Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಫೆಸಿಲಿಟಿ ಟೆಂಡರ್ ರದ್ದು, ಏಕನಾಥ್ ಶಿಂದೆ ಸರ್ಕಾರದಿಂದ ಮಹತ್ವದ ನಿರ್ಧಾರ

ಮುಂಬೈನಲ್ಲಿ ಗುತ್ತಿಗೆ ಆಧಾರದ ಮೇಲೆ 3,000 ಪೊಲೀಸರನ್ನು ನೇಮಿಸಿಕೊಳ್ಳಲು ಮಹಾರಾಷ್ಟ್ರದ ಏಕನಾಥ್ ಶಿಂದೆ(Eknath Shinde) ಸರ್ಕಾರ ಘೋಷಿಸಿದ ನಂತರ, ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡಲು ನಿರಂತರವಾಗಿ ಪ್ರಯತ್ನ ನಡೆಸುತ್ತಿವೆ. ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ಇದೀಗ ಏಕನಾಥ್ ಶಿಂದೆ ಸರ್ಕಾರ ಕೂಡ ಮಹತ್ವದ ನಿರ್ಧಾರ ಕೈಗೊಂಡಿದೆ. ಉದ್ಧವ್ ಠಾಕ್ರೆ(Uddhav Thackeray) ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಫೆಸಿಲಿಟಿ ಟೆಂಡರ್​ ಅನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ. ಹಿಂದಿನ ಸರ್ಕಾರಗಳಲ್ಲಿ ಗುತ್ತಿಗೆ ನೌಕರರ ನೇಮಕಾತಿ ಬಗ್ಗೆ ತನಿಖೆ ನಡೆಸುವುದಾಗಿಯೂ ಘೋಷಿಸಿದೆ.

ಮಹಾರಾಷ್ಟ್ರ: ಫೆಸಿಲಿಟಿ ಟೆಂಡರ್ ರದ್ದು, ಏಕನಾಥ್ ಶಿಂದೆ ಸರ್ಕಾರದಿಂದ ಮಹತ್ವದ ನಿರ್ಧಾರ
ಏಕನಾಥ್ ಶಿಂದೆ- ದೇವೇಂದ್ರ ಫಡ್ನವಿಸ್
Follow us
ನಯನಾ ರಾಜೀವ್
|

Updated on: Oct 20, 2023 | 7:00 PM

ಮುಂಬೈನಲ್ಲಿ ಗುತ್ತಿಗೆ ಆಧಾರದ ಮೇಲೆ 3,000 ಪೊಲೀಸರನ್ನು ನೇಮಿಸಿಕೊಳ್ಳಲು ಮಹಾರಾಷ್ಟ್ರದ ಏಕನಾಥ್ ಶಿಂದೆ(Eknath Shinde) ಸರ್ಕಾರ ಘೋಷಿಸಿದ ನಂತರ, ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡಲು ನಿರಂತರವಾಗಿ ಪ್ರಯತ್ನ ನಡೆಸುತ್ತಿವೆ. ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ಇದೀಗ ಏಕನಾಥ್ ಶಿಂದೆ ಸರ್ಕಾರ ಕೂಡ ಮಹತ್ವದ ನಿರ್ಧಾರ ಕೈಗೊಂಡಿದೆ. ಉದ್ಧವ್ ಠಾಕ್ರೆ(Uddhav Thackeray) ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಫೆಸಿಲಿಟಿ ಟೆಂಡರ್​ ಅನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ. ಹಿಂದಿನ ಸರ್ಕಾರಗಳಲ್ಲಿ ಗುತ್ತಿಗೆ ನೌಕರರ ನೇಮಕಾತಿ ಬಗ್ಗೆ ತನಿಖೆ ನಡೆಸುವುದಾಗಿಯೂ ಘೋಷಿಸಿದೆ.

ಹಿಂದಿನ ಕಾಂಗ್ರೆಸ್ ಸರ್ಕಾರ ಗುತ್ತಿಗೆ ನೌಕರರ ನೇಮಕಾತಿ ಆರಂಭಿಸಿತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಕಾಂಗ್ರೆಸ್ ಸರ್ಕಾರವು 2003 ರಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ನೌಕರರ ನೇಮಕಾತಿಯನ್ನು ಪ್ರಾರಂಭಿಸಿತ್ತು, ಆದರೆ ಈಗ ನಾವು ನೇಮಕಾತಿ ಮಾಡುವಾಗ ಅವರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ನೇಮಕಾತಿ ವಿಚಾರದಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ಬಯಲಿಗೆಳೆಯಲಾಗುವುದು ಎಂದರು. ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದ ಫಡ್ನವೀಸ್, ಗುತ್ತಿಗೆ ನೌಕರರ ನೇಮಕಾತಿ ವಿಚಾರದಲ್ಲಿ ಮಹಾರಾಷ್ಟ್ರದ ಹಿಂದಿನ ಸರ್ಕಾರಗಳು ಏನೇನು ಆಟ, ಹಗರಣಗಳನ್ನು ಆಡಿದ್ದವು, ಈಗ ಎಲ್ಲವನ್ನೂ ಬಯಲು ಮಾಡಲಾಗುವುದು ಎಂದು ಹೇಳಿದರು.

ಟೆಂಡರ್ ದರಗಳು ಸುಮಾರು 25 ಪ್ರತಿಶತದಷ್ಟು ಹೆಚ್ಚಿವೆ ಸೌಲಭ್ಯ ನಿರ್ವಹಣೆಯ ಹೆಸರಿನಲ್ಲಿ ಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಂಡ ಉದ್ಧವ್ ಠಾಕ್ರೆ ಸರ್ಕಾರದ ಟೆಂಡರ್ ದರಗಳು ಸುಮಾರು 25 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು. ಈ ಹಿಂದೆಯೂ ಚರ್ಚಿಸಲಾಗಿತ್ತು.

ಮತ್ತಷ್ಟು ಓದಿ: ಉದ್ಧವ್ ಠಾಕ್ರೆ ಓವೈಸಿ ಜತೆ ಕೈಜೋಡಿಸಿದರೆ ಆಶ್ಚರ್ಯವೇನಿಲ್ಲ: ಏಕನಾಥ್ ಶಿಂದೆ

ಹಿಂದಿನ ಸರ್ಕಾರಗಳ ತಪ್ಪುಗಳ ಭಾರವನ್ನು ಹೊರಲು ಸಾಧ್ಯವಿಲ್ಲ ಮಹಾರಾಷ್ಟ್ರದ ಹಿಂದಿನ ಸರ್ಕಾರಗಳ ತಪ್ಪುಗಳ ಭಾರವನ್ನು ಈಗಿನ ಸರ್ಕಾರವು ಸಹಿಸುವುದಿಲ್ಲ ಎಂದು ಫಡ್ನವಿಸ್ ಹೇಳಿದರು. ಆದ್ದರಿಂದ, ನಾವು ಸ್ಪಷ್ಟ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ ಮತ್ತು ಪ್ರತಿಪಕ್ಷಗಳು ನಿರಂತರವಾಗಿ ಮಾಡುತ್ತಿರುವ ಆರೋಪಗಳನ್ನು ತಳ್ಳಿಹಾಕುತ್ತೇವೆ ಎಂದರು.

ನೌಕರರ ನೇಮಕಾತಿಯಲ್ಲಿ ಹಗರಣ ನಡೆದಿದ್ದರೆ ತನಿಖೆ ನಡೆಸುತ್ತೇವೆ ಮಹಾರಾಷ್ಟ್ರದ ಹಿಂದಿನ ಸರ್ಕಾರಗಳು ಗುತ್ತಿಗೆ ನೌಕರರ ನೇಮಕಾತಿ ವಿಚಾರದಲ್ಲಿ ಯಾವುದೇ ರೀತಿಯ ಹಗರಣ ನಡೆಸಿದ್ದರೆ ಆ ಬಗ್ಗೆಯೂ ತನಿಖೆ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. . ನಾವು ಪ್ರತಿ ಅಪರಾಧದ ಮುಖವಾಡವನ್ನು ತೆಗೆದುಹಾಕುತ್ತೇವೆ ಮತ್ತು ಅದನ್ನು ಬಹಿರಂಗಪಡಿಸುತ್ತೇವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ