AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಫೆಸಿಲಿಟಿ ಟೆಂಡರ್ ರದ್ದು, ಏಕನಾಥ್ ಶಿಂದೆ ಸರ್ಕಾರದಿಂದ ಮಹತ್ವದ ನಿರ್ಧಾರ

ಮುಂಬೈನಲ್ಲಿ ಗುತ್ತಿಗೆ ಆಧಾರದ ಮೇಲೆ 3,000 ಪೊಲೀಸರನ್ನು ನೇಮಿಸಿಕೊಳ್ಳಲು ಮಹಾರಾಷ್ಟ್ರದ ಏಕನಾಥ್ ಶಿಂದೆ(Eknath Shinde) ಸರ್ಕಾರ ಘೋಷಿಸಿದ ನಂತರ, ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡಲು ನಿರಂತರವಾಗಿ ಪ್ರಯತ್ನ ನಡೆಸುತ್ತಿವೆ. ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ಇದೀಗ ಏಕನಾಥ್ ಶಿಂದೆ ಸರ್ಕಾರ ಕೂಡ ಮಹತ್ವದ ನಿರ್ಧಾರ ಕೈಗೊಂಡಿದೆ. ಉದ್ಧವ್ ಠಾಕ್ರೆ(Uddhav Thackeray) ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಫೆಸಿಲಿಟಿ ಟೆಂಡರ್​ ಅನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ. ಹಿಂದಿನ ಸರ್ಕಾರಗಳಲ್ಲಿ ಗುತ್ತಿಗೆ ನೌಕರರ ನೇಮಕಾತಿ ಬಗ್ಗೆ ತನಿಖೆ ನಡೆಸುವುದಾಗಿಯೂ ಘೋಷಿಸಿದೆ.

ಮಹಾರಾಷ್ಟ್ರ: ಫೆಸಿಲಿಟಿ ಟೆಂಡರ್ ರದ್ದು, ಏಕನಾಥ್ ಶಿಂದೆ ಸರ್ಕಾರದಿಂದ ಮಹತ್ವದ ನಿರ್ಧಾರ
ಏಕನಾಥ್ ಶಿಂದೆ- ದೇವೇಂದ್ರ ಫಡ್ನವಿಸ್
ನಯನಾ ರಾಜೀವ್
|

Updated on: Oct 20, 2023 | 7:00 PM

Share

ಮುಂಬೈನಲ್ಲಿ ಗುತ್ತಿಗೆ ಆಧಾರದ ಮೇಲೆ 3,000 ಪೊಲೀಸರನ್ನು ನೇಮಿಸಿಕೊಳ್ಳಲು ಮಹಾರಾಷ್ಟ್ರದ ಏಕನಾಥ್ ಶಿಂದೆ(Eknath Shinde) ಸರ್ಕಾರ ಘೋಷಿಸಿದ ನಂತರ, ಪ್ರತಿಪಕ್ಷಗಳು ಸರ್ಕಾರವನ್ನು ಮೂಲೆಗುಂಪು ಮಾಡಲು ನಿರಂತರವಾಗಿ ಪ್ರಯತ್ನ ನಡೆಸುತ್ತಿವೆ. ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ಇದೀಗ ಏಕನಾಥ್ ಶಿಂದೆ ಸರ್ಕಾರ ಕೂಡ ಮಹತ್ವದ ನಿರ್ಧಾರ ಕೈಗೊಂಡಿದೆ. ಉದ್ಧವ್ ಠಾಕ್ರೆ(Uddhav Thackeray) ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಫೆಸಿಲಿಟಿ ಟೆಂಡರ್​ ಅನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ. ಹಿಂದಿನ ಸರ್ಕಾರಗಳಲ್ಲಿ ಗುತ್ತಿಗೆ ನೌಕರರ ನೇಮಕಾತಿ ಬಗ್ಗೆ ತನಿಖೆ ನಡೆಸುವುದಾಗಿಯೂ ಘೋಷಿಸಿದೆ.

ಹಿಂದಿನ ಕಾಂಗ್ರೆಸ್ ಸರ್ಕಾರ ಗುತ್ತಿಗೆ ನೌಕರರ ನೇಮಕಾತಿ ಆರಂಭಿಸಿತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಕಾಂಗ್ರೆಸ್ ಸರ್ಕಾರವು 2003 ರಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ನೌಕರರ ನೇಮಕಾತಿಯನ್ನು ಪ್ರಾರಂಭಿಸಿತ್ತು, ಆದರೆ ಈಗ ನಾವು ನೇಮಕಾತಿ ಮಾಡುವಾಗ ಅವರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ನೇಮಕಾತಿ ವಿಚಾರದಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ಬಯಲಿಗೆಳೆಯಲಾಗುವುದು ಎಂದರು. ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದ ಫಡ್ನವೀಸ್, ಗುತ್ತಿಗೆ ನೌಕರರ ನೇಮಕಾತಿ ವಿಚಾರದಲ್ಲಿ ಮಹಾರಾಷ್ಟ್ರದ ಹಿಂದಿನ ಸರ್ಕಾರಗಳು ಏನೇನು ಆಟ, ಹಗರಣಗಳನ್ನು ಆಡಿದ್ದವು, ಈಗ ಎಲ್ಲವನ್ನೂ ಬಯಲು ಮಾಡಲಾಗುವುದು ಎಂದು ಹೇಳಿದರು.

ಟೆಂಡರ್ ದರಗಳು ಸುಮಾರು 25 ಪ್ರತಿಶತದಷ್ಟು ಹೆಚ್ಚಿವೆ ಸೌಲಭ್ಯ ನಿರ್ವಹಣೆಯ ಹೆಸರಿನಲ್ಲಿ ಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಂಡ ಉದ್ಧವ್ ಠಾಕ್ರೆ ಸರ್ಕಾರದ ಟೆಂಡರ್ ದರಗಳು ಸುಮಾರು 25 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು. ಈ ಹಿಂದೆಯೂ ಚರ್ಚಿಸಲಾಗಿತ್ತು.

ಮತ್ತಷ್ಟು ಓದಿ: ಉದ್ಧವ್ ಠಾಕ್ರೆ ಓವೈಸಿ ಜತೆ ಕೈಜೋಡಿಸಿದರೆ ಆಶ್ಚರ್ಯವೇನಿಲ್ಲ: ಏಕನಾಥ್ ಶಿಂದೆ

ಹಿಂದಿನ ಸರ್ಕಾರಗಳ ತಪ್ಪುಗಳ ಭಾರವನ್ನು ಹೊರಲು ಸಾಧ್ಯವಿಲ್ಲ ಮಹಾರಾಷ್ಟ್ರದ ಹಿಂದಿನ ಸರ್ಕಾರಗಳ ತಪ್ಪುಗಳ ಭಾರವನ್ನು ಈಗಿನ ಸರ್ಕಾರವು ಸಹಿಸುವುದಿಲ್ಲ ಎಂದು ಫಡ್ನವಿಸ್ ಹೇಳಿದರು. ಆದ್ದರಿಂದ, ನಾವು ಸ್ಪಷ್ಟ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ ಮತ್ತು ಪ್ರತಿಪಕ್ಷಗಳು ನಿರಂತರವಾಗಿ ಮಾಡುತ್ತಿರುವ ಆರೋಪಗಳನ್ನು ತಳ್ಳಿಹಾಕುತ್ತೇವೆ ಎಂದರು.

ನೌಕರರ ನೇಮಕಾತಿಯಲ್ಲಿ ಹಗರಣ ನಡೆದಿದ್ದರೆ ತನಿಖೆ ನಡೆಸುತ್ತೇವೆ ಮಹಾರಾಷ್ಟ್ರದ ಹಿಂದಿನ ಸರ್ಕಾರಗಳು ಗುತ್ತಿಗೆ ನೌಕರರ ನೇಮಕಾತಿ ವಿಚಾರದಲ್ಲಿ ಯಾವುದೇ ರೀತಿಯ ಹಗರಣ ನಡೆಸಿದ್ದರೆ ಆ ಬಗ್ಗೆಯೂ ತನಿಖೆ ನಡೆಸುತ್ತೇವೆ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. . ನಾವು ಪ್ರತಿ ಅಪರಾಧದ ಮುಖವಾಡವನ್ನು ತೆಗೆದುಹಾಕುತ್ತೇವೆ ಮತ್ತು ಅದನ್ನು ಬಹಿರಂಗಪಡಿಸುತ್ತೇವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​