಬವು “4.18 ಕೋಟಿ ರೂಪಾಯಿಗಳ ಅಕ್ರಮ ಹಣ ವ್ಯವಹಾರಗಳನ್ನು ಮಾಡಿದೆ ಮತ್ತು ಟ್ರಸ್ಟ್ ಸ್ವೀಕರಿಸಿದ ಅದೇ ಮೊತ್ತವನ್ನು ಅಂದರೆ ಶ್ರೀ ಸಾಯಿ ಶಿಕ್ಷಣ ಸಂಸ್ಥೆ” ಎಂದು ತೋರಿಸುವುದರ ಮೂಲಕ ಅದನ್ನು ಕಳಂಕರಹಿತ ಎಂದು ತೋರಿಸಿದೆ.

ದೇಶ್‌ಮುಖ್ ಅವರು ಇಡಿ ಮಾಡಿರುವ ಆರೋಪಗಳನ್ನು ನಿರಾಕರಿಸಿದ್ದು, ನನ್ನನ್ನು ಸುಳ್ಳು ಆರೋಪಗಳಿಗೆ ಗುರಿಯಾಗಿರಿಸಲಾಗಿದೆ ಎಂದು ಹೇಳಿದ್ದಾರೆ. ತನಿಖಾ ಸಂಸ್ಥೆಯು ಪ್ರಕರಣದ ನಿಭಾಯಿಸುವ ರೀತಿ “ಪಾರದರ್ಶಕವಲ್ಲ” ಮತ್ತು “ಅನ್ಯಾಯದ್ದು” ಎಂದು ಅವರು ಹೇಳಿದ್ದಾರೆ. ನಿನ್ನೆ ಬಿಡುಗಡೆ ಮಾಡಿದ ತಮ್ಮ ಇತ್ತೀಚಿನ ಹೇಳಿಕೆಯಲ್ಲಿ, ದೇಶಮುಖ್ ನಾನು ಯಾವಾಗಲೂ ನೆಲದ ಕಾನೂನನ್ನು ಅನುಸರಿಸುತ್ತೇನೆ, ಆದರೆ ನನ್ನ ವಿರುದ್ಧ ಪಟ್ಟಭದ್ರ ಹಿತಾಸಕ್ತಿಯಿಂದ ಸುಳ್ಳು ನಿರೂಪಣೆಯನ್ನು ಸೃಷ್ಟಿಸಲಾಗಿದೆ ಎಂದು ಹೇಳಿದ್ದಾರೆ.

ಅನಿಲ್​ ದೇಶ್​​ಮುಖ್​ ವಿರುದ್ಧ ಮಾಜಿ ಪೊಲೀಸ್​ ಅಧಿಕಾರಿ ಪರಮ್​ ಬೀರ್​ ಸಿಂಗ್​ ಭ್ರಷ್ಟಾಚಾರ ಮತ್ತು ಸುಲಿಗೆ ಆರೋಪ ಮಾಡಿದ್ದಾರೆ. ಈ ಹಿಂದಿನ ಪೊಲೀಸ್ ಅಧಿಕಾರಿ ಸಚಿನ್​ ವಾಜ್​​ರನ್ನು ಬಳಸಿಕೊಂಡು  ಬಾರ್​ ಆ್ಯಂಡ್​ ರೆಸ್ಟೋರೆಂಟ್​, ಹೋಟೆಲ್​ಗಳ  ಮೂಲಕ 100 ಕೋಟಿ ರೂಪಾಯಿ ವಸೂಲಿ ಮಾಡುತ್ತಿದ್ದರು ಎಂದು ಪರಮ್​ ಬೀರ್​ ಸಿಂಗ್​​ ಪತ್ರ ಬರೆದು ಉದ್ಧವ್​ ಠಾಕ್ರೆಗೆ ತಿಳಿಸಿದ್ದರು. ಅದಾದ ಮೇಲೆ ಅನಿಲ್​ ದೇಶ್​ಮುಖ್​ ಮೇಲಿನ ಆರೋಪಗಳೆಲ್ಲ ಮುನ್ನೆಲೆಗೆ ಬಂದು, ಇ.ಡಿ. ಮತ್ತು ಸಿಬಿಐ ಎರಡೂ ತನಿಖಾ ದಳಗಳೂ ಪ್ರಕರಣ ದಾಖಲು ಮಾಡಿವೆ. ಅನಿಲ್​ ದೇಶ್​ಮುಖ್​ ವಿರುದ್ಧ ಮಾಡಲಾದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ನಡೆಸಲಾದ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸುವಂತೆ ಮಾರ್ಚ್​ನಲ್ಲಿಯೇ ಬಾಂಬೆ ಹೈಕೋರ್ಟ್ ಸಿಬಿಐಗೆ ಸೂಚಿಸಿತ್ತು.  ಇನ್ನು ಇ.ಡಿ. ವಿಚಾರಣೆಗೆ ಅವರು ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಅನಿಲ್​ ದೇಶ್​ಮುಖ್​ ನ.12ರವರೆಗೆ ಇ.ಡಿ.ಕಸ್ಟಡಿಗೆ; ಮಾಜಿ ಸಚಿವನಿಗೆ ಶುರುವಾಗಲಿದೆ ಸಿಬಿಐ ಸಂಕಷ್ಟ !

Published On - 3:03 pm, Fri, 12 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ