ಪತಿ ಜತೆ ಜಗಳವಾಡಿ ತವರು ಮನೆಗೆ ಹೋದ ಮಹಿಳೆ, ಅವಳಿ ಮಕ್ಕಳ ಕತ್ತು ಸೀಳಿ ಕೊಲೆಗೈದ ತಂದೆ

ಗಂಡ-ಹೆಂಡತಿ ಜಗಳ ಇಬ್ಬರು ಮುದ್ದು ಮಕ್ಕಳ ಸಾವಿಗೆ ಕಾರಣವಾಯ್ತು. ಪತ್ನಿ ಗಂಡನ ಜತೆ ಜಗಳವಾಡಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಅವಳಿ ಮಕ್ಕಳ ಕತ್ತು ಸೀಳಿ ಹತ್ಯೆ(Murder) ಮಾಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಬುಲ್ದಾನಾದಲ್ಲಿ ನಡೆದಿದೆ. ಅವಳಿ ಹೆಣ್ಣುಮಕ್ಕಳನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಹತ್ಯೆ ಮಾಡಿದ್ದಾನೆ.

ಪತಿ ಜತೆ ಜಗಳವಾಡಿ ತವರು ಮನೆಗೆ ಹೋದ ಮಹಿಳೆ, ಅವಳಿ ಮಕ್ಕಳ ಕತ್ತು ಸೀಳಿ ಕೊಲೆಗೈದ ತಂದೆ
ಅವಳಿ ಮಕ್ಕಳು
Image Credit source: NDTV

Updated on: Oct 26, 2025 | 8:50 AM

ಬುಲ್ದಾನಾ, ಅಕ್ಟೋಬರ್ 26: ಗಂಡ-ಹೆಂಡತಿ ಜಗಳ ಇಬ್ಬರು ಮುದ್ದು ಮಕ್ಕಳ ಸಾವಿಗೆ ಕಾರಣವಾಯ್ತು. ಪತ್ನಿ ಗಂಡನ ಜತೆ ಜಗಳವಾಡಿ ತವರು ಮನೆಗೆ ಹೋಗಿದ್ದಕ್ಕೆ ಕೋಪಗೊಂಡ ಪತಿ ತನ್ನ ಅವಳಿ ಮಕ್ಕಳ ಕತ್ತು ಸೀಳಿ ಹತ್ಯೆ(Murder) ಮಾಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಬುಲ್ದಾನಾದಲ್ಲಿ ನಡೆದಿದೆ. ಅವಳಿ ಹೆಣ್ಣುಮಕ್ಕಳನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಹತ್ಯೆ ಮಾಡಿದ್ದಾನೆ.

ನಂತರ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ತಾನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ವಾಶಿಮ್ ಜಿಲ್ಲೆಯ ನಿವಾಸಿ ರಾಹುಲ್ ಚವಾಣ್ ಎಂದು ಗುರುತಿಸಲಾಗಿದೆ. ಚವಾಣ್ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದಾಗ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿತ್ತು.

ಜಗಳದ ಸಮಯದಲ್ಲಿ, ಪತ್ನಿ ತನ್ನ ಹೆತ್ತವರ ಮನೆಗೆ ಹೋಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ, ಆದರೆ ಚವಾಣ್ ತನ್ನ ಹೆಣ್ಣುಮಕ್ಕಳೊಂದಿಗೆ ಪ್ರಯಾಣ ಮುಂದುವರೆಸಿದ್ದ. ಕೋಪದ ಭರದಲ್ಲಿ, ಚವಾಣ್ ಅವಳಿ ಮಕ್ಕಳನ್ನು ಬುಲ್ಧಾನಾ ಜಿಲ್ಲೆಯ ಅಂಚಾರ್ವಾಡಿಯಲ್ಲಿರುವ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಅಲ್ಲಿ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಘೋರ ಕೃತ್ಯ: ಮಲತಂದೆಯಿಂದಲೇ 7 ವರ್ಷದ ಮಗಳ ಹತ್ಯೆ

ಘಟನೆಯ ನಂತರ, ಚವಾಣ್ ನೇರವಾಗಿ ವಾಶಿಮ್ ಪೊಲೀಸ್ ಠಾಣೆಗೆ ಕಾರಿನಲ್ಲಿ ಹೋಗಿದ್ದಾನೆ. ಅಲ್ಲಿ ತನ್ನ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ತಪ್ಪೊಪ್ಪಿಗೆಯ ನಂತರ, ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಮಕ್ಕಳ ಶವಗಳನ್ನು ವಶಪಡಿಸಿಕೊಂಡರು. ಶವಗಳು ಭಾಗಶಃ ಸುಟ್ಟುಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಲೆ ನಂತರ ಚವಾಣ್ ಬೆಂಕಿ ಹಚ್ಚುವ ಮೂಲಕ ಸಾಕ್ಷ್ಯಗಳನ್ನು ನಾಶಮಾಡಲು ಪ್ರಯತ್ನಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮಕ್ಕಳ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಪೊಲೀಸರು ಸ್ಥಳದಲ್ಲೇ ಪರಿಶೀಲನೆ ಮತ್ತು ದಾಖಲೆಗಳನ್ನು ನಡೆಸಿ, ಪ್ರದೇಶದಿಂದ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ